<p>ಹಾಸನ: `ಸಮಾಜ ಸರಿದಾರಿಯಲ್ಲಿ ಸಾಗುವಂತೆ ನೋಡಬೇಕಾಗಿರುವ ಜನಪ್ರತಿನಿಧಿಗಳೇ ಅನೇಕ ರಾಷ್ಟ್ರಗಳಲ್ಲಿ ದುಷ್ಟ ಶಕ್ತಿ ಪೋಷಿಸುವ ಕೆಲಸ ಮಾಡುತ್ತಿರುವುದು ಆತಂಕದ ವಿಚಾರ. ಯುವಜನಾಂಗ ಈ ಬಗ್ಗೆ ಎಚ್ಚರವಹಿಸಿ ವಿಶ್ವದಲ್ಲಿ ಶಾಂತಿ ಮಂತ್ರ ಸಾರುವ ಕೆಲಸ ಮಾಡಬೇಕು~ ಎಂದು ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ನುಡಿದರು.<br /> <br /> ರಾಷ್ಟ್ರೀಯ ಸೇವಾ ಯೋಜನೆ, ಯುವಜನ ಸೇವಾ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ವಿಜ್ಞಾನ ಕಾಲೇಜುಗಳ ಆಶ್ರಯದಲ್ಲಿ ನಗರದ ವಿಜ್ಞಾನ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಭಾವೈಕ್ಯ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.<br /> <br /> ರಾಷ್ಟ್ರೀಯ ಸೇವಾ ಯೋಜನೆ ಯಾವುದೇ ಭೇದಭಾವ ಇಲ್ಲದೆ ಜನರ ನಡುವೆ ಭಾವೈಕ್ಯ ಮೂಡಿಸುವ ಕಾರ್ಯ ಮಾಡುತ್ತದೆ. ಜತೆಗೆ ಶಿಸ್ತು ಸಂಯಮ ಕಲಿಸುತ್ತದೆ. ವಿದ್ಯಾರ್ಥಿಗಳು ಇಂಥ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.<br /> <br /> ಶಾಸಕ ಎಚ್.ಎಸ್. ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಸಕಲೇಶಪುರ ಶಾಸಕ ಎಚ್. ಕೆ. ಕುಮಾರಸ್ವಾಮಿ, ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಎ.ಎಲ್. ಮುರಳೀಧರ, ಕಲಾ ಕಾಲೇಜಿನ ಪ್ರಾಂಶುಪಾಲ ಎಚ್.ವಿ. ಲಕ್ಷ್ಮೀನಾರಾಯಣ, ಡಾ. ಡಿ. ಜಿ. ಕೃಷ್ಣೇಗೌಡ, ರಾಮೇಗೌಡ ಇದ್ದರು.<br /> <br /> ಪ್ರೊ. ಕೃಷ್ಣಪ್ಪ ಸ್ವಾಗತಿಸಿದರು. ಶಿಬಿರದ ಅಂಗವಾಗಿ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯಿಂದ ಕಾಲೇಜಿನವರೆಗೆ ಜಾಥಾ ನಡೆಸಲಾಯಿತು. ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್ ಚಾಲನೆ ನೀಡಿದರು. ವಿವಿಧ ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: `ಸಮಾಜ ಸರಿದಾರಿಯಲ್ಲಿ ಸಾಗುವಂತೆ ನೋಡಬೇಕಾಗಿರುವ ಜನಪ್ರತಿನಿಧಿಗಳೇ ಅನೇಕ ರಾಷ್ಟ್ರಗಳಲ್ಲಿ ದುಷ್ಟ ಶಕ್ತಿ ಪೋಷಿಸುವ ಕೆಲಸ ಮಾಡುತ್ತಿರುವುದು ಆತಂಕದ ವಿಚಾರ. ಯುವಜನಾಂಗ ಈ ಬಗ್ಗೆ ಎಚ್ಚರವಹಿಸಿ ವಿಶ್ವದಲ್ಲಿ ಶಾಂತಿ ಮಂತ್ರ ಸಾರುವ ಕೆಲಸ ಮಾಡಬೇಕು~ ಎಂದು ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ನುಡಿದರು.<br /> <br /> ರಾಷ್ಟ್ರೀಯ ಸೇವಾ ಯೋಜನೆ, ಯುವಜನ ಸೇವಾ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ವಿಜ್ಞಾನ ಕಾಲೇಜುಗಳ ಆಶ್ರಯದಲ್ಲಿ ನಗರದ ವಿಜ್ಞಾನ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಭಾವೈಕ್ಯ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.<br /> <br /> ರಾಷ್ಟ್ರೀಯ ಸೇವಾ ಯೋಜನೆ ಯಾವುದೇ ಭೇದಭಾವ ಇಲ್ಲದೆ ಜನರ ನಡುವೆ ಭಾವೈಕ್ಯ ಮೂಡಿಸುವ ಕಾರ್ಯ ಮಾಡುತ್ತದೆ. ಜತೆಗೆ ಶಿಸ್ತು ಸಂಯಮ ಕಲಿಸುತ್ತದೆ. ವಿದ್ಯಾರ್ಥಿಗಳು ಇಂಥ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.<br /> <br /> ಶಾಸಕ ಎಚ್.ಎಸ್. ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಸಕಲೇಶಪುರ ಶಾಸಕ ಎಚ್. ಕೆ. ಕುಮಾರಸ್ವಾಮಿ, ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಎ.ಎಲ್. ಮುರಳೀಧರ, ಕಲಾ ಕಾಲೇಜಿನ ಪ್ರಾಂಶುಪಾಲ ಎಚ್.ವಿ. ಲಕ್ಷ್ಮೀನಾರಾಯಣ, ಡಾ. ಡಿ. ಜಿ. ಕೃಷ್ಣೇಗೌಡ, ರಾಮೇಗೌಡ ಇದ್ದರು.<br /> <br /> ಪ್ರೊ. ಕೃಷ್ಣಪ್ಪ ಸ್ವಾಗತಿಸಿದರು. ಶಿಬಿರದ ಅಂಗವಾಗಿ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯಿಂದ ಕಾಲೇಜಿನವರೆಗೆ ಜಾಥಾ ನಡೆಸಲಾಯಿತು. ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್ ಚಾಲನೆ ನೀಡಿದರು. ವಿವಿಧ ರಾಜ್ಯಗಳಿಂದ ಬಂದ ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>