<p><strong>ಜೋಯಿಡಾ:</strong> ಒಂಟಿ ಸಲಗವೊಂದು ದಾಳಿ ನಡೆಸಿದ್ದರಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ತಾಲ್ಲೂಕಿನ ನಾಗೋಡಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪಾಂಜೇಲಿ ಸಮೀಪದ ಕಾಯಲೋವಾಡಾದಲ್ಲಿ ಭಾನುವಾರ ರಾತ್ರಿ ನಡೆದಿದೆ.<br /> <br /> ಮೃತಪಟ್ಟವರನ್ನು ಮಹಾದೇವ ಅಪ್ಪಾಜಿ ದೇಸಾಯಿ (45) ಎಂದು ಗುರುತಿಸಲಾಗಿದೆ. ಇವರು ಮನೆಗೆ ಹೋಗುವಾಗ ದಾರಿ ಮಧ್ಯೆ ಇರುವ ಬಾಳೆತೋಟದಲ್ಲಿದ್ದ ಆನೆ ದಿಢೀರ್ ದಾಳಿ ನಡೆಸಿದೆ. ಆನೆ ತುಳಿದ ಪರಿಣಾಮ ಮಹಾದೇವ ಅವರ ಎದೆ, ಹೊಟ್ಟೆ ಭಾಗದಲ್ಲಿ ಗಾಯಗಳಾಗಿವೆ.<br /> <br /> ಈ ದುರ್ಘಟನೆ ಅವರ ಮನೆ ಪಕ್ಕದಲ್ಲಿಯೇ ನಡೆದಿದ್ದರೂ ಮನೆಯವರಿಗೆ ವಿಷಯ ಗೊತ್ತಾಗಿರಲಿಲ್ಲ. ಮಹಾದೇವ ಅವರ ಸಹೋದರ ಮುಂಜಾನೆ ಹೊಲಕ್ಕೆ ಹೋದಾಗ ಗೊತ್ತಾಗಿದೆ.<br /> <br /> <strong>ಪರಿಹಾರ:</strong> ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗವು ಮಹಾದೇವ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಅಂತ್ಯ ಸಂಸ್ಕಾರದ ವೆಚ್ಚಕ್ಕೆಂದು ಅರಣ್ಯ ಇಲಾಖೆ ಅಧಿಕಾರಿಗಳು 5,000 ರೂಪಾಯಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೋಯಿಡಾ:</strong> ಒಂಟಿ ಸಲಗವೊಂದು ದಾಳಿ ನಡೆಸಿದ್ದರಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ತಾಲ್ಲೂಕಿನ ನಾಗೋಡಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪಾಂಜೇಲಿ ಸಮೀಪದ ಕಾಯಲೋವಾಡಾದಲ್ಲಿ ಭಾನುವಾರ ರಾತ್ರಿ ನಡೆದಿದೆ.<br /> <br /> ಮೃತಪಟ್ಟವರನ್ನು ಮಹಾದೇವ ಅಪ್ಪಾಜಿ ದೇಸಾಯಿ (45) ಎಂದು ಗುರುತಿಸಲಾಗಿದೆ. ಇವರು ಮನೆಗೆ ಹೋಗುವಾಗ ದಾರಿ ಮಧ್ಯೆ ಇರುವ ಬಾಳೆತೋಟದಲ್ಲಿದ್ದ ಆನೆ ದಿಢೀರ್ ದಾಳಿ ನಡೆಸಿದೆ. ಆನೆ ತುಳಿದ ಪರಿಣಾಮ ಮಹಾದೇವ ಅವರ ಎದೆ, ಹೊಟ್ಟೆ ಭಾಗದಲ್ಲಿ ಗಾಯಗಳಾಗಿವೆ.<br /> <br /> ಈ ದುರ್ಘಟನೆ ಅವರ ಮನೆ ಪಕ್ಕದಲ್ಲಿಯೇ ನಡೆದಿದ್ದರೂ ಮನೆಯವರಿಗೆ ವಿಷಯ ಗೊತ್ತಾಗಿರಲಿಲ್ಲ. ಮಹಾದೇವ ಅವರ ಸಹೋದರ ಮುಂಜಾನೆ ಹೊಲಕ್ಕೆ ಹೋದಾಗ ಗೊತ್ತಾಗಿದೆ.<br /> <br /> <strong>ಪರಿಹಾರ:</strong> ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗವು ಮಹಾದೇವ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಅಂತ್ಯ ಸಂಸ್ಕಾರದ ವೆಚ್ಚಕ್ಕೆಂದು ಅರಣ್ಯ ಇಲಾಖೆ ಅಧಿಕಾರಿಗಳು 5,000 ರೂಪಾಯಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>