<p>ಮಡಿಕೇರಿ: ಆಟೊ ಚಾಲಕರು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಹೊಂದಲು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.<br /> <br /> ನಗರದ ಗಾಂಧಿ ಮೈದಾನದಲ್ಲಿ ಆಟೊ ಮಾಲೀಕರು ಚಾಲಕರ ಸಂಘದ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಗುರುವಾರ ಆಯೋಜಿಸಿದ್ದ ಡಾನ್ಸ್ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಯೊಬ್ಬ ಚಾಲಕರು ಆಟೋಟ, ವ್ಯಾಯಾಮ, ಯೋಗದಲ್ಲಿ ತೊಡಗಿಸಿಕೊಂಡು ಉತ್ತಮ ಜೀವನ ರೂಢಿಸಿಕೊಳ್ಳಿರಿ ಎಂದರು.<br /> <br /> ಆಟೊ ಚಾಲಕರು ಕಾನೂನಿನ ಪರಿಮಿತಿಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಹೀಗಾಗಿ ಆಟೊ ಹಾಗೂ ಚಾಲನೆಗೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳನ್ನು ಹೊಂದಿರಬೇಕು. ಶಿಸ್ತು, ಸಂಯಮದಿಂದ ಕಾರ್ಯ ನಿರ್ವಹಿಸುತ್ತ ಸಾರ್ವಜನಿಕರ ಸೇವೆ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು. <br /> <br /> ಡಿವೈಎಸ್ಪಿ ಜೆ.ಡಿ. ಪ್ರಕಾಶ್ ಮಾತನಾಡಿ, ಆಟೊ ಚಾಲಕರು ಸಂಚಾರಿ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಹಾಗೂ ಸಾರ್ವಜನಿಕರ ಜೊತೆ ಸ್ನೇಹದಿಂದ ವ್ಯವಹರಿಸಬೇಕು. ಅಪರಾಧ ಕೃತ್ಯಗಳು ನಿಮ್ಮ ಗಮನಕ್ಕೆ ಬಂದರೆ ಪೊಲೀಸರಿಗೆ ಮಾಹಿತಿ ನೀಡಿ ಈ ಮೂಲಕ ಅಪರಾಧ ನಿಯಂತ್ರಿಸಲು ನಮ್ಮಂದಿಗೆ ಸಹಕರಿಸಿ ಎಂದರು. <br /> <br /> ತಹಶೀಲ್ದಾರ್ ಬಾಬು ರವೀಂದ್ರನಾಥ್ ಪಟೇಲ್, ಜಿಲ್ಲಾ ಆಟೊ ಮಾಲಿಕರು-ಚಾಲಕರ ಸಂಘದ ಅಧ್ಯಕ್ಷ ಡಿ.ಎಚ್.ಮೇದಪ್ಪ, ನಗರಸಭೆ ಸದಸ್ಯರಾದ ಉನ್ನಿಕೃಷ್ಣ, ಎಂ.ಯು. ಅಶ್ರಫ್, ನಗರ ಆಟೊ ಮಾಲೀಕರು-ಚಾಲಕರ ಸಂಘದ ಅಧ್ಯಕ್ಷ ಎ.ಸಮ್ಮದ್, ಹೋಟೆಲ್ ಮಾಲೀಕ ವಿ.ಎಂ. ಶರೀನ್ ಇತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಆಟೊ ಚಾಲಕರು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಹೊಂದಲು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.<br /> <br /> ನಗರದ ಗಾಂಧಿ ಮೈದಾನದಲ್ಲಿ ಆಟೊ ಮಾಲೀಕರು ಚಾಲಕರ ಸಂಘದ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಗುರುವಾರ ಆಯೋಜಿಸಿದ್ದ ಡಾನ್ಸ್ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಯೊಬ್ಬ ಚಾಲಕರು ಆಟೋಟ, ವ್ಯಾಯಾಮ, ಯೋಗದಲ್ಲಿ ತೊಡಗಿಸಿಕೊಂಡು ಉತ್ತಮ ಜೀವನ ರೂಢಿಸಿಕೊಳ್ಳಿರಿ ಎಂದರು.<br /> <br /> ಆಟೊ ಚಾಲಕರು ಕಾನೂನಿನ ಪರಿಮಿತಿಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಹೀಗಾಗಿ ಆಟೊ ಹಾಗೂ ಚಾಲನೆಗೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳನ್ನು ಹೊಂದಿರಬೇಕು. ಶಿಸ್ತು, ಸಂಯಮದಿಂದ ಕಾರ್ಯ ನಿರ್ವಹಿಸುತ್ತ ಸಾರ್ವಜನಿಕರ ಸೇವೆ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು. <br /> <br /> ಡಿವೈಎಸ್ಪಿ ಜೆ.ಡಿ. ಪ್ರಕಾಶ್ ಮಾತನಾಡಿ, ಆಟೊ ಚಾಲಕರು ಸಂಚಾರಿ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಹಾಗೂ ಸಾರ್ವಜನಿಕರ ಜೊತೆ ಸ್ನೇಹದಿಂದ ವ್ಯವಹರಿಸಬೇಕು. ಅಪರಾಧ ಕೃತ್ಯಗಳು ನಿಮ್ಮ ಗಮನಕ್ಕೆ ಬಂದರೆ ಪೊಲೀಸರಿಗೆ ಮಾಹಿತಿ ನೀಡಿ ಈ ಮೂಲಕ ಅಪರಾಧ ನಿಯಂತ್ರಿಸಲು ನಮ್ಮಂದಿಗೆ ಸಹಕರಿಸಿ ಎಂದರು. <br /> <br /> ತಹಶೀಲ್ದಾರ್ ಬಾಬು ರವೀಂದ್ರನಾಥ್ ಪಟೇಲ್, ಜಿಲ್ಲಾ ಆಟೊ ಮಾಲಿಕರು-ಚಾಲಕರ ಸಂಘದ ಅಧ್ಯಕ್ಷ ಡಿ.ಎಚ್.ಮೇದಪ್ಪ, ನಗರಸಭೆ ಸದಸ್ಯರಾದ ಉನ್ನಿಕೃಷ್ಣ, ಎಂ.ಯು. ಅಶ್ರಫ್, ನಗರ ಆಟೊ ಮಾಲೀಕರು-ಚಾಲಕರ ಸಂಘದ ಅಧ್ಯಕ್ಷ ಎ.ಸಮ್ಮದ್, ಹೋಟೆಲ್ ಮಾಲೀಕ ವಿ.ಎಂ. ಶರೀನ್ ಇತರರು ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>