<p><strong>ದಾವಣಗೆರೆ: </strong>ಕಾರ್ಮಿಕರ ಭವಿಷ್ಯನಿಧಿ ಯೋಜನೆ ಪಿಂಚಣಿದಾರರ ಬೇಡಿಕೆಗಳ ಈಡೇರಿಕೆಗಾಗಿ ಹೈಕೋರ್ಟ್ ಮೊರೆ ಹೋಗಲಾಗುವುದು ಎಂದು ಬೆಳಗಾವಿಯ ಭವಿಷ್ಯನಿಧಿ ಪಿಂಚಣಿದಾರರ ಮಹಾಮಂಡಳದ ಅಧ್ಯಕ್ಷ ಬಿ.ಎಸ್. ಇಂಗಳೆ ತಿಳಿಸಿದರು.<br /> <br /> ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ `ಕಾರ್ಮಿಕರ ಭವಿಷ್ಯನಿಧಿ ಯೋಜನೆ ಪಿಂಚಣಿದಾರರ ಕ್ಷೇಮಾಭಿವೃದ್ಧಿ ಸಂಘ~ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಈಗಾಗಲೇ ನಿರಂತರ ಹೋರಾಟದ ಮೂಲಕ ಒತ್ತಡ ತರಲಾಗಿದೆ. ನ್ಯಾಯಾಂಗದ ಮೂಲಕವೂ ಪ್ರಯತ್ನ ಮುಂದುವರಿಸಲಾಗುವುದು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆದಿದೆ ಎಂದು ಹೇಳಿದರು.<br /> <br /> ಮಾಸಿಕ ಕನಿಷ್ಠ ರೂ 5 ಸಾವಿರ ಪಿಂಚಣಿ ನಿಗದಿಪಡಿಸಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿವೃತ್ತ ನೌಕರರಿಗೆ ಸೂಚ್ಯಂಕದ ಆಧಾರದ ಮೇಲೆ ಪಿಂಚಣಿ ನಿಗದಿಪಡಿಸಿದಂತೆ, ಭವಿಷ್ಯನಿಧಿ ಯೋಜನೆಯಡಿ ಬರುವ ಪಿಂಚಣಿದಾರರಿಗೂ ಕಾಲಕಾಲಕ್ಕೆ ಪಿಂಚಣಿ ಪರಿಷ್ಕರಣೆಯಾಗಬೇಕು ಎಂದು ಅವರು ಆಗ್ರಹಿಸಿದರು.<br /> <br /> ಪ್ರಸ್ತುತ ರೂ 1,600 ಪಿಂಚಣಿ ದೊರೆಯುತ್ತಿದೆ. ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಈ ಹಣ ಸಾಕಾಗುವುದಿಲ್ಲ. ಅದನ್ನು ಹೆಚ್ಚಿಸುವಂತೆ ಒಂದೂವರೆ ವರ್ಷದಿಂದ ಹೋರಾಟ ನಡೆಸಿರುವುದಾಗಿ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಕಾರ್ಮಿಕರ ಭವಿಷ್ಯನಿಧಿ ಯೋಜನೆ ಪಿಂಚಣಿದಾರರ ಬೇಡಿಕೆಗಳ ಈಡೇರಿಕೆಗಾಗಿ ಹೈಕೋರ್ಟ್ ಮೊರೆ ಹೋಗಲಾಗುವುದು ಎಂದು ಬೆಳಗಾವಿಯ ಭವಿಷ್ಯನಿಧಿ ಪಿಂಚಣಿದಾರರ ಮಹಾಮಂಡಳದ ಅಧ್ಯಕ್ಷ ಬಿ.ಎಸ್. ಇಂಗಳೆ ತಿಳಿಸಿದರು.<br /> <br /> ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ `ಕಾರ್ಮಿಕರ ಭವಿಷ್ಯನಿಧಿ ಯೋಜನೆ ಪಿಂಚಣಿದಾರರ ಕ್ಷೇಮಾಭಿವೃದ್ಧಿ ಸಂಘ~ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಈಗಾಗಲೇ ನಿರಂತರ ಹೋರಾಟದ ಮೂಲಕ ಒತ್ತಡ ತರಲಾಗಿದೆ. ನ್ಯಾಯಾಂಗದ ಮೂಲಕವೂ ಪ್ರಯತ್ನ ಮುಂದುವರಿಸಲಾಗುವುದು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆದಿದೆ ಎಂದು ಹೇಳಿದರು.<br /> <br /> ಮಾಸಿಕ ಕನಿಷ್ಠ ರೂ 5 ಸಾವಿರ ಪಿಂಚಣಿ ನಿಗದಿಪಡಿಸಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿವೃತ್ತ ನೌಕರರಿಗೆ ಸೂಚ್ಯಂಕದ ಆಧಾರದ ಮೇಲೆ ಪಿಂಚಣಿ ನಿಗದಿಪಡಿಸಿದಂತೆ, ಭವಿಷ್ಯನಿಧಿ ಯೋಜನೆಯಡಿ ಬರುವ ಪಿಂಚಣಿದಾರರಿಗೂ ಕಾಲಕಾಲಕ್ಕೆ ಪಿಂಚಣಿ ಪರಿಷ್ಕರಣೆಯಾಗಬೇಕು ಎಂದು ಅವರು ಆಗ್ರಹಿಸಿದರು.<br /> <br /> ಪ್ರಸ್ತುತ ರೂ 1,600 ಪಿಂಚಣಿ ದೊರೆಯುತ್ತಿದೆ. ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಈ ಹಣ ಸಾಕಾಗುವುದಿಲ್ಲ. ಅದನ್ನು ಹೆಚ್ಚಿಸುವಂತೆ ಒಂದೂವರೆ ವರ್ಷದಿಂದ ಹೋರಾಟ ನಡೆಸಿರುವುದಾಗಿ ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>