<p>ದಾವಣಗೆರೆ: ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ವಾರ್ಷಿಕ ಕ್ರೀಡಾಕೂಟ ಕಡ್ಡಾಯಗೊಳಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ ಅಭಿಪ್ರಾಯಪಟ್ಟರು.<br /> <br /> ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಗರದ ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಶುಕ್ರವಾರ ಆರಂಭಗೊಂಡ ದ್ವಿತೀಯ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಬಹುತೇಕ ಸರ್ಕಾರಿ ನೌಕರರು ಆಲಸ್ಯ ಮೈಗೂಡಿಸಿಕೊಂಡಿರುತ್ತಾರೆ. ಇದನ್ನು ಹೋಗಲಾಡಿಸಲು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ ಅಗತ್ಯ. ಕ್ರೀಡಾ ಮನೋಭಾವದಿಂದ ಕ್ರಿಯಾಶೀಲತೆ ಬೆಳೆಯುತ್ತದೆ ಎಂದರು.<br /> <br /> ಬದಲಾದ ಜೀವನಶೈಲಿಯ ಪರಿಣಾಮ, 40 ವರ್ಷ ವಯಸ್ಸಿನ ಆಸುಪಾಸಿನಲ್ಲಿಯೇ ರಕ್ತದೊತ್ತಡ, ಮಧುಮೇಹ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಇದನ್ನು ತಡೆದು, ಆರೋಗ್ಯ ಸುಧಾರಿಸಿಕೊಳ್ಳಲು ಕ್ರೀಡೆ ಅಗತ್ಯ ಎಂದರು.<br /> <br /> ಕ್ರೀಡಾಕೂಟ ಉದ್ಘಾಟಿಸಿದ ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ಅಧ್ಯಕ್ಷ ಎ.ಸಿ. ಜಯಣ್ಣ, ಎಷ್ಟೇ ಹಣ ಖರ್ಚು ಮಾಡಿದರೂ ಮಾಲಿನ್ಯ ಪ್ರಮಾಣ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಇತರ ಕೆಲಸಗಳಿಗೆ ಕೋಟಿಗಟ್ಟಲೆ ವ್ಯಯ ಮಾಡುವ ಬದಲಿಗೆ, ಹಲವು ರೋಗಗಳಿಗೆ ಕಾರಣವಾಗುತ್ತಿರುವ ಸೊಳ್ಳೆಗಳನ್ನು ನಿರ್ಮೂಲನೆ ಮಾಡಬೇಕು ಎಂದರು.<br /> <br /> ಮೇಯರ್ ಎಚ್.ಎನ್. ಗುರುನಾಥ್ ಮಾತನಾಡಿ, ನಗರದಲ್ಲಿ ಮಂಡಕ್ಕಿ ಬಟ್ಟಿಗಳು ಮತ್ತಿತರ ಕಾರಣದಿಂದ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕೆ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಹೆಚ್ಚಿನ ಗಮನಹರಿಸಲಿ ಎಂದು ಆಶಿಸಿದರು.<br /> <br /> ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಮಾತನಾಡಿದರು. ಮಂಡಳಿಯ ಹಿರಿಯ ಪರಿಸರ ಅಧಿಕಾರಿ ನಂದಕುಮಾರ್ ಸ್ಪರ್ಧಿಗಳ ಪರವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಿಐಇಟಿ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಸ್. ಮಂಜಪ್ಪ ಉಪಸ್ಥಿತರಿದ್ದರು.<br /> <br /> ಮಂಡಳಿಯ ಸದಸ್ಯಕಾರ್ಯದರ್ಶಿ ಎಸ್.ಎಂ. ಪುಟ್ಟಬುದ್ಧಿ ಸ್ವಾಗತಿಸಿದರು. ಅಧ್ಯಕ್ಷ ಎ.ಎಸ್. ಸದಾಶಿವಯ್ಯ ಪ್ರಾಸ್ತಾವಿಕ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ವಾರ್ಷಿಕ ಕ್ರೀಡಾಕೂಟ ಕಡ್ಡಾಯಗೊಳಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ ಅಭಿಪ್ರಾಯಪಟ್ಟರು.<br /> <br /> ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಗರದ ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯ ಕ್ರೀಡಾಂಗಣದಲ್ಲಿ ಶುಕ್ರವಾರ ಆರಂಭಗೊಂಡ ದ್ವಿತೀಯ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಬಹುತೇಕ ಸರ್ಕಾರಿ ನೌಕರರು ಆಲಸ್ಯ ಮೈಗೂಡಿಸಿಕೊಂಡಿರುತ್ತಾರೆ. ಇದನ್ನು ಹೋಗಲಾಡಿಸಲು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ ಅಗತ್ಯ. ಕ್ರೀಡಾ ಮನೋಭಾವದಿಂದ ಕ್ರಿಯಾಶೀಲತೆ ಬೆಳೆಯುತ್ತದೆ ಎಂದರು.<br /> <br /> ಬದಲಾದ ಜೀವನಶೈಲಿಯ ಪರಿಣಾಮ, 40 ವರ್ಷ ವಯಸ್ಸಿನ ಆಸುಪಾಸಿನಲ್ಲಿಯೇ ರಕ್ತದೊತ್ತಡ, ಮಧುಮೇಹ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಇದನ್ನು ತಡೆದು, ಆರೋಗ್ಯ ಸುಧಾರಿಸಿಕೊಳ್ಳಲು ಕ್ರೀಡೆ ಅಗತ್ಯ ಎಂದರು.<br /> <br /> ಕ್ರೀಡಾಕೂಟ ಉದ್ಘಾಟಿಸಿದ ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ಅಧ್ಯಕ್ಷ ಎ.ಸಿ. ಜಯಣ್ಣ, ಎಷ್ಟೇ ಹಣ ಖರ್ಚು ಮಾಡಿದರೂ ಮಾಲಿನ್ಯ ಪ್ರಮಾಣ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಇತರ ಕೆಲಸಗಳಿಗೆ ಕೋಟಿಗಟ್ಟಲೆ ವ್ಯಯ ಮಾಡುವ ಬದಲಿಗೆ, ಹಲವು ರೋಗಗಳಿಗೆ ಕಾರಣವಾಗುತ್ತಿರುವ ಸೊಳ್ಳೆಗಳನ್ನು ನಿರ್ಮೂಲನೆ ಮಾಡಬೇಕು ಎಂದರು.<br /> <br /> ಮೇಯರ್ ಎಚ್.ಎನ್. ಗುರುನಾಥ್ ಮಾತನಾಡಿ, ನಗರದಲ್ಲಿ ಮಂಡಕ್ಕಿ ಬಟ್ಟಿಗಳು ಮತ್ತಿತರ ಕಾರಣದಿಂದ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕೆ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಹೆಚ್ಚಿನ ಗಮನಹರಿಸಲಿ ಎಂದು ಆಶಿಸಿದರು.<br /> <br /> ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಮಾತನಾಡಿದರು. ಮಂಡಳಿಯ ಹಿರಿಯ ಪರಿಸರ ಅಧಿಕಾರಿ ನಂದಕುಮಾರ್ ಸ್ಪರ್ಧಿಗಳ ಪರವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಿಐಇಟಿ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಸ್. ಮಂಜಪ್ಪ ಉಪಸ್ಥಿತರಿದ್ದರು.<br /> <br /> ಮಂಡಳಿಯ ಸದಸ್ಯಕಾರ್ಯದರ್ಶಿ ಎಸ್.ಎಂ. ಪುಟ್ಟಬುದ್ಧಿ ಸ್ವಾಗತಿಸಿದರು. ಅಧ್ಯಕ್ಷ ಎ.ಎಸ್. ಸದಾಶಿವಯ್ಯ ಪ್ರಾಸ್ತಾವಿಕ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>