ಮಂಗಳೂರು: ಇಲ್ಲಿಗೆ ಸಮೀಪದ ತೋಕೂರಿನ ಎಂಆರ್ಪಿಎಲ್ ಮೂರನೇ ಘಟಕದಲ್ಲಿ ಮಂಗಳವಾರ ಮಧ್ಯಾಹ್ನ ಸ್ಫೋಟ ಸಂಭವಿಸಿ ಒಬ್ಬ ಗುತ್ತಿಗೆ ಕಾರ್ಮಿಕ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ.
ಮೃತನನ್ನು ಬಿಹಾರ ಮೂಲದ ಮುನ್ನಾ ಎಂದು ಗುರುತಿಸಲಾಗಿದೆ. ಬೀದರ್ನ ರಹೀಂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಿಬ್ಬರನ್ನು ಸುರತ್ಕಲ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಮಗಾರಿಯ ಗುತ್ತಿಗೆ ಪಡೆದ ಆಪ್ಮೋರ್ ಕಂಪೆನಿಯ ಕಚ್ಚಾ ತೈಲದ ಟ್ಯಾಂಕರ್ಗೆ ಪೈಂಟಿಂಗ್ ಮಾಡುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.