ಐಗೂರು ಗ್ರಾಮದ ಮಲ್ಲೇಶ್ (ಈರಪ್ಪ ಶೆಟ್ಟಿ) ಕಾಡಾನೆ ದಾಳಿಗೆ ಸಿಲುಕಿ ಬೆನ್ನು ಮೂಳೆ ಮುರಿದುಕೊಂಡಿದ್ದಾರೆ. ಅಲ್ಲದೆ ಎದೆ ಹಾಗೂ ಹೊಟ್ಟೆಗೆ ತೀವ್ರವಾದ ಪೆಟ್ಟು ಬಿದ್ದಿದೆ. ಇವರನ್ನು ಇಲ್ಲಿಯ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ಕಳುಹಿಸಲಾಯಿತು. ಇವರೊಂದಿಗೆ ಕೆಲಸಕ್ಕೆ ಹೋಗುತ್ತಿದ್ದ ಸೋಮ ಹಾಗೂ ಗುರು ಎಂಬುವರು ಆನೆಯಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕೈ ಕಾಲುಗಳಿಗೆ ಸಣ್ಣ ಪ್ರಮಾಣದಲ್ಲಿ ಗಾಯವಾಗಿದೆ.