<p>ಅಥಣಿ: `ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಖಿಳೆಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿ, 600 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಘೋಷಿಸಿದರು. <br /> <br /> ತಾಲ್ಲೂಕಿನ ಕಟಗೇರಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ ಹತ್ತಿರ ಭಾನುವಾರ ಹಿಪ್ಪರಗಿ ನೀರಾವರಿ ಯೋಜನೆಯ ಹಲ್ಯಾಳ, ಕರಿಮಸೂತಿ ಏತ ನೀರಾವರಿ ಯೋಜನೆಯನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. `ತಾಲ್ಲೂಕಿನ ಉತ್ತರ ಗಡಿ ಭಾಗದ 22 ಗ್ರಾಮಗಳ ಸುಮಾರು 70,000 ಎಕರೆ ಭೂಮಿಗೆ ನೀರಾವರಿ ಸೌಕರ್ಯ ಒದಗಿಸುವ ಬಸವೇಶ್ವರ ಏತ ನೀರಾವರಿ ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲಾಗುವುದು~ ಎಂದರು.<br /> <strong><br /> ಕೃಷಿ ಕಾಲೇಜಿಗೆ ಒಪ್ಪಿಗೆ</strong>: ಅಥಣಿ ಶಾಸಕ ಲಕ್ಷ್ಮಣ ಸವದಿ ಮನವಿಗೆ ಸ್ಪಂದಿಸಿದ ಶೆಟ್ಟರ್, `ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪನೆಗೆ ಒಪ್ಪಿಗೆ ನೀಡಲಾಗುವುದು. ಕೃಷಿ ಇಲಾಖೆಯಿಂದ ಈ ಕುರಿತು ಪ್ರಸ್ತಾವ ಬಂದ ತಕ್ಷಣವೇ ಮಂಜೂರಾತಿ ನೀಡಲಾಗುವುದು. <br /> <br /> `ನವೆಂಬರ್- ಡಿಸೆಂಬರ್ನಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲಾಗುವುದು. ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಆಗಿರುವ ಅಭಿವೃದ್ಧಿಯನ್ನು ನೋಡಿ ಪಕ್ಕದ ಮಹಾರಾಷ್ಟ್ರದ ಅನೇಕ ಹಳ್ಳಿಗಳು ರಾಜ್ಯಕ್ಕೆ ಸೇರ್ಪಡೆಯಾಗಲು ನಿರ್ಣಯ ಅಂಗೀಕರಿಸಿವೆ~ ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಥಣಿ: `ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಖಿಳೆಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿ, 600 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಘೋಷಿಸಿದರು. <br /> <br /> ತಾಲ್ಲೂಕಿನ ಕಟಗೇರಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ ಹತ್ತಿರ ಭಾನುವಾರ ಹಿಪ್ಪರಗಿ ನೀರಾವರಿ ಯೋಜನೆಯ ಹಲ್ಯಾಳ, ಕರಿಮಸೂತಿ ಏತ ನೀರಾವರಿ ಯೋಜನೆಯನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. `ತಾಲ್ಲೂಕಿನ ಉತ್ತರ ಗಡಿ ಭಾಗದ 22 ಗ್ರಾಮಗಳ ಸುಮಾರು 70,000 ಎಕರೆ ಭೂಮಿಗೆ ನೀರಾವರಿ ಸೌಕರ್ಯ ಒದಗಿಸುವ ಬಸವೇಶ್ವರ ಏತ ನೀರಾವರಿ ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲಾಗುವುದು~ ಎಂದರು.<br /> <strong><br /> ಕೃಷಿ ಕಾಲೇಜಿಗೆ ಒಪ್ಪಿಗೆ</strong>: ಅಥಣಿ ಶಾಸಕ ಲಕ್ಷ್ಮಣ ಸವದಿ ಮನವಿಗೆ ಸ್ಪಂದಿಸಿದ ಶೆಟ್ಟರ್, `ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪನೆಗೆ ಒಪ್ಪಿಗೆ ನೀಡಲಾಗುವುದು. ಕೃಷಿ ಇಲಾಖೆಯಿಂದ ಈ ಕುರಿತು ಪ್ರಸ್ತಾವ ಬಂದ ತಕ್ಷಣವೇ ಮಂಜೂರಾತಿ ನೀಡಲಾಗುವುದು. <br /> <br /> `ನವೆಂಬರ್- ಡಿಸೆಂಬರ್ನಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲಾಗುವುದು. ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಆಗಿರುವ ಅಭಿವೃದ್ಧಿಯನ್ನು ನೋಡಿ ಪಕ್ಕದ ಮಹಾರಾಷ್ಟ್ರದ ಅನೇಕ ಹಳ್ಳಿಗಳು ರಾಜ್ಯಕ್ಕೆ ಸೇರ್ಪಡೆಯಾಗಲು ನಿರ್ಣಯ ಅಂಗೀಕರಿಸಿವೆ~ ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>