<p>ಚಿತ್ರದುರ್ಗ: ವಾಹನ ಕಳ್ಳತನ ತಡೆಯಲು ಲಾಕಿಂಗ್ ವಿನ್ಯಾಸ ಬದಲಾಯಿಸುವಂತೆ ಕಂಪೆನಿಗಳಿಗೆ ಪತ್ರ ಬರೆಯಲಾಗುವುದು ಮತ್ತು ಕುಖ್ಯಾತ ಕಳ್ಳರನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗುವುದು ಎಂದು ಪೂರ್ವ ವಲಯ ಐಜಿಪಿ ಎಚ್.ಎನ್. ಸತ್ಯನಾರಾಯಣ ರಾವ್ ತಿಳಿಸಿದರು.<br /> <br /> ಜಿಲ್ಲಾ ಪಂಚಾಯ್ತಿ ಕಚೇರಿ ಕಟ್ಟಡದಲ್ಲಿ ಸೋಮವಾರ ನಡೆದ ವಾಹನ ಕಳವು ಪ್ರಕರಣಗಳ ಬಗ್ಗೆ ಅಂತರ್ಜಿಲ್ಲಾ ಸಮಾವೇಶ ಮತ್ತು ಗಡಿ ಅಪರಾಧ ಸಭೆಯ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.<br /> <br /> ಹಲವು ಅಪರಾಧಿಗಳು ಸ್ಥಳೀಯವಾಗಿ ಯಾವುದೇ ಕೃತ್ಯಗಳನ್ನು ಎಸಗುತ್ತಿಲ್ಲ. ಬೇರೆ ಸ್ಥಳಗಳಲ್ಲಿ ಅಪರಾಧ ಎಸಗುತ್ತಿದ್ದು, ಸ್ಥಳೀಯವಾಗಿ ಉತ್ತಮ ಅಭಿಪ್ರಾಯ ಬೆಳೆಸಿಕೊಂಡ ಉದಾಹರಣೆಗಳಿವೆ. ಕುಖ್ಯಾತ ತಂಡಗಳಲ್ಲಿ ಅಂತರ್ರಾಜ್ಯ ಗ್ಯಾಂಗ್ಗಳು ಸೇರಿಕೊಂಡಿವೆ. ಸಭೆಯಲ್ಲಿ ಈ ವಿಷಯದ ಬಗ್ಗೆ ಪ್ರಮುಖವಾಗಿ ಚರ್ಚೆಯಾಯಿತು ಎಂದು ಮಾಹಿತಿ ನೀಡಿದರು.<br /> <br /> ಹೊಸ ವಾಹನಗಳನ್ನು ಕದಿಯಲಾಗುತ್ತದೆ. ಕೇವಲ ಒಂದು ವರ್ಷದ ವಾಹನವನ್ನು ಸಹ ನಕಲಿ ಬೀಗ ಬಳಸಿ ಕದಿಯಬಹುದಾಗಿದೆ. ಆದ್ದರಿಂದ ಲಾಕಿಂಗ್ ವ್ಯವಸ್ಥೆಯ ತಂತ್ರಜ್ಞಾನ ವಿನ್ಯಾಸವನ್ನು ಬದಲಾಯಿಸುವಂತೆ ಕಂಪೆನಿಗಳಿಗೆ ಪತ್ರ ಬರೆಯಲಾಗುವುದು ಎಂದರು.<br /> <br /> ಇತ್ತೀಚೆಗೆ ಅಪರಾಧ ಕೃತ್ಯಗಳು ಹೊಸ ರೀತಿಯಲ್ಲಿ ನಡೆಯುತ್ತಿವೆ. ಕೆಲವರು ಆಕರ್ಷಕ ಬಹುಮಾನ ನೀಡುತ್ತೇವೆ ಎಂದು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಕಲಿ ಚಿನ್ನದ ಪ್ರಕರಣಗಳ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಿದರೂ ಪದೇ ಪದೇ ಇಂತಹ ಪ್ರಕರಣಗಳು ನಡೆಯುತ್ತಿವೆ ಎಂದರು.<br /> <br /> ತುಮಕೂರು, ಚಿತ್ರದುರ್ಗ, ರಾಯಚೂರು, ಕೊಪ್ಪಳ, ಉಡುಪಿ, ಕಾರವಾರ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ವಾಹನ ಕಳ್ಳತನ ತಡೆಯಲು ಲಾಕಿಂಗ್ ವಿನ್ಯಾಸ ಬದಲಾಯಿಸುವಂತೆ ಕಂಪೆನಿಗಳಿಗೆ ಪತ್ರ ಬರೆಯಲಾಗುವುದು ಮತ್ತು ಕುಖ್ಯಾತ ಕಳ್ಳರನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗುವುದು ಎಂದು ಪೂರ್ವ ವಲಯ ಐಜಿಪಿ ಎಚ್.ಎನ್. ಸತ್ಯನಾರಾಯಣ ರಾವ್ ತಿಳಿಸಿದರು.<br /> <br /> ಜಿಲ್ಲಾ ಪಂಚಾಯ್ತಿ ಕಚೇರಿ ಕಟ್ಟಡದಲ್ಲಿ ಸೋಮವಾರ ನಡೆದ ವಾಹನ ಕಳವು ಪ್ರಕರಣಗಳ ಬಗ್ಗೆ ಅಂತರ್ಜಿಲ್ಲಾ ಸಮಾವೇಶ ಮತ್ತು ಗಡಿ ಅಪರಾಧ ಸಭೆಯ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.<br /> <br /> ಹಲವು ಅಪರಾಧಿಗಳು ಸ್ಥಳೀಯವಾಗಿ ಯಾವುದೇ ಕೃತ್ಯಗಳನ್ನು ಎಸಗುತ್ತಿಲ್ಲ. ಬೇರೆ ಸ್ಥಳಗಳಲ್ಲಿ ಅಪರಾಧ ಎಸಗುತ್ತಿದ್ದು, ಸ್ಥಳೀಯವಾಗಿ ಉತ್ತಮ ಅಭಿಪ್ರಾಯ ಬೆಳೆಸಿಕೊಂಡ ಉದಾಹರಣೆಗಳಿವೆ. ಕುಖ್ಯಾತ ತಂಡಗಳಲ್ಲಿ ಅಂತರ್ರಾಜ್ಯ ಗ್ಯಾಂಗ್ಗಳು ಸೇರಿಕೊಂಡಿವೆ. ಸಭೆಯಲ್ಲಿ ಈ ವಿಷಯದ ಬಗ್ಗೆ ಪ್ರಮುಖವಾಗಿ ಚರ್ಚೆಯಾಯಿತು ಎಂದು ಮಾಹಿತಿ ನೀಡಿದರು.<br /> <br /> ಹೊಸ ವಾಹನಗಳನ್ನು ಕದಿಯಲಾಗುತ್ತದೆ. ಕೇವಲ ಒಂದು ವರ್ಷದ ವಾಹನವನ್ನು ಸಹ ನಕಲಿ ಬೀಗ ಬಳಸಿ ಕದಿಯಬಹುದಾಗಿದೆ. ಆದ್ದರಿಂದ ಲಾಕಿಂಗ್ ವ್ಯವಸ್ಥೆಯ ತಂತ್ರಜ್ಞಾನ ವಿನ್ಯಾಸವನ್ನು ಬದಲಾಯಿಸುವಂತೆ ಕಂಪೆನಿಗಳಿಗೆ ಪತ್ರ ಬರೆಯಲಾಗುವುದು ಎಂದರು.<br /> <br /> ಇತ್ತೀಚೆಗೆ ಅಪರಾಧ ಕೃತ್ಯಗಳು ಹೊಸ ರೀತಿಯಲ್ಲಿ ನಡೆಯುತ್ತಿವೆ. ಕೆಲವರು ಆಕರ್ಷಕ ಬಹುಮಾನ ನೀಡುತ್ತೇವೆ ಎಂದು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಕಲಿ ಚಿನ್ನದ ಪ್ರಕರಣಗಳ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಿದರೂ ಪದೇ ಪದೇ ಇಂತಹ ಪ್ರಕರಣಗಳು ನಡೆಯುತ್ತಿವೆ ಎಂದರು.<br /> <br /> ತುಮಕೂರು, ಚಿತ್ರದುರ್ಗ, ರಾಯಚೂರು, ಕೊಪ್ಪಳ, ಉಡುಪಿ, ಕಾರವಾರ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>