<p><strong>ಧಾರವಾಡ:</strong> `ಏಕಾಂತದಲ್ಲಿ ಲೀನವಾಗಿ ಲೋಕಾಂತವನ್ನು ಮರೆಯುವ, ಲೋಕಾಂತದಲ್ಲಿ ಲೀನವಾಗಿ ಏಕಾಂತವನ್ನು ಮರೆಯುವ ಬರಹ ಕಾವ್ಯವಾಗುವುದಿಲ್ಲ. ಅದು ಏಕಾಂತ ಹಾಗೂ ಲೋಕಾಂತ ನಡುವಿನ ಸೇತುವೆ ಆಗಬೇಕು~ ಎಂದು ಹಿರಿಯ ವಿಮರ್ಶಕ ಡಾ.ಎಚ್.ಎಸ್. ರಾಘವೇಂದ್ರ ರಾವ್ ಸಲಹೆ ನೀಡಿದರು.<br /> <br /> ದಿವಂಗತ ವಿಭಾ ತಿರಕಪಡಿ ಸ್ಮರಣಾರ್ಥ ಗದುಗಿನ ಲಡಾಯಿ ಪ್ರಕಾಶನವು ಕವನ ಸಂಕಲನಕ್ಕೆ ನೀಡುವ `ವಿಭಾ ಸಾಹಿತ್ಯ ಪ್ರಶಸ್ತಿ~ಯನ್ನು ಇಲ್ಲಿಯ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಚನ್ನಪ್ಪ ಅಂಗಡಿ ಅವರಿಗೆ ಭಾನುವಾರ ಪ್ರದಾನ ಮಾಡಿ ಅವರು ಮಾತನಾಡಿದರು. <br /> <br /> `ಅರ್ಥದ ದಾರಿ, ನಾದದ ದಾರಿ ಹಾಗೂ ರೂಪಕಗಳ ದಾರಿಗಳು ಏಕಕಾಲದಲ್ಲಿ ಮೇಳೈಸಿದ ಕಾವ್ಯ, ಕಾಲಬದ್ಧವಾಗಿಯೂ ಕಾಲಾತೀತವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.ವಿಭಾ ಸಾಹಿತ್ಯ ಪ್ರಶಸ್ತಿ ಪಡೆದ ಚನ್ನಪ್ಪ ಅಂಗಡಿ ಅವರ `ಭೂಮಿ ತಿರುಗುವ ಶಬ್ದ~ ಕವನ ಸಂಕಲನವನ್ನು ಹಿರಿಯ ಕವಿ ಎಸ್.ಜಿ. ಸಿದ್ಧರಾಮಯ್ಯ ಬಿಡುಗಡೆ ಮಾಡಿ ಮಾತನಾಡಿ, ಜಾಗತೀಕರಣ ಹುಟ್ಟುಹಾಕಿದ ಸಾಂಸ್ಕೃತಿಕ ಬಿಕ್ಕಟ್ಟುಗಳಿಗೆ ದೇಸಿ ಸಂವೇದನೆಯಲ್ಲಿ ಪರ್ಯಾಯ ಗುರುತಿಸಬೇಕೆಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಹಿರಿಯ ಕವಯಿತ್ರಿ ಸವಿತಾ ನಾಗಭೂಷಣ, ಪ್ರತಿಯೊಬ್ಬ ಕವಿಗೆ ಬೇರೆ ಭಾಷೆಯೇ ಇರುತ್ತದೆ. ಅದು ಆಯಾ ಕವಿಯ ಹೃದಯ ಭಾಷೆ ಎಂದರು.ಲಡಾಯಿ ಪ್ರಕಾಶನದ ಬಸೂ, ಪ್ರಶಸ್ತಿ ಸಮಿತಿ ಸಂಚಾಲಕಿ ಸುನಂದಾ ಕಡಮೆ ವೇದಿಕೆ ಮೇಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> `ಏಕಾಂತದಲ್ಲಿ ಲೀನವಾಗಿ ಲೋಕಾಂತವನ್ನು ಮರೆಯುವ, ಲೋಕಾಂತದಲ್ಲಿ ಲೀನವಾಗಿ ಏಕಾಂತವನ್ನು ಮರೆಯುವ ಬರಹ ಕಾವ್ಯವಾಗುವುದಿಲ್ಲ. ಅದು ಏಕಾಂತ ಹಾಗೂ ಲೋಕಾಂತ ನಡುವಿನ ಸೇತುವೆ ಆಗಬೇಕು~ ಎಂದು ಹಿರಿಯ ವಿಮರ್ಶಕ ಡಾ.ಎಚ್.ಎಸ್. ರಾಘವೇಂದ್ರ ರಾವ್ ಸಲಹೆ ನೀಡಿದರು.<br /> <br /> ದಿವಂಗತ ವಿಭಾ ತಿರಕಪಡಿ ಸ್ಮರಣಾರ್ಥ ಗದುಗಿನ ಲಡಾಯಿ ಪ್ರಕಾಶನವು ಕವನ ಸಂಕಲನಕ್ಕೆ ನೀಡುವ `ವಿಭಾ ಸಾಹಿತ್ಯ ಪ್ರಶಸ್ತಿ~ಯನ್ನು ಇಲ್ಲಿಯ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಚನ್ನಪ್ಪ ಅಂಗಡಿ ಅವರಿಗೆ ಭಾನುವಾರ ಪ್ರದಾನ ಮಾಡಿ ಅವರು ಮಾತನಾಡಿದರು. <br /> <br /> `ಅರ್ಥದ ದಾರಿ, ನಾದದ ದಾರಿ ಹಾಗೂ ರೂಪಕಗಳ ದಾರಿಗಳು ಏಕಕಾಲದಲ್ಲಿ ಮೇಳೈಸಿದ ಕಾವ್ಯ, ಕಾಲಬದ್ಧವಾಗಿಯೂ ಕಾಲಾತೀತವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.ವಿಭಾ ಸಾಹಿತ್ಯ ಪ್ರಶಸ್ತಿ ಪಡೆದ ಚನ್ನಪ್ಪ ಅಂಗಡಿ ಅವರ `ಭೂಮಿ ತಿರುಗುವ ಶಬ್ದ~ ಕವನ ಸಂಕಲನವನ್ನು ಹಿರಿಯ ಕವಿ ಎಸ್.ಜಿ. ಸಿದ್ಧರಾಮಯ್ಯ ಬಿಡುಗಡೆ ಮಾಡಿ ಮಾತನಾಡಿ, ಜಾಗತೀಕರಣ ಹುಟ್ಟುಹಾಕಿದ ಸಾಂಸ್ಕೃತಿಕ ಬಿಕ್ಕಟ್ಟುಗಳಿಗೆ ದೇಸಿ ಸಂವೇದನೆಯಲ್ಲಿ ಪರ್ಯಾಯ ಗುರುತಿಸಬೇಕೆಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಹಿರಿಯ ಕವಯಿತ್ರಿ ಸವಿತಾ ನಾಗಭೂಷಣ, ಪ್ರತಿಯೊಬ್ಬ ಕವಿಗೆ ಬೇರೆ ಭಾಷೆಯೇ ಇರುತ್ತದೆ. ಅದು ಆಯಾ ಕವಿಯ ಹೃದಯ ಭಾಷೆ ಎಂದರು.ಲಡಾಯಿ ಪ್ರಕಾಶನದ ಬಸೂ, ಪ್ರಶಸ್ತಿ ಸಮಿತಿ ಸಂಚಾಲಕಿ ಸುನಂದಾ ಕಡಮೆ ವೇದಿಕೆ ಮೇಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>