<p>ಶ್ರೀರಂಗಪಟ್ಟಣ: ಕೆಆರ್ಎಸ್ ಜಲಾಶಯ ಶೀಘ್ರ ಭರ್ತಿಯಾಗಲಿ ಎಂದು ಹಾರೈಸಿ ಶಾಸಕರಾದ ರಮೇಶ ಬಂಡಿಸಿದ್ದೇಗೌಡ ಹಾಗೂ ಸಿ.ಎಸ್.ಪುಟ್ಟರಾಜು ಬುಧವಾರ ಜಲಾಶಯದ ಕಾವೇರಿ ಮಾತೆ ಪ್ರತಿಮೆ ಬಳಿ ನವಗ್ರಹ ಹೋಮ ನಡೆಸಿದರು.<br /> <br /> ಬೆಂಬಲಿಗರ ಜತೆ ಇಲ್ಲಿಗೆ ಆಗಮಿಸಿದ ಶಾಸಕದ್ವಯರು ಸುಮಾರು ಒಂದೂವರೆ ತಾಸು ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ನಾಗೇಂದ್ರ ಪ್ರಸಾದ್ ಅಯ್ಯರ್ ನೇತೃತ್ವದ ವೈದಿಕರ ತಂಡ ನವಗ್ರಹ ಹೋಮ, ಗಣಪತಿ ಪೂಜೆ ಇತರ ಪೂಜಾ ಕೈಂಕರ್ಯಗಳನ್ನು ನಡೆಸಿಕೊಟ್ಟಿತು.<br /> <br /> ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ಪತ್ನಿ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿದರು. ಶಾಸರ ಜತೆಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹದೇವಸ್ವಾಮಿ, ಎಪಿಎಂಸಿ ಅಧ್ಯಕ್ಷ ಬಿ.ಎಂ.ಸ್ವಾಮಿಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಟಿ.ಶ್ರೀನಿವಾಸ್, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ವಿಜಯಕುಮಾರ್ ಪೂಜೆ ಸಲ್ಲಿಸಿದರು.<br /> <br /> ನಂತರ ಮಾತನಾಡಿದ ಶಾಸಕ ರಮೇಶ ಬಂಡಿಸಿದ್ದೇಗೌಡ, ಈ ಬಾರಿ ಮುಂಗಾರು ಸಕಾಲಕ್ಕೆ ಬಾರದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಬ್ಬು ಇತರ ಬೆಳೆಗಳು ಒಣಗುತ್ತಿವೆ. ಜಲಾಶಯಕ್ಕೆ ನೀರು ಬಾರದ ಕಾರಣ ಬತ್ತದ ಬಿತ್ತನೆ ಕಾರ್ಯ ಸ್ಥಗಿತಗೊಂಡಿದೆ. ದೋಷ ನಿವಾರಣೆಗಾಗಿ ನವಗ್ರಹ ಹೋಮ ನಡೆಸಿದ್ದು, ಮಳೆಗಾಗಿ ಪ್ರಾರ್ಥಿಸಿದ್ದೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಂಗಪಟ್ಟಣ: ಕೆಆರ್ಎಸ್ ಜಲಾಶಯ ಶೀಘ್ರ ಭರ್ತಿಯಾಗಲಿ ಎಂದು ಹಾರೈಸಿ ಶಾಸಕರಾದ ರಮೇಶ ಬಂಡಿಸಿದ್ದೇಗೌಡ ಹಾಗೂ ಸಿ.ಎಸ್.ಪುಟ್ಟರಾಜು ಬುಧವಾರ ಜಲಾಶಯದ ಕಾವೇರಿ ಮಾತೆ ಪ್ರತಿಮೆ ಬಳಿ ನವಗ್ರಹ ಹೋಮ ನಡೆಸಿದರು.<br /> <br /> ಬೆಂಬಲಿಗರ ಜತೆ ಇಲ್ಲಿಗೆ ಆಗಮಿಸಿದ ಶಾಸಕದ್ವಯರು ಸುಮಾರು ಒಂದೂವರೆ ತಾಸು ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ನಾಗೇಂದ್ರ ಪ್ರಸಾದ್ ಅಯ್ಯರ್ ನೇತೃತ್ವದ ವೈದಿಕರ ತಂಡ ನವಗ್ರಹ ಹೋಮ, ಗಣಪತಿ ಪೂಜೆ ಇತರ ಪೂಜಾ ಕೈಂಕರ್ಯಗಳನ್ನು ನಡೆಸಿಕೊಟ್ಟಿತು.<br /> <br /> ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ಪತ್ನಿ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿದರು. ಶಾಸರ ಜತೆಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹದೇವಸ್ವಾಮಿ, ಎಪಿಎಂಸಿ ಅಧ್ಯಕ್ಷ ಬಿ.ಎಂ.ಸ್ವಾಮಿಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಟಿ.ಶ್ರೀನಿವಾಸ್, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ವಿಜಯಕುಮಾರ್ ಪೂಜೆ ಸಲ್ಲಿಸಿದರು.<br /> <br /> ನಂತರ ಮಾತನಾಡಿದ ಶಾಸಕ ರಮೇಶ ಬಂಡಿಸಿದ್ದೇಗೌಡ, ಈ ಬಾರಿ ಮುಂಗಾರು ಸಕಾಲಕ್ಕೆ ಬಾರದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಬ್ಬು ಇತರ ಬೆಳೆಗಳು ಒಣಗುತ್ತಿವೆ. ಜಲಾಶಯಕ್ಕೆ ನೀರು ಬಾರದ ಕಾರಣ ಬತ್ತದ ಬಿತ್ತನೆ ಕಾರ್ಯ ಸ್ಥಗಿತಗೊಂಡಿದೆ. ದೋಷ ನಿವಾರಣೆಗಾಗಿ ನವಗ್ರಹ ಹೋಮ ನಡೆಸಿದ್ದು, ಮಳೆಗಾಗಿ ಪ್ರಾರ್ಥಿಸಿದ್ದೇವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>