<p>ಭದ್ರಾವತಿ: `ಕ್ರೀಡಾಪಟುವಿಗೆ ಆರ್ಥಿಕ ನೆರವು, ಪ್ರೋತ್ಸಾಹ ದೊರೆತಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ~ ಎಂದು ಅಂತರರಾಷ್ಟ್ರೀಯ ಪವರ್ಲಿಫ್ಟರ್ ವಿ. ನೇತ್ರಾವತಿ ಹೇಳಿದರು.<br /> <br /> ನಗರಸಭೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪ್ರೋತ್ಸಾಹ, ಸಹಕಾರ ದೊರೆಯದಿದ್ದಲ್ಲಿ ಯಾರೂ ಯಶಸ್ಸು ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಎಲ್ಲರ ಬೆಂಬಲ ಸಿಕ್ಕಿದರೆ ಮತ್ತಷ್ಟು ಸಾಧನೆ ಸಾಧ್ಯ ಎಂದರು.<br /> <br /> ವೇಟ್ಲಿಫ್ಟರ್ ಸಿ.ಆರ್.ಪಿ. ಸುಧೀರ್ಕುಮಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ತಮಗೆ ಹೆಚ್ಚಿನ ಸಹಕಾರ ದೊರೆಯುತ್ತಿದೆ. ಇದು ಮತ್ತಷ್ಟು ವೃದ್ಧಿಸಿದಲ್ಲಿ ಇನ್ನಷ್ಟು ಸಾಧನೆ ಮಾಡುವ ಮೂಲಕ ಊರಿನ ಗೌರವ ಹೆಚ್ಚಿಸುತ್ತೇವೆ ಎಂದರು.<br /> <br /> ಹಿರಿಯರ ಕ್ರೀಡೆಯಲ್ಲಿ ಪ್ರಶಸ್ತಿ ಪಡೆದಿರುವ ರಾಮೇಗೌಡ ಮಾತನಾಡಿ, ಶ್ರಮ, ನಿಷ್ಠೆ, ಸಾಧನೆ ಮಾಡುವ ಮನಸ್ಸು ಇದ್ದರೆ ಎಲ್ಲವನ್ನೂ ಸಾಧಿಸಬಹುದು ಎಂದರು.<br /> <br /> ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆ ಅಧ್ಯಕ್ಷ ಬಿ.ಕೆ. ಮೋಹನ್, ಈ ಕ್ರೀಡಾಪಟುಗಳು ಊರಿನ ಹೆಸರನ್ನು ಅಂತರರಾಷ್ಟ್ರೀಯಮಟ್ಟದಲ್ಲಿ ಎತ್ತಿ ಹಿಡಿದಿರುವುದು ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿ ನಗರಸಭೆ ವ್ಯಾಪ್ತಿಯ, ಅಂತರರಾಷ್ಟ್ರೀಯ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಉಚಿತವಾಗಿ ನಿವೇಶನ ಕೊಡುವ ನಿರ್ಣಯ ಮಾಡಲಾಗುವುದು ಎಂದು ಘೋಷಿಸಿದರು.<br /> <br /> ವೇದಿಕೆಯಲ್ಲಿ ನಗರಸಭೆ ಮಾಜಿ ಉಪಾಧ್ಯಕ್ಷರಾದ ಮೆಹಬೂಬ್ಸಾಬ್, ವಿ. ಕದಿರೇಶ್, ಮಾಜಿ ಅಧ್ಯಕ್ಷರಾದ ವೈ. ರೇಣುಕಮ್ಮ, ಆರ್. ಕರುಣಾಮೂರ್ತಿ, ಸ್ಥಾಯಿಸಮಿತಿ ಅಧ್ಯಕ್ಷ ಆರ್. ವೇಣುಗೋಪಾಲ್, ಜಿ.ಪಂ. ಸದಸ್ಯ ಎಚ್.ಎಲ್. ಷಡಾಕ್ಷರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭದ್ರಾವತಿ: `ಕ್ರೀಡಾಪಟುವಿಗೆ ಆರ್ಥಿಕ ನೆರವು, ಪ್ರೋತ್ಸಾಹ ದೊರೆತಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ~ ಎಂದು ಅಂತರರಾಷ್ಟ್ರೀಯ ಪವರ್ಲಿಫ್ಟರ್ ವಿ. ನೇತ್ರಾವತಿ ಹೇಳಿದರು.<br /> <br /> ನಗರಸಭೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪ್ರೋತ್ಸಾಹ, ಸಹಕಾರ ದೊರೆಯದಿದ್ದಲ್ಲಿ ಯಾರೂ ಯಶಸ್ಸು ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಎಲ್ಲರ ಬೆಂಬಲ ಸಿಕ್ಕಿದರೆ ಮತ್ತಷ್ಟು ಸಾಧನೆ ಸಾಧ್ಯ ಎಂದರು.<br /> <br /> ವೇಟ್ಲಿಫ್ಟರ್ ಸಿ.ಆರ್.ಪಿ. ಸುಧೀರ್ಕುಮಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ತಮಗೆ ಹೆಚ್ಚಿನ ಸಹಕಾರ ದೊರೆಯುತ್ತಿದೆ. ಇದು ಮತ್ತಷ್ಟು ವೃದ್ಧಿಸಿದಲ್ಲಿ ಇನ್ನಷ್ಟು ಸಾಧನೆ ಮಾಡುವ ಮೂಲಕ ಊರಿನ ಗೌರವ ಹೆಚ್ಚಿಸುತ್ತೇವೆ ಎಂದರು.<br /> <br /> ಹಿರಿಯರ ಕ್ರೀಡೆಯಲ್ಲಿ ಪ್ರಶಸ್ತಿ ಪಡೆದಿರುವ ರಾಮೇಗೌಡ ಮಾತನಾಡಿ, ಶ್ರಮ, ನಿಷ್ಠೆ, ಸಾಧನೆ ಮಾಡುವ ಮನಸ್ಸು ಇದ್ದರೆ ಎಲ್ಲವನ್ನೂ ಸಾಧಿಸಬಹುದು ಎಂದರು.<br /> <br /> ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆ ಅಧ್ಯಕ್ಷ ಬಿ.ಕೆ. ಮೋಹನ್, ಈ ಕ್ರೀಡಾಪಟುಗಳು ಊರಿನ ಹೆಸರನ್ನು ಅಂತರರಾಷ್ಟ್ರೀಯಮಟ್ಟದಲ್ಲಿ ಎತ್ತಿ ಹಿಡಿದಿರುವುದು ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿ ನಗರಸಭೆ ವ್ಯಾಪ್ತಿಯ, ಅಂತರರಾಷ್ಟ್ರೀಯ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಉಚಿತವಾಗಿ ನಿವೇಶನ ಕೊಡುವ ನಿರ್ಣಯ ಮಾಡಲಾಗುವುದು ಎಂದು ಘೋಷಿಸಿದರು.<br /> <br /> ವೇದಿಕೆಯಲ್ಲಿ ನಗರಸಭೆ ಮಾಜಿ ಉಪಾಧ್ಯಕ್ಷರಾದ ಮೆಹಬೂಬ್ಸಾಬ್, ವಿ. ಕದಿರೇಶ್, ಮಾಜಿ ಅಧ್ಯಕ್ಷರಾದ ವೈ. ರೇಣುಕಮ್ಮ, ಆರ್. ಕರುಣಾಮೂರ್ತಿ, ಸ್ಥಾಯಿಸಮಿತಿ ಅಧ್ಯಕ್ಷ ಆರ್. ವೇಣುಗೋಪಾಲ್, ಜಿ.ಪಂ. ಸದಸ್ಯ ಎಚ್.ಎಲ್. ಷಡಾಕ್ಷರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>