<p><strong>ಚಿತ್ರದುರ್ಗ: </strong>ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ವಿರೋಧಿಸಿ ಚಿತ್ರದುರ್ಗ ಲೋಕಸಭಾ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. <br /> ನಗರದ ಮುಖ್ಯರಸ್ತೆಗಳಲ್ಲಿ ಪ್ರತಿಭಟನಕಾರರು ಬಿಜೆಪಿ ಸರ್ಕಾರ ಹಾಗೂ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ತನಿಖೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅವರಿಗೆ ಮನವಿ ಸಲ್ಲಿಸಿದರು. <br /> <br /> ಹೊಸದುರ್ಗ ತಾಲ್ಲೂಕು ಮತ್ತೋಡು ಹೋಬಳಿ ಸಿದ್ದಗೊಂಡನಹಳ್ಳಿಯ ಸರ್ವೇ ನಂಬರ್ 52ರಲ್ಲಿ ಕ್ರೋಡೀಕರಿಸಿದ್ದ 5 ಸಾವಿರ ಮೆಟ್ರಿಕ್ ಟನ್ ಅದಿರಿನ ಪುಡಿಯನ್ನು 2009 ಡಿಸೆಂಬರ್ 22ರಂದು ಹರಾಜು ಮಾಡಲಾಗಿದ್ದು, ಅದನ್ನು ಸಾಗಣೆ ಮಾಡಲು 2010 ಮಾರ್ಚ್ 5ರಿಂದ 29ರವರೆಗೆ ಕಾಲವಕಾಶ ನಿಡಲಾಗಿತ್ತು. ಆದರೆ, 5 ಸಾವಿರ ಮೆಟ್ರಿಕ್ ಟನ್ ಬದಲಾಗಿ 50 ಸಾವಿರ ಮೆಟ್ರಿಕ್ ಟನ್ಗಿಂತಲೂ ಹೆಚ್ಚು ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಲಾಗಿದೆ ಎಂದು ಆರೋಪಿಸಿದರು. <br /> <br /> ಇಷ್ಟಾದರೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಮಾತ್ರ 9,744 ಮೆಟ್ರಿಕ್ ಟನ್ ಅಕ್ರಮವಾಗಿ ಅದಿರು ಸಾಗಣೆ ಮಾಡಲಾಗಿದೆ ಎಂದು ದಂಡ ವಿಧಿಸಿ, ತನಿಖೆ ನಡೆಸದೇ ಪ್ರಕರಣ ಕೈಬಿಟ್ಟಿದ್ದಾರೆ. <br /> <br /> ಆಕ್ರಮ ಅದಿರು ಸಾಗಣಿಕೆದಾರರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಯುವ ಕಾಂಗ್ರೆಸ್ ಸಮಿತಿಯ ಖಾಲೀದ್ಹುಸೇನ್, ಸೈಯದ್ ಮೊಹಿನುದ್ದೀನ್, ಎಂ.ಸಿ. ವಿನೂತನ್, ನಜ್ಮತಾಜ್, ಎಸ್. ಮೋಹನ್, ಡಿ. ರಾಕೇಶ್ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ವಿರೋಧಿಸಿ ಚಿತ್ರದುರ್ಗ ಲೋಕಸಭಾ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. <br /> ನಗರದ ಮುಖ್ಯರಸ್ತೆಗಳಲ್ಲಿ ಪ್ರತಿಭಟನಕಾರರು ಬಿಜೆಪಿ ಸರ್ಕಾರ ಹಾಗೂ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ತನಿಖೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅವರಿಗೆ ಮನವಿ ಸಲ್ಲಿಸಿದರು. <br /> <br /> ಹೊಸದುರ್ಗ ತಾಲ್ಲೂಕು ಮತ್ತೋಡು ಹೋಬಳಿ ಸಿದ್ದಗೊಂಡನಹಳ್ಳಿಯ ಸರ್ವೇ ನಂಬರ್ 52ರಲ್ಲಿ ಕ್ರೋಡೀಕರಿಸಿದ್ದ 5 ಸಾವಿರ ಮೆಟ್ರಿಕ್ ಟನ್ ಅದಿರಿನ ಪುಡಿಯನ್ನು 2009 ಡಿಸೆಂಬರ್ 22ರಂದು ಹರಾಜು ಮಾಡಲಾಗಿದ್ದು, ಅದನ್ನು ಸಾಗಣೆ ಮಾಡಲು 2010 ಮಾರ್ಚ್ 5ರಿಂದ 29ರವರೆಗೆ ಕಾಲವಕಾಶ ನಿಡಲಾಗಿತ್ತು. ಆದರೆ, 5 ಸಾವಿರ ಮೆಟ್ರಿಕ್ ಟನ್ ಬದಲಾಗಿ 50 ಸಾವಿರ ಮೆಟ್ರಿಕ್ ಟನ್ಗಿಂತಲೂ ಹೆಚ್ಚು ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಲಾಗಿದೆ ಎಂದು ಆರೋಪಿಸಿದರು. <br /> <br /> ಇಷ್ಟಾದರೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಮಾತ್ರ 9,744 ಮೆಟ್ರಿಕ್ ಟನ್ ಅಕ್ರಮವಾಗಿ ಅದಿರು ಸಾಗಣೆ ಮಾಡಲಾಗಿದೆ ಎಂದು ದಂಡ ವಿಧಿಸಿ, ತನಿಖೆ ನಡೆಸದೇ ಪ್ರಕರಣ ಕೈಬಿಟ್ಟಿದ್ದಾರೆ. <br /> <br /> ಆಕ್ರಮ ಅದಿರು ಸಾಗಣಿಕೆದಾರರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಯುವ ಕಾಂಗ್ರೆಸ್ ಸಮಿತಿಯ ಖಾಲೀದ್ಹುಸೇನ್, ಸೈಯದ್ ಮೊಹಿನುದ್ದೀನ್, ಎಂ.ಸಿ. ವಿನೂತನ್, ನಜ್ಮತಾಜ್, ಎಸ್. ಮೋಹನ್, ಡಿ. ರಾಕೇಶ್ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>