<p>ಮಂಡ್ಯ: ನಿಗದಿತ ವೇಳೆಯಲ್ಲಿ ವೇತನ ಪಾವತಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಬಗೆಗೆ ಸರ್ಕಾರದ ಗಮನ ಸೆಳೆಯುವ ಕ್ರಮವಾಗಿ ಗುತ್ತಿಗೆ ಪೌರ ಕಾರ್ಮಿಕರು ಮತ್ತು ಪೌರ ಸೇವಾ ನೌಕರರು ಬುಧವಾರ ಪತ್ರ ಚಳವಳಿ ನಡೆಸಿದರು.<br /> <br /> ನಗರದಲ್ಲಿ ವಿಶ್ವೇಶ್ವರಯ್ಯ ರಸ್ತೆಯಲ್ಲಿನ ಮುಖ್ಯ ಅಂಚೆ ಕಚೇರಿಯ ಬಳಿ ಸೇರಿದ ಪೌರ ಕಾರ್ಮಿಕರು, ಆದ್ಯತೆಯ ಮೇರೆಗೆ ಈ ಸಮಸ್ಯೆಗಳನ್ನು ಗಮನಿಸಿ ಪರಿಹಾರವನ್ನು ಒದಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಪತ್ರ ಬರೆಯುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.<br /> <br /> ನಗರಸಭೆಯ ವ್ಯಾಪ್ತಿಯಲ್ಲಿಯೇ ಸುಮಾರು 172ಕ್ಕೂ ಹೆಚ್ಚು ಗುತ್ತಿಗೆ ಪೌರ ಕಾರ್ಮಿಕರು ದುಡಿಯುತ್ತಿದ್ದಾರೆ. ವೇತನ ಪಾವತಿ ವಿಳಂಬವಾಗುತ್ತಿದ್ದು, ಒಮ್ಮಮ್ಮೆ ಎರಡು ತಿಂಗಳಾದರೂ ವೇತನ ಪಾವತಿ ಆಗುವುದಿಲ್ಲ. ವೇತನವನ್ನೇ ನಂಬಿರುವ ಪೌರ ಕಾರ್ಮಿಕರಿಗೆ ಇನ್ನಿಲ್ಲದ ಸಮಸ್ಯೆಯಾಗಿದೆ ಎಂದು ಸಮಸ್ಯೆ ತೋಡಿಕೊಂಡಿದ್ದಾರೆ.<br /> <br /> ನಿಯಮಗಳ ಅನುಸಾರ ತಿಂಗಳ ಐದನೇ ತಾರೀಖಿನ ಒಳಗೆ ವೇತನ ಪಾವತಿಸಬೇಕು. ಗುತ್ತಿಗೆ ಪದ್ಧತಿಯನ್ನೇ ಕೈಬಿಟ್ಟು, ನಗರಸಭೆಯೇ ವೇತನ ಪಾವತಿಸುವಂತೆ, ಸೇವೆ ಕಾಯಂ ಮಾಡುವಂತೆ ಕ್ರಮ ಜರುಗಿಸಬೇಕು ಎಂದು ಆಗ್ರಹಪಡಿಸಿದ್ದಾರೆ.<br /> <br /> ಬೇಡಿಕೆ ಕುರಿತು ಮಾರ್ಚ್ನಲ್ಲಿ ಎರಡು ಬಾರಿ ಪ್ರತಿಭಟಿಸಿದ್ದರೂ ಪ್ರಯೋಜನ ಆಗಿಲ್ಲ. ಇನ್ನಾದರೂ ಸರ್ಕಾರ ಈ ಬಗೆಗೆ ಗಮನಹರಿಸಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ. <br /> <br /> ಈ ಕುರಿತು ಜಿಲ್ಲಾ ಘಟಕದ ಅಧ್ಯಕ್ಷ ಎನ್.ನಾಗರಾಜು ಅವರು ಹೇಳಿಕೆ ನೀಡಿದ್ದು, ವೇತನ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ನಿಗದಿತ ವೇಳೆಯಲ್ಲಿ ವೇತನ ಪಾವತಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಬಗೆಗೆ ಸರ್ಕಾರದ ಗಮನ ಸೆಳೆಯುವ ಕ್ರಮವಾಗಿ ಗುತ್ತಿಗೆ ಪೌರ ಕಾರ್ಮಿಕರು ಮತ್ತು ಪೌರ ಸೇವಾ ನೌಕರರು ಬುಧವಾರ ಪತ್ರ ಚಳವಳಿ ನಡೆಸಿದರು.<br /> <br /> ನಗರದಲ್ಲಿ ವಿಶ್ವೇಶ್ವರಯ್ಯ ರಸ್ತೆಯಲ್ಲಿನ ಮುಖ್ಯ ಅಂಚೆ ಕಚೇರಿಯ ಬಳಿ ಸೇರಿದ ಪೌರ ಕಾರ್ಮಿಕರು, ಆದ್ಯತೆಯ ಮೇರೆಗೆ ಈ ಸಮಸ್ಯೆಗಳನ್ನು ಗಮನಿಸಿ ಪರಿಹಾರವನ್ನು ಒದಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಪತ್ರ ಬರೆಯುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.<br /> <br /> ನಗರಸಭೆಯ ವ್ಯಾಪ್ತಿಯಲ್ಲಿಯೇ ಸುಮಾರು 172ಕ್ಕೂ ಹೆಚ್ಚು ಗುತ್ತಿಗೆ ಪೌರ ಕಾರ್ಮಿಕರು ದುಡಿಯುತ್ತಿದ್ದಾರೆ. ವೇತನ ಪಾವತಿ ವಿಳಂಬವಾಗುತ್ತಿದ್ದು, ಒಮ್ಮಮ್ಮೆ ಎರಡು ತಿಂಗಳಾದರೂ ವೇತನ ಪಾವತಿ ಆಗುವುದಿಲ್ಲ. ವೇತನವನ್ನೇ ನಂಬಿರುವ ಪೌರ ಕಾರ್ಮಿಕರಿಗೆ ಇನ್ನಿಲ್ಲದ ಸಮಸ್ಯೆಯಾಗಿದೆ ಎಂದು ಸಮಸ್ಯೆ ತೋಡಿಕೊಂಡಿದ್ದಾರೆ.<br /> <br /> ನಿಯಮಗಳ ಅನುಸಾರ ತಿಂಗಳ ಐದನೇ ತಾರೀಖಿನ ಒಳಗೆ ವೇತನ ಪಾವತಿಸಬೇಕು. ಗುತ್ತಿಗೆ ಪದ್ಧತಿಯನ್ನೇ ಕೈಬಿಟ್ಟು, ನಗರಸಭೆಯೇ ವೇತನ ಪಾವತಿಸುವಂತೆ, ಸೇವೆ ಕಾಯಂ ಮಾಡುವಂತೆ ಕ್ರಮ ಜರುಗಿಸಬೇಕು ಎಂದು ಆಗ್ರಹಪಡಿಸಿದ್ದಾರೆ.<br /> <br /> ಬೇಡಿಕೆ ಕುರಿತು ಮಾರ್ಚ್ನಲ್ಲಿ ಎರಡು ಬಾರಿ ಪ್ರತಿಭಟಿಸಿದ್ದರೂ ಪ್ರಯೋಜನ ಆಗಿಲ್ಲ. ಇನ್ನಾದರೂ ಸರ್ಕಾರ ಈ ಬಗೆಗೆ ಗಮನಹರಿಸಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ. <br /> <br /> ಈ ಕುರಿತು ಜಿಲ್ಲಾ ಘಟಕದ ಅಧ್ಯಕ್ಷ ಎನ್.ನಾಗರಾಜು ಅವರು ಹೇಳಿಕೆ ನೀಡಿದ್ದು, ವೇತನ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>