<p>ಚಿಕ್ಕಮಗಳೂರು: `ಗ್ರಾಮೀಣ ಭಾಗದ ಸಂಸ್ಕೃತಿಯನ್ನು ಯುವಕರು ಮುಂದುವರಿಸಿಕೊಂಡು ಹೋಗಬೇಕು~ ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕಿ ಮೋಟಮ್ಮ ಕರೆ ನೀಡಿದರು.<br /> <br /> ತಾಲ್ಲೂಕಿನ ಕ್ಯಾತನಬೀಡು ಗ್ರಾಮದಲ್ಲಿ ಭಾನುವಾರ ಗ್ರಾಮೀಣ ಸಂಸ್ಕೃತಿ ಸಮ್ಮೇಳನದ ಗ್ರಾಮೀಣ ಕ್ರೀಡಾಕೂಟ ಮತ್ತು ಬಯಲು ಚಿತ್ರಾಲಯಕ್ಕೆ ರಾಗಿ ಬೀಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.<br /> <br /> ಗ್ರಾಮೀಣ ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ. ಸಾಂಪ್ರದಾಯಿಕ ಮದುವೆಗಳು ಸಹ ಆಡಂಬರವಾಗಿ ಮಾರ್ಪಟ್ಟಿರುವುದು ದುರದೃಷ್ಟಕರ. ಹಿಂದಿನ ಕಾಲದಲ್ಲಿ ಮಹಿಳೆಯರು ವಿದ್ಯಾಭ್ಯಾಸ ಇಲ್ಲದಿದ್ದರೂ ಪದಕಟ್ಟಿ ಹಾಡುತ್ತಿದ್ದರು. ಜನಪದಗೀತೆ, ಸಾಹಿತ್ಯ ಅನಕ್ಷರಸ್ಥ ಹೆಣ್ಣುಮಕ್ಕಳೇ ಬೆಳೆಸಿದ್ದು ಎಂದರು.<br /> <br /> ಸಾಹಿತಿ ಚಟ್ನಳ್ಳಿ ಮಹೇಶ್ ಬದುಕು ಮತ್ತು ಗ್ರಾಮೀಣ ಚಟುವಟಿಕೆ ಕುರಿತು ಉಪನ್ಯಾಸ ನೀಡಿ, ಹಿಂದಿನ ಕಾಲದ ಸಾಂಪ್ರದಾಯಿಕ ವಸ್ತುಗಳು ಇಂದಿನ ಯುವ ಪೀಳಿಗೆಗೆ ವಸ್ತು ಸಂಗ್ರಹಾಲಯದಲ್ಲಿ ತೋರಿಸಬೇಕಾಗಿದೆ ಎಂದು ವಿಷಾದಿಸಿದರು.<br /> <br /> ಗ್ರಾಮೀಣ ಭಾಗದಲ್ಲಿ ದುಶ್ಚಟಗಳಿಗೆ ದಾಸರಾಗದೆ ಮದ್ಯಪಾನ, ಧೂಮಪಾನ ಮುಕ್ತ ಗ್ರಾಮವೆಂದು ನಾಮಫಲಕ ಹಾಕಿಕೊಳ್ಳಬೇಕು ಎಂದು ಸಲಹೆ ನೀಡಿದರು.<br /> <br /> ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಯುವಕರು ಗ್ರಾಮಗಳನ್ನು ತೊರೆದು ಉದ್ಯೋಗಕ್ಕಾಗಿ ಪಟ್ಟಣ ಸೇರದೆ ಗ್ರಾಮಗಳಲ್ಲಿಯೇ ತಮ್ಮ ಬದುಕು ರೂಪಿಸಿಕೊಳ್ಳಬೇಕು. ಮಹಿಳೆಯರು ಆಧುನಿಕ ಯುಗದಲ್ಲಿ ಗ್ರಾಮೀಣ ಸಂಸ್ಕೃತಿಯನ್ನು ಮರೆಯದೆ ಮುಂದುವರಿಸಬೇಕು ಎಂದು ಸಲಹೆ ನೀಡಿದರು.<br /> <br /> ಬಸವ ಮಂದಿರದ ಜಯಬಸವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಗುರುಶಾಂತಪ್ಪ, ರೇಣುಕಾರಾಧ್ಯ, ರಘು, ಮಂಜುನಾಥ್ ಹಾಗೂ ಗ್ರಾಮದ ಮುಖಂಡರಾದ ಕ್ಯಾತನಬೀಡು ರವೀಶ್, ಲೋಕೇಶ್ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: `ಗ್ರಾಮೀಣ ಭಾಗದ ಸಂಸ್ಕೃತಿಯನ್ನು ಯುವಕರು ಮುಂದುವರಿಸಿಕೊಂಡು ಹೋಗಬೇಕು~ ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕಿ ಮೋಟಮ್ಮ ಕರೆ ನೀಡಿದರು.<br /> <br /> ತಾಲ್ಲೂಕಿನ ಕ್ಯಾತನಬೀಡು ಗ್ರಾಮದಲ್ಲಿ ಭಾನುವಾರ ಗ್ರಾಮೀಣ ಸಂಸ್ಕೃತಿ ಸಮ್ಮೇಳನದ ಗ್ರಾಮೀಣ ಕ್ರೀಡಾಕೂಟ ಮತ್ತು ಬಯಲು ಚಿತ್ರಾಲಯಕ್ಕೆ ರಾಗಿ ಬೀಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.<br /> <br /> ಗ್ರಾಮೀಣ ಸಂಸ್ಕೃತಿ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ. ಸಾಂಪ್ರದಾಯಿಕ ಮದುವೆಗಳು ಸಹ ಆಡಂಬರವಾಗಿ ಮಾರ್ಪಟ್ಟಿರುವುದು ದುರದೃಷ್ಟಕರ. ಹಿಂದಿನ ಕಾಲದಲ್ಲಿ ಮಹಿಳೆಯರು ವಿದ್ಯಾಭ್ಯಾಸ ಇಲ್ಲದಿದ್ದರೂ ಪದಕಟ್ಟಿ ಹಾಡುತ್ತಿದ್ದರು. ಜನಪದಗೀತೆ, ಸಾಹಿತ್ಯ ಅನಕ್ಷರಸ್ಥ ಹೆಣ್ಣುಮಕ್ಕಳೇ ಬೆಳೆಸಿದ್ದು ಎಂದರು.<br /> <br /> ಸಾಹಿತಿ ಚಟ್ನಳ್ಳಿ ಮಹೇಶ್ ಬದುಕು ಮತ್ತು ಗ್ರಾಮೀಣ ಚಟುವಟಿಕೆ ಕುರಿತು ಉಪನ್ಯಾಸ ನೀಡಿ, ಹಿಂದಿನ ಕಾಲದ ಸಾಂಪ್ರದಾಯಿಕ ವಸ್ತುಗಳು ಇಂದಿನ ಯುವ ಪೀಳಿಗೆಗೆ ವಸ್ತು ಸಂಗ್ರಹಾಲಯದಲ್ಲಿ ತೋರಿಸಬೇಕಾಗಿದೆ ಎಂದು ವಿಷಾದಿಸಿದರು.<br /> <br /> ಗ್ರಾಮೀಣ ಭಾಗದಲ್ಲಿ ದುಶ್ಚಟಗಳಿಗೆ ದಾಸರಾಗದೆ ಮದ್ಯಪಾನ, ಧೂಮಪಾನ ಮುಕ್ತ ಗ್ರಾಮವೆಂದು ನಾಮಫಲಕ ಹಾಕಿಕೊಳ್ಳಬೇಕು ಎಂದು ಸಲಹೆ ನೀಡಿದರು.<br /> <br /> ವಿಧಾನಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಯುವಕರು ಗ್ರಾಮಗಳನ್ನು ತೊರೆದು ಉದ್ಯೋಗಕ್ಕಾಗಿ ಪಟ್ಟಣ ಸೇರದೆ ಗ್ರಾಮಗಳಲ್ಲಿಯೇ ತಮ್ಮ ಬದುಕು ರೂಪಿಸಿಕೊಳ್ಳಬೇಕು. ಮಹಿಳೆಯರು ಆಧುನಿಕ ಯುಗದಲ್ಲಿ ಗ್ರಾಮೀಣ ಸಂಸ್ಕೃತಿಯನ್ನು ಮರೆಯದೆ ಮುಂದುವರಿಸಬೇಕು ಎಂದು ಸಲಹೆ ನೀಡಿದರು.<br /> <br /> ಬಸವ ಮಂದಿರದ ಜಯಬಸವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಗುರುಶಾಂತಪ್ಪ, ರೇಣುಕಾರಾಧ್ಯ, ರಘು, ಮಂಜುನಾಥ್ ಹಾಗೂ ಗ್ರಾಮದ ಮುಖಂಡರಾದ ಕ್ಯಾತನಬೀಡು ರವೀಶ್, ಲೋಕೇಶ್ ಇನ್ನಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>