<p>ದಾವಣಗೆರೆ: ದೇಶದಲ್ಲಿ ಚಾಲನಾ ಪರವಾನಗಿ ವಿತರಣೆಯಲ್ಲಿನ ಲೋಪದಿಂದಾಗಿ ಸಂಚಾರ ಸಮಸ್ಯೆ ಹೆಚ್ಚಾಗಿದೆ. ಇತರೆ ದೇಶಗಳಲ್ಲಿ ಭಾರತದಲ್ಲಿ ನೀಡಿದ ಪರವಾನಗಿಯನ್ನು ನಂಬಲು ಹಿಂದೇಟು ಹಾಕುವಂತಹ ಸ್ಥಿತಿ ಇದೆ ಎಂದು ಪೂರ್ವ ವಲಯ ಐಜಿಪಿ ಸಂಜಯ್ ಸಹಾಯ್ ದೂರಿದರು.<br /> <br /> ಜಿಲ್ಲಾ ಪೊಲೀಸ್ ವತಿಯಿಂದ ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 23ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> ಜನಸಂಖ್ಯೆ, ವಾಹನಗಳ ಸಂಖ್ಯೆ ಹೆಚ್ಚಳದಿಂದಾಗಿ ಸಂಚಾರ ದಟ್ಟಣೆ ನಿರಂತರವಾಗಿ ಹೆಚ್ಚುತ್ತಿದೆ. ಹಳೇ ನಗರಗಳ ಚಿಕ್ಕ ರಸ್ತೆಗಳು ಸಂಚಾರಕ್ಕೆ ತೊಡಕಾಗಿವೆ. ಇಂತಹ ಸವಾಲುಗಳ ನಡುವೆಯೇ ಪೊಲೀಸರು ಉತ್ತಮ ಸಂಚಾರ ವ್ಯವಸ್ಥೆ ಕಲ್ಪಿಸಲು ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.<br /> <br /> ಸಂಚಾರ ವ್ಯವಸ್ಥೆ ಸರಿಪಡಿಸಲು ಕೆಲವೊಮ್ಮೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅದನ್ನು ಸಾರ್ವಜನಿಕರು ಕಿರಿಕಿರಿ ಎಂದು ಭಾವಿಸಬಾರದು. ಪೊಲೀಸರು ಮಾಡುವ ಎಲ್ಲ ಕ್ರಮಗಳೂ ಜನರ ಒಳಿತನ್ನು ಒಳಗೊಂಡಿರುತ್ತದೆ ಎಂದರು.<br /> <br /> ಸಂಚಾರ ನಿಯಮಗಳ ಬಗ್ಗೆ ಜನರಿಗೆ ಸೂಕ್ತ ತಿಳಿವಳಿಕೆ ಮೂಡಿಸುವ ಅಗತ್ಯವಿದೆ. ಪ್ರತಿಯೊಬ್ಬರೂ ವೇಗಮಿತಿ ಅನುಸರಿಸಬೇಕು. ನಿಯಮಗಳಿಗೆ ಅನುಗುಣವಾಗಿಯೇ ವಾಹನ ಚಾಲನೆ ಮಾಡಬೇಕು. ಒಬ್ಬರು ಮಾಡುವ ತಪ್ಪಿಗೆ ಇನ್ನೊಬ್ಬರ ಜೀವ ಬಲಿಕೊಡಬಾರದು ಎಂದು ತಿಳಿ ಹೇಳಿದರು.<br /> <br /> ಪ್ರಾದೇಶಿಕ ಸಾರಿಗೆ ಅಧಿಕಾರಿ ನಂಜರಾಜೇ ಅರಸ್ ಮಾತನಾಡಿ, ಎಲ್ಲ ವಾಹನಗಳ ಮಾಲೀಕರು ಹಾಗೂ ಚಾಲಕರು ಕಾನೂನು ಮೀರದಂತೆ ಕರ್ತವ್ಯ ನಿರ್ವಹಿಸಬೇಕು. ಜವಾಬ್ದಾರಿಯಿಂದ ಚಾಲನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.<br /> <br /> ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ. ಚವಾಣ್, ಎಎಸ್ಪಿ ಅನುಪಮ್ ಅಗರವಾಲ್, ನಗರ ಡಿವೈಎಸ್ಪಿ ಕೆ.ಪಿ. ಚಂದ್ರಪ್ಪ, ಸಿಪಿಐ ಎಚ್.ಕೆ. ರೇವಣ್ಣ, ಎಂ.ಸಿ. ದಶರಥಮೂರ್ತಿ, ನಾಗೇಶ್ ಐತಾಳ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ದೇಶದಲ್ಲಿ ಚಾಲನಾ ಪರವಾನಗಿ ವಿತರಣೆಯಲ್ಲಿನ ಲೋಪದಿಂದಾಗಿ ಸಂಚಾರ ಸಮಸ್ಯೆ ಹೆಚ್ಚಾಗಿದೆ. ಇತರೆ ದೇಶಗಳಲ್ಲಿ ಭಾರತದಲ್ಲಿ ನೀಡಿದ ಪರವಾನಗಿಯನ್ನು ನಂಬಲು ಹಿಂದೇಟು ಹಾಕುವಂತಹ ಸ್ಥಿತಿ ಇದೆ ಎಂದು ಪೂರ್ವ ವಲಯ ಐಜಿಪಿ ಸಂಜಯ್ ಸಹಾಯ್ ದೂರಿದರು.<br /> <br /> ಜಿಲ್ಲಾ ಪೊಲೀಸ್ ವತಿಯಿಂದ ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 23ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> ಜನಸಂಖ್ಯೆ, ವಾಹನಗಳ ಸಂಖ್ಯೆ ಹೆಚ್ಚಳದಿಂದಾಗಿ ಸಂಚಾರ ದಟ್ಟಣೆ ನಿರಂತರವಾಗಿ ಹೆಚ್ಚುತ್ತಿದೆ. ಹಳೇ ನಗರಗಳ ಚಿಕ್ಕ ರಸ್ತೆಗಳು ಸಂಚಾರಕ್ಕೆ ತೊಡಕಾಗಿವೆ. ಇಂತಹ ಸವಾಲುಗಳ ನಡುವೆಯೇ ಪೊಲೀಸರು ಉತ್ತಮ ಸಂಚಾರ ವ್ಯವಸ್ಥೆ ಕಲ್ಪಿಸಲು ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.<br /> <br /> ಸಂಚಾರ ವ್ಯವಸ್ಥೆ ಸರಿಪಡಿಸಲು ಕೆಲವೊಮ್ಮೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅದನ್ನು ಸಾರ್ವಜನಿಕರು ಕಿರಿಕಿರಿ ಎಂದು ಭಾವಿಸಬಾರದು. ಪೊಲೀಸರು ಮಾಡುವ ಎಲ್ಲ ಕ್ರಮಗಳೂ ಜನರ ಒಳಿತನ್ನು ಒಳಗೊಂಡಿರುತ್ತದೆ ಎಂದರು.<br /> <br /> ಸಂಚಾರ ನಿಯಮಗಳ ಬಗ್ಗೆ ಜನರಿಗೆ ಸೂಕ್ತ ತಿಳಿವಳಿಕೆ ಮೂಡಿಸುವ ಅಗತ್ಯವಿದೆ. ಪ್ರತಿಯೊಬ್ಬರೂ ವೇಗಮಿತಿ ಅನುಸರಿಸಬೇಕು. ನಿಯಮಗಳಿಗೆ ಅನುಗುಣವಾಗಿಯೇ ವಾಹನ ಚಾಲನೆ ಮಾಡಬೇಕು. ಒಬ್ಬರು ಮಾಡುವ ತಪ್ಪಿಗೆ ಇನ್ನೊಬ್ಬರ ಜೀವ ಬಲಿಕೊಡಬಾರದು ಎಂದು ತಿಳಿ ಹೇಳಿದರು.<br /> <br /> ಪ್ರಾದೇಶಿಕ ಸಾರಿಗೆ ಅಧಿಕಾರಿ ನಂಜರಾಜೇ ಅರಸ್ ಮಾತನಾಡಿ, ಎಲ್ಲ ವಾಹನಗಳ ಮಾಲೀಕರು ಹಾಗೂ ಚಾಲಕರು ಕಾನೂನು ಮೀರದಂತೆ ಕರ್ತವ್ಯ ನಿರ್ವಹಿಸಬೇಕು. ಜವಾಬ್ದಾರಿಯಿಂದ ಚಾಲನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.<br /> <br /> ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ. ಚವಾಣ್, ಎಎಸ್ಪಿ ಅನುಪಮ್ ಅಗರವಾಲ್, ನಗರ ಡಿವೈಎಸ್ಪಿ ಕೆ.ಪಿ. ಚಂದ್ರಪ್ಪ, ಸಿಪಿಐ ಎಚ್.ಕೆ. ರೇವಣ್ಣ, ಎಂ.ಸಿ. ದಶರಥಮೂರ್ತಿ, ನಾಗೇಶ್ ಐತಾಳ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>