<p>ಹುಮನಾಬಾದ್: ’ಮರ್ಯಾದೆ ರಾಮಣ್ಣ’ ಚಲನಚಿತ್ರ ನಿರ್ಮಾಣ ಪೂರ್ವಸಿದ್ಧತೆ ಪರಿಶೀಲನೆ ಹಿನ್ನೆಲೆಯಲ್ಲಿ ತಾಲ್ಲೂಕಿನ ದುಬಲಗುಂಡಿ ಗ್ರಾಮದಿಂದ ಹುಮನಾಬಾದ್ಗೆ ಆಗಮಿಸುತ್ತಿದ್ದ ಚಿತ್ರತಂಡ ವಾಹನಕ್ಕೆ ಲಾರಿ ಡಿಕ್ಕಿಹೊಡೆದ ಪರಿಣಾಮ 5ಮಂದಿ ಗಾಯಗೊಂಡ ಘಟನೆ ಸೋಮವಾರ ರಾತ್ರಿ ದುಬಲಗುಂಡಿ ಕ್ರಾಸ್ಬಳಿ ಸಂಭವಿಸಿದೆ.<br /> <br /> ತಾಲ್ಲೂಕಿನ ದುಬಲಗುಂಡಿ ಗ್ರಾಮದ ಚಂದ್ರಕಾಂತ ಫತ್ತೆಪೂರೆ ಅವರ ಆಕರ್ಷ ಮಹಲ್ನಲ್ಲಿ ಫೆಬ್ರುವರಿ 23ರಿಂದ ಚಲನಚಿತ್ರ ಶೂಟಿಂಗ್ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಚಲನಚಿತ್ರ ನಿರ್ದೇಶಕ ಗುರುಪ್ರಸಾದ್ ಹಾಗೂ ತಂಡದ ಸದಸ್ಯರು ಕಳೆದ ಒಂದು ವಾರದಿಂದ ಹುಮನಾಬಾದ್ ಪಟ್ಟಣದ ವಸತಿಗೃಹವೊಂದರಲ್ಲಿ ವಾಸ್ತವ್ಯ ಮಾಡಿದ್ದಾರೆ.<br /> <br /> ಸಿದ್ಧತಾ ಪರಿಶೀಲನೆ ಸಂಬಂಧ ತಂಡದ ನಿರ್ದೇಶಕ ಹಾಗೂ ಸದಸ್ಯರು ಪ್ರತಿನಿತ್ಯ ದುಬಲಗುಂಡಿ ಗ್ರಾಮಕ್ಕೆ ಹೋಗಿ ಬರುತ್ತಿದ್ದಾರೆ. ಸೋಮವಾರ ದುಬಲಗುಂಡಿಯಿಂದ ಹುಮನಾಬಾದ್ಗೆ ಮರುಳುತ್ತಿದ್ದಾಗ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆಯಿತು.<br /> <br /> ನಿರ್ದೇಶಕ ಗುರುಪ್ರಸಾದ್ ಅವರ ತಲೆಗೆ ತೀವ್ರ ಗಾಯಗಳಾಗಿವೆ. ಸಹ ನಿರ್ದೇಶಕ ಪ್ರಸನ್ನ, ಸಹನಟ ಕಿರಣ, ಛಾಯಾಗ್ರಾಹಕ ಗಿರಿ, ಜೀಪ್ ಚಾಲಕ ಕಿರಣ್ಕುಮಾರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಮನಾಬಾದ್: ’ಮರ್ಯಾದೆ ರಾಮಣ್ಣ’ ಚಲನಚಿತ್ರ ನಿರ್ಮಾಣ ಪೂರ್ವಸಿದ್ಧತೆ ಪರಿಶೀಲನೆ ಹಿನ್ನೆಲೆಯಲ್ಲಿ ತಾಲ್ಲೂಕಿನ ದುಬಲಗುಂಡಿ ಗ್ರಾಮದಿಂದ ಹುಮನಾಬಾದ್ಗೆ ಆಗಮಿಸುತ್ತಿದ್ದ ಚಿತ್ರತಂಡ ವಾಹನಕ್ಕೆ ಲಾರಿ ಡಿಕ್ಕಿಹೊಡೆದ ಪರಿಣಾಮ 5ಮಂದಿ ಗಾಯಗೊಂಡ ಘಟನೆ ಸೋಮವಾರ ರಾತ್ರಿ ದುಬಲಗುಂಡಿ ಕ್ರಾಸ್ಬಳಿ ಸಂಭವಿಸಿದೆ.<br /> <br /> ತಾಲ್ಲೂಕಿನ ದುಬಲಗುಂಡಿ ಗ್ರಾಮದ ಚಂದ್ರಕಾಂತ ಫತ್ತೆಪೂರೆ ಅವರ ಆಕರ್ಷ ಮಹಲ್ನಲ್ಲಿ ಫೆಬ್ರುವರಿ 23ರಿಂದ ಚಲನಚಿತ್ರ ಶೂಟಿಂಗ್ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಚಲನಚಿತ್ರ ನಿರ್ದೇಶಕ ಗುರುಪ್ರಸಾದ್ ಹಾಗೂ ತಂಡದ ಸದಸ್ಯರು ಕಳೆದ ಒಂದು ವಾರದಿಂದ ಹುಮನಾಬಾದ್ ಪಟ್ಟಣದ ವಸತಿಗೃಹವೊಂದರಲ್ಲಿ ವಾಸ್ತವ್ಯ ಮಾಡಿದ್ದಾರೆ.<br /> <br /> ಸಿದ್ಧತಾ ಪರಿಶೀಲನೆ ಸಂಬಂಧ ತಂಡದ ನಿರ್ದೇಶಕ ಹಾಗೂ ಸದಸ್ಯರು ಪ್ರತಿನಿತ್ಯ ದುಬಲಗುಂಡಿ ಗ್ರಾಮಕ್ಕೆ ಹೋಗಿ ಬರುತ್ತಿದ್ದಾರೆ. ಸೋಮವಾರ ದುಬಲಗುಂಡಿಯಿಂದ ಹುಮನಾಬಾದ್ಗೆ ಮರುಳುತ್ತಿದ್ದಾಗ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆಯಿತು.<br /> <br /> ನಿರ್ದೇಶಕ ಗುರುಪ್ರಸಾದ್ ಅವರ ತಲೆಗೆ ತೀವ್ರ ಗಾಯಗಳಾಗಿವೆ. ಸಹ ನಿರ್ದೇಶಕ ಪ್ರಸನ್ನ, ಸಹನಟ ಕಿರಣ, ಛಾಯಾಗ್ರಾಹಕ ಗಿರಿ, ಜೀಪ್ ಚಾಲಕ ಕಿರಣ್ಕುಮಾರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>