<p>ರಾಯಚೂರು: ಮಾಜಿ ಉಪ ಪ್ರಧಾನಿ, ಬಿಜೆಪಿ ರಾಷ್ಟ್ರೀಯ ನಾಯಕ ಎಲ್.ಕೆ ಅಡ್ವಾಣಿ ಅವರು ಭ್ರಷ್ಟಾಚಾರದ ವಿರುದ್ಧ ಜಾಗೃತಿಗೆ ದೇಶವ್ಯಾಪಿ ನಡೆಸುತ್ತಿರುವ ಜನಚೇತನ ಯಾತ್ರೆ ರಾಜ್ಯಕ್ಕೆ ಆಗಮಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ಜಿಲ್ಲಾ ಯುವ ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.<br /> <br /> ಭ್ರಷ್ಟಾಚಾರದ ವಿರುದ್ಧ ದೇಶವ್ಯಾಪಿ ಜನಜಾಗೃತಿಗೆ ಒಂದೆಡೆ ಅಡ್ವಾಣಿ ಅವರು ಜನಚೇತನ ಯಾತ್ರೆ ಕೈಗೊಂಡಿದ್ದಾರೆ. ಮತ್ತೊಂದೆಡೆ ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವರಾದ ಕೃಷ್ಣಯ್ಯಶೆಟ್ಟಿ, ಜನಾರ್ದನರೆಡ್ಡಿ, ಕಟ್ಟಾ ಸುಬ್ರಮಣ್ಯ ನಾಯ್ಡು ಹಲವರು ಜೈಲು ಸೇರಿದ್ದಾರೆ. ಇನ್ನೂ ಅನೇಕರು ಜೈಲು ಸೇರುವ ಸರದಿಯಲ್ಲಿದ್ದಾರೆ. ಈ ಸ್ಥಿತಿಯಲ್ಲಿ ಕರ್ನಾಟಕಕ್ಕೆ ಅಡ್ವಾಣಿ ಅವರ ಜನಚೇತನ ಯಾತ್ರೆ ಆಗಮಿಸುತ್ತಿರುವುದಕ್ಕೆ ಅರ್ಥವೇ ಇಲ್ಲ ಎಂದು ಕಾರ್ಯಕರ್ತರು ಪ್ರಶ್ನಿಸಿದರು.<br /> <br /> ಸರ್ಕಾರದ ಅವ್ಯವಹಾರ, ಅಕ್ರಮಗಳ ಬಗ್ಗೆ ವ್ಯಾಪಕ ಆರೋಪಗಳು, ದೂರುಗಳು ಎದುರಾಗುತ್ತಿವೆ. ಬಿಜೆಪಿ ಪಕ್ಷದ ಆಡಳಿತ ಇರುವ ಇಲ್ಲಿನ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸಚಿವರಾದ ಮುರುಗೇಶ ನಿರಾಣಿ, ಆರ್. ಅಶೋಕ ಅವರ ವಿರುದ್ಧವೂ ಆರೋಪಗಳಿವೆ. ಈ ಸ್ಥಿತಿಯಲ್ಲಿ ಅಡ್ವಾಣಿ ಅವರು ಭ್ರಷ್ಟಾಚಾರದ ವಿರುದ್ಧ ಏನು ಉಪದೇಶ ಮಾಡಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಪದಾಧಿಕಾರಿಗಳಾದ ಕೆ. ಗೋಪಿ, ರಿಯಾಜ್, ಮುರಳಿ ಯಾದವ್, ರಾಜೇಶ ಮಡಿವಾಳ, ಪ್ರಶಾಂತ, ಆಂಜನೇಯ, ಶಾಂತಪ್ಪ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎ ವಸಂತಕುಮಾರ, ನಗರ ಘಟಕ ಅಧ್ಯಕ್ಷ ಜಿ ಬಸವರಾಜರೆಡ್ಡಿ, ಕೆ ಶಾಂತಪ್ಪ, ಬಷಿರುದ್ದೀನ್, ರವೀಂದ್ರ ಜಾಲ್ದಾರ್ ಹಾಗೂ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಮಾಜಿ ಉಪ ಪ್ರಧಾನಿ, ಬಿಜೆಪಿ ರಾಷ್ಟ್ರೀಯ ನಾಯಕ ಎಲ್.ಕೆ ಅಡ್ವಾಣಿ ಅವರು ಭ್ರಷ್ಟಾಚಾರದ ವಿರುದ್ಧ ಜಾಗೃತಿಗೆ ದೇಶವ್ಯಾಪಿ ನಡೆಸುತ್ತಿರುವ ಜನಚೇತನ ಯಾತ್ರೆ ರಾಜ್ಯಕ್ಕೆ ಆಗಮಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ಜಿಲ್ಲಾ ಯುವ ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.<br /> <br /> ಭ್ರಷ್ಟಾಚಾರದ ವಿರುದ್ಧ ದೇಶವ್ಯಾಪಿ ಜನಜಾಗೃತಿಗೆ ಒಂದೆಡೆ ಅಡ್ವಾಣಿ ಅವರು ಜನಚೇತನ ಯಾತ್ರೆ ಕೈಗೊಂಡಿದ್ದಾರೆ. ಮತ್ತೊಂದೆಡೆ ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವರಾದ ಕೃಷ್ಣಯ್ಯಶೆಟ್ಟಿ, ಜನಾರ್ದನರೆಡ್ಡಿ, ಕಟ್ಟಾ ಸುಬ್ರಮಣ್ಯ ನಾಯ್ಡು ಹಲವರು ಜೈಲು ಸೇರಿದ್ದಾರೆ. ಇನ್ನೂ ಅನೇಕರು ಜೈಲು ಸೇರುವ ಸರದಿಯಲ್ಲಿದ್ದಾರೆ. ಈ ಸ್ಥಿತಿಯಲ್ಲಿ ಕರ್ನಾಟಕಕ್ಕೆ ಅಡ್ವಾಣಿ ಅವರ ಜನಚೇತನ ಯಾತ್ರೆ ಆಗಮಿಸುತ್ತಿರುವುದಕ್ಕೆ ಅರ್ಥವೇ ಇಲ್ಲ ಎಂದು ಕಾರ್ಯಕರ್ತರು ಪ್ರಶ್ನಿಸಿದರು.<br /> <br /> ಸರ್ಕಾರದ ಅವ್ಯವಹಾರ, ಅಕ್ರಮಗಳ ಬಗ್ಗೆ ವ್ಯಾಪಕ ಆರೋಪಗಳು, ದೂರುಗಳು ಎದುರಾಗುತ್ತಿವೆ. ಬಿಜೆಪಿ ಪಕ್ಷದ ಆಡಳಿತ ಇರುವ ಇಲ್ಲಿನ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸಚಿವರಾದ ಮುರುಗೇಶ ನಿರಾಣಿ, ಆರ್. ಅಶೋಕ ಅವರ ವಿರುದ್ಧವೂ ಆರೋಪಗಳಿವೆ. ಈ ಸ್ಥಿತಿಯಲ್ಲಿ ಅಡ್ವಾಣಿ ಅವರು ಭ್ರಷ್ಟಾಚಾರದ ವಿರುದ್ಧ ಏನು ಉಪದೇಶ ಮಾಡಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಪದಾಧಿಕಾರಿಗಳಾದ ಕೆ. ಗೋಪಿ, ರಿಯಾಜ್, ಮುರಳಿ ಯಾದವ್, ರಾಜೇಶ ಮಡಿವಾಳ, ಪ್ರಶಾಂತ, ಆಂಜನೇಯ, ಶಾಂತಪ್ಪ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎ ವಸಂತಕುಮಾರ, ನಗರ ಘಟಕ ಅಧ್ಯಕ್ಷ ಜಿ ಬಸವರಾಜರೆಡ್ಡಿ, ಕೆ ಶಾಂತಪ್ಪ, ಬಷಿರುದ್ದೀನ್, ರವೀಂದ್ರ ಜಾಲ್ದಾರ್ ಹಾಗೂ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>