<p><strong>ಬೀದರ್:</strong> ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಬರ ಅಧ್ಯಯನ ತಂಡದ ಅಧ್ಯಕ್ಷ, ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು. <br /> <br /> ಬರ ಪರಿಸ್ಥಿತಿ ಕುರಿತು ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹುಮನಾಬಾದ್ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ದಾಸರವಾಡಿ ಗ್ರಾಮದಲ್ಲಿ ಎಲ್ಲ ಬೋರ್ವೆಲ್ಗಳು ಹಾಳಾಗಿವೆ. ತೆರೆದ ಬಾವಿ 2 ಕಿ.ಮೀ. ದೂರದಲ್ಲಿದೆ. ಹೀಗಾಗಿ ಗ್ರಾಮಸ್ಥರು ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ ಎಂದು ಶಾಸಕ ರಾಜಶೇಖರ ಪಾಟೀಲ್ ಗಮನಸೆಳೆದರು.<br /> <br /> ಇಂತಹ ಸಮಸ್ಯೆ ಯಾವುದೇ ಗ್ರಾಮದಲ್ಲಿ ಕಂಡು ಬಂದರೂ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕು ಎಂದರು.<br /> <br /> ಹೋಬಳಿ ಕೇಂದ್ರಗಳಲ್ಲಿ ಏ. 15 ರಿಂದ ಮೇವು ಕೇಂದ್ರಗಳನ್ನು ಆರಂಭಿಸಬೇಕು. ಅದಕ್ಕೆ ಪೂರ್ವಭಾವಿಯಾಗಿ ಮೇವು ದಾಸ್ತಾನು ಮಾಡಿಕೊಳ್ಳಬೇಕು. ಕೆಲಸಕ್ಕಾಗಿ ಅರ್ಜಿ ಸಲ್ಲಿಸಿರುವ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತರಿ ಯೋಜನೆಯಡಿ ನಾಳೆಯಿಂದಲೇ ಕೆಲಸ ಕೊಡಬೇಕು ಎಂದು ಸೂಚಿಸಿದರು.<br /> <br /> ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಗೈರು ಹಾಜರಾದ ಬಗ್ಗೆ ಸಿಟ್ಟಿಗೆದ್ದ ಸಚಿವ ಗೋವಿಂದ ಕಾರಜೋಳ, ಕೂಡಲೇ ಆ ಅಧಿಕಾರಿಯನ್ನು ಅಮಾನತು ಮಾಡಲು ಸಂಬಂಧಪಟ್ಟವರಿಗೆ ಪತ್ರ ಬರೆಯಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕುಡಿಯುವ ನೀರಿಗಾಗಿ ಪ್ರತಿ ತಾಲ್ಲೂಕಿಗೆ ಕೇವಲ ರೂ 30 ಲಕ್ಷ ನಿಗದಿಪಡಿಸಬಾರದು. ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಜನಪ್ರತಿನಿಧಿಗಳು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಬರ ಅಧ್ಯಯನ ತಂಡದ ಅಧ್ಯಕ್ಷ, ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು. <br /> <br /> ಬರ ಪರಿಸ್ಥಿತಿ ಕುರಿತು ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹುಮನಾಬಾದ್ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ದಾಸರವಾಡಿ ಗ್ರಾಮದಲ್ಲಿ ಎಲ್ಲ ಬೋರ್ವೆಲ್ಗಳು ಹಾಳಾಗಿವೆ. ತೆರೆದ ಬಾವಿ 2 ಕಿ.ಮೀ. ದೂರದಲ್ಲಿದೆ. ಹೀಗಾಗಿ ಗ್ರಾಮಸ್ಥರು ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ ಎಂದು ಶಾಸಕ ರಾಜಶೇಖರ ಪಾಟೀಲ್ ಗಮನಸೆಳೆದರು.<br /> <br /> ಇಂತಹ ಸಮಸ್ಯೆ ಯಾವುದೇ ಗ್ರಾಮದಲ್ಲಿ ಕಂಡು ಬಂದರೂ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳಬೇಕು ಎಂದರು.<br /> <br /> ಹೋಬಳಿ ಕೇಂದ್ರಗಳಲ್ಲಿ ಏ. 15 ರಿಂದ ಮೇವು ಕೇಂದ್ರಗಳನ್ನು ಆರಂಭಿಸಬೇಕು. ಅದಕ್ಕೆ ಪೂರ್ವಭಾವಿಯಾಗಿ ಮೇವು ದಾಸ್ತಾನು ಮಾಡಿಕೊಳ್ಳಬೇಕು. ಕೆಲಸಕ್ಕಾಗಿ ಅರ್ಜಿ ಸಲ್ಲಿಸಿರುವ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತರಿ ಯೋಜನೆಯಡಿ ನಾಳೆಯಿಂದಲೇ ಕೆಲಸ ಕೊಡಬೇಕು ಎಂದು ಸೂಚಿಸಿದರು.<br /> <br /> ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಗೈರು ಹಾಜರಾದ ಬಗ್ಗೆ ಸಿಟ್ಟಿಗೆದ್ದ ಸಚಿವ ಗೋವಿಂದ ಕಾರಜೋಳ, ಕೂಡಲೇ ಆ ಅಧಿಕಾರಿಯನ್ನು ಅಮಾನತು ಮಾಡಲು ಸಂಬಂಧಪಟ್ಟವರಿಗೆ ಪತ್ರ ಬರೆಯಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕುಡಿಯುವ ನೀರಿಗಾಗಿ ಪ್ರತಿ ತಾಲ್ಲೂಕಿಗೆ ಕೇವಲ ರೂ 30 ಲಕ್ಷ ನಿಗದಿಪಡಿಸಬಾರದು. ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಜನಪ್ರತಿನಿಧಿಗಳು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>