<p><strong>ಮದ್ದೂರು:</strong> ಮದುವೆ ದಿಬ್ಬಣದ ಲಾರಿಗೆ ಪೊಲೀಸ್ ಜೀಪು ಅಡ್ಡಹಾಕಿದ ಪರಿಣಾಮ ಲಾರಿ ಚರಂಡಿಗೆ ಉರುಳಿದ ಘಟನೆ ಪಟ್ಟಣದ ಎಲ್ಐಸಿ ಕಚೇರಿ ಬಳಿ ಬುಧವಾರ ನಡೆದಿದೆ. ಇದರಿಂದ ಕೆರಳಿದ ಗ್ರಾಮಸ್ಥರು, ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರಲ್ಲದೇ, ಎರಡು ಗಂಟೆಗೂ ಹೆಚ್ಚುಕಾಲ ಹೆದ್ದಾರಿ ತಡೆ ನಡೆಸಿದರು.<br /> <br /> ಚನ್ನಪಟ್ಟಣ ತಾಲ್ಲೂಕಿನ ಮಾಚನಹಳ್ಳಿ ಗ್ರಾಮದ 150ಕ್ಕೂ ಹೆಚ್ಚು ಗ್ರಾಮಸ್ಥರು ಮಂಡ್ಯದಲ್ಲಿ ನಡೆಯುತ್ತಿದ್ದ ಮದುವೆಗೆ ಬರುತ್ತಿದ್ದರು.<br /> <br /> ಮಧ್ಯಾಹ್ನ 3ಗಂಟೆ ಸಮಯದಲ್ಲಿ ಕೆಎಸ್ಆರ್ಟಿಸಿ ಬಸ್ನಿಲ್ದಾಣದ ಬಳಿ ಲಾರಿ ಬರುತ್ತಿದ್ದಂತೆ ಸಂಚಾರಿ ಪೇದೆಯೊಬ್ಬರು ಅಡ್ಡಗಟ್ಟಿದರು. ಚಾಲಕ ಲಾರಿಯನ್ನು ನಿಲ್ಲಿಸಲಿಲ್ಲ.<br /> <br /> ಲಾರಿ ಬೆನ್ನಟ್ಟಿದ ಸಂಚಾರಿ ಜೀಪು ಎಲ್ಐಸಿ ಕಚೇರಿ ಬಳಿ ಅಡ್ಡಗಟ್ಟಿತು. ಇದರಿಂದ ನಿಯಂತ್ರಣ ಕಳೆದುಕೊಂಡ ಲಾರಿ ದೊಡ್ಡ ಚರಂಡಿಗೆ ಉರುಳಿತು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಅಪಘಾತಕ್ಕೆ ಕಾರಣರಾದ ಪೊಲೀಸರ ವಿರುದ್ಧ ಘೋಷಣೆ ಮೊಳಗಿಸಿದರು. ಲಾರಿ ಅಡ್ಡಗಟ್ಟಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿದರು.<br /> <br /> ಎರಡು ಗಂಟೆಗೂ ಹೆಚ್ಚುಕಾಲ ಹೆದ್ದಾರಿಯ ಎರಡು ಬದಿಯಲ್ಲೂ ಧರಣಿ ಕುಳಿತಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು.<br /> <br /> ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಸಂಚಾರಿ ಪಿಎಸ್ಐ ಗೋಪಿನಾಥ್, ಪಿಎಸ್ಐ ಮಹೇಶ್ ಉದ್ರಿಕ್ತ ಗ್ರಾಮಸ್ಥರನ್ನು ಸಮಾಧಾನಪಡಿಸಿದರು. ತಪ್ಪು ಮಾಡಿದ ಪೊಲೀಸರ ವಿರುದ್ಧ ದೂರು ನೀಡಿದರೆ ಅವರ ಮೇಲೆ ಕ್ರಮ ಜರುಗಿಸುತ್ತೇವೆ ಎಂಬ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಸಮಾಧಾನಗೊಂಡು ಪ್ರತಿಭಟನೆಯನ್ನು ಹಿಂಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಮದುವೆ ದಿಬ್ಬಣದ ಲಾರಿಗೆ ಪೊಲೀಸ್ ಜೀಪು ಅಡ್ಡಹಾಕಿದ ಪರಿಣಾಮ ಲಾರಿ ಚರಂಡಿಗೆ ಉರುಳಿದ ಘಟನೆ ಪಟ್ಟಣದ ಎಲ್ಐಸಿ ಕಚೇರಿ ಬಳಿ ಬುಧವಾರ ನಡೆದಿದೆ. ಇದರಿಂದ ಕೆರಳಿದ ಗ್ರಾಮಸ್ಥರು, ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರಲ್ಲದೇ, ಎರಡು ಗಂಟೆಗೂ ಹೆಚ್ಚುಕಾಲ ಹೆದ್ದಾರಿ ತಡೆ ನಡೆಸಿದರು.<br /> <br /> ಚನ್ನಪಟ್ಟಣ ತಾಲ್ಲೂಕಿನ ಮಾಚನಹಳ್ಳಿ ಗ್ರಾಮದ 150ಕ್ಕೂ ಹೆಚ್ಚು ಗ್ರಾಮಸ್ಥರು ಮಂಡ್ಯದಲ್ಲಿ ನಡೆಯುತ್ತಿದ್ದ ಮದುವೆಗೆ ಬರುತ್ತಿದ್ದರು.<br /> <br /> ಮಧ್ಯಾಹ್ನ 3ಗಂಟೆ ಸಮಯದಲ್ಲಿ ಕೆಎಸ್ಆರ್ಟಿಸಿ ಬಸ್ನಿಲ್ದಾಣದ ಬಳಿ ಲಾರಿ ಬರುತ್ತಿದ್ದಂತೆ ಸಂಚಾರಿ ಪೇದೆಯೊಬ್ಬರು ಅಡ್ಡಗಟ್ಟಿದರು. ಚಾಲಕ ಲಾರಿಯನ್ನು ನಿಲ್ಲಿಸಲಿಲ್ಲ.<br /> <br /> ಲಾರಿ ಬೆನ್ನಟ್ಟಿದ ಸಂಚಾರಿ ಜೀಪು ಎಲ್ಐಸಿ ಕಚೇರಿ ಬಳಿ ಅಡ್ಡಗಟ್ಟಿತು. ಇದರಿಂದ ನಿಯಂತ್ರಣ ಕಳೆದುಕೊಂಡ ಲಾರಿ ದೊಡ್ಡ ಚರಂಡಿಗೆ ಉರುಳಿತು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಅಪಘಾತಕ್ಕೆ ಕಾರಣರಾದ ಪೊಲೀಸರ ವಿರುದ್ಧ ಘೋಷಣೆ ಮೊಳಗಿಸಿದರು. ಲಾರಿ ಅಡ್ಡಗಟ್ಟಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿದರು.<br /> <br /> ಎರಡು ಗಂಟೆಗೂ ಹೆಚ್ಚುಕಾಲ ಹೆದ್ದಾರಿಯ ಎರಡು ಬದಿಯಲ್ಲೂ ಧರಣಿ ಕುಳಿತಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು.<br /> <br /> ಅಷ್ಟರಲ್ಲಿ ಸ್ಥಳಕ್ಕೆ ಆಗಮಿಸಿದ ಸಂಚಾರಿ ಪಿಎಸ್ಐ ಗೋಪಿನಾಥ್, ಪಿಎಸ್ಐ ಮಹೇಶ್ ಉದ್ರಿಕ್ತ ಗ್ರಾಮಸ್ಥರನ್ನು ಸಮಾಧಾನಪಡಿಸಿದರು. ತಪ್ಪು ಮಾಡಿದ ಪೊಲೀಸರ ವಿರುದ್ಧ ದೂರು ನೀಡಿದರೆ ಅವರ ಮೇಲೆ ಕ್ರಮ ಜರುಗಿಸುತ್ತೇವೆ ಎಂಬ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಸಮಾಧಾನಗೊಂಡು ಪ್ರತಿಭಟನೆಯನ್ನು ಹಿಂಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>