<p>ವಿಜಾಪುರ: `ವಿಜಾಪುರ ಸೇರಿದಂತೆ ಯಾವುದೇ ನಗರದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ. ಪರೀಕ್ಷೆ ಸಮಯವಾಗಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಸಂಜೆ 6ರಿಂದ ಬೆಳಿಗ್ಗೆ 6ರವರೆಗೆ ನಿರಂತರವಾಗಿ ಸಿಂಗಲ್ ಫೇಸ್ ವಿದ್ಯುತ್ ಪೂರೈಸಲು ಸೂಚಿಸಲಾಗಿದೆ~ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.<br /> <br /> ತಾಲ್ಲೂಕಿನ ಬಬಲೇಶ್ವರದಲ್ಲಿ ನಿರ್ಮಿಸಿರುವ 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.<br /> <br /> ಇದರ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ನಿತ್ಯ 6 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ. ರಾಜ್ಯದಲ್ಲಿ ಈಗ ನಿತ್ಯ 1,000 ಮೆ.ವಾ ವಿದ್ಯುತ್ ಕೊರತೆ ಇದೆ. <br /> <br /> ಪೂರೈಕೆಯಾಗುತ್ತಿರುವ ವಿದ್ಯುತ್ನಲ್ಲಿ ಸುಮಾರು 2,000 ಮೆ.ವಾನಷ್ಟು ಹಾನಿಯಾಗುತ್ತಿದೆ. ರಾಜ್ಯದಲ್ಲಿಯೇ ಹೆಸ್ಕಾಂ ವ್ಯಾಪ್ತಿಯಲ್ಲಿ ಅತಿ ಹೆಚ್ಚು (ಶೇ 24) ಹಾನಿ ಇದೆ. ವಿದ್ಯುತ್ ವಿತರಣಾ ಕೇಂದ್ರಗಳು ಹಾಗೂ ಲೈನ್ಗಳ ಕೊರತೆ ಇದಕ್ಕೆ ಕಾರಣ ಎಂದರು.<br /> <br /> ಕೂಡಗಿಯ ವಿದ್ಯುತ್ ಸ್ಥಾವರಕ್ಕೆ ಎನ್ಟಿಪಿಸಿ ಟೆಂಡರ್ ಕರೆದ ತಕ್ಷಣ ಅಡಿಗಲ್ಲು ನೆರವೇರಿಸಲಾಗುವುದು. ಅಲ್ಲಿ ಉತ್ಪಾದನೆಯಾಗುವ ವಿದ್ಯುತ್ಬಳಸಲಿಕ್ಕಾಗಿ ವಿತರಣಾ ಜಾಲ ನಿರ್ಮಿಸಲು ರೂ1000 ಕೋಟಿ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಗುಲ್ಬರ್ಗ, ಬೆಳಗಾವಿ, ಮಂಗಳೂರು, ಬೆಂಗಳೂರು ವಿಭಾಗದಲ್ಲಿ 3 ಮೆ.ವಾ ಸೋಲಾರ್ ವಿದ್ಯುತ್ ಉತ್ಪಾದನಾ ಕೇಂದ್ರವನ್ನು ಆರಂಭಿಸಲಾಗುವುದು ಎಂದರು.<br /> <br /> ರಾಜ್ಯದ ಇತಿಹಾಸದಲ್ಲಿ ಕಳೆದ ಮೂರು ದಿನಗಳಲ್ಲಿ 8,606 ಮೆ.ವಾ ವಿದ್ಯುತ್ ಪೂರೈಸಿರುವುದು ದಾಖಲೆ ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ, ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಾಪುರ: `ವಿಜಾಪುರ ಸೇರಿದಂತೆ ಯಾವುದೇ ನಗರದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ. ಪರೀಕ್ಷೆ ಸಮಯವಾಗಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಸಂಜೆ 6ರಿಂದ ಬೆಳಿಗ್ಗೆ 6ರವರೆಗೆ ನಿರಂತರವಾಗಿ ಸಿಂಗಲ್ ಫೇಸ್ ವಿದ್ಯುತ್ ಪೂರೈಸಲು ಸೂಚಿಸಲಾಗಿದೆ~ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.<br /> <br /> ತಾಲ್ಲೂಕಿನ ಬಬಲೇಶ್ವರದಲ್ಲಿ ನಿರ್ಮಿಸಿರುವ 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.<br /> <br /> ಇದರ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ನಿತ್ಯ 6 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ. ರಾಜ್ಯದಲ್ಲಿ ಈಗ ನಿತ್ಯ 1,000 ಮೆ.ವಾ ವಿದ್ಯುತ್ ಕೊರತೆ ಇದೆ. <br /> <br /> ಪೂರೈಕೆಯಾಗುತ್ತಿರುವ ವಿದ್ಯುತ್ನಲ್ಲಿ ಸುಮಾರು 2,000 ಮೆ.ವಾನಷ್ಟು ಹಾನಿಯಾಗುತ್ತಿದೆ. ರಾಜ್ಯದಲ್ಲಿಯೇ ಹೆಸ್ಕಾಂ ವ್ಯಾಪ್ತಿಯಲ್ಲಿ ಅತಿ ಹೆಚ್ಚು (ಶೇ 24) ಹಾನಿ ಇದೆ. ವಿದ್ಯುತ್ ವಿತರಣಾ ಕೇಂದ್ರಗಳು ಹಾಗೂ ಲೈನ್ಗಳ ಕೊರತೆ ಇದಕ್ಕೆ ಕಾರಣ ಎಂದರು.<br /> <br /> ಕೂಡಗಿಯ ವಿದ್ಯುತ್ ಸ್ಥಾವರಕ್ಕೆ ಎನ್ಟಿಪಿಸಿ ಟೆಂಡರ್ ಕರೆದ ತಕ್ಷಣ ಅಡಿಗಲ್ಲು ನೆರವೇರಿಸಲಾಗುವುದು. ಅಲ್ಲಿ ಉತ್ಪಾದನೆಯಾಗುವ ವಿದ್ಯುತ್ಬಳಸಲಿಕ್ಕಾಗಿ ವಿತರಣಾ ಜಾಲ ನಿರ್ಮಿಸಲು ರೂ1000 ಕೋಟಿ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಗುಲ್ಬರ್ಗ, ಬೆಳಗಾವಿ, ಮಂಗಳೂರು, ಬೆಂಗಳೂರು ವಿಭಾಗದಲ್ಲಿ 3 ಮೆ.ವಾ ಸೋಲಾರ್ ವಿದ್ಯುತ್ ಉತ್ಪಾದನಾ ಕೇಂದ್ರವನ್ನು ಆರಂಭಿಸಲಾಗುವುದು ಎಂದರು.<br /> <br /> ರಾಜ್ಯದ ಇತಿಹಾಸದಲ್ಲಿ ಕಳೆದ ಮೂರು ದಿನಗಳಲ್ಲಿ 8,606 ಮೆ.ವಾ ವಿದ್ಯುತ್ ಪೂರೈಸಿರುವುದು ದಾಖಲೆ ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ, ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>