<p><strong>ಬೆಂಗಳೂರು:</strong> ‘ಮಲೆನಾಡಿನ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿ ಕುರಿತು’ ಪಶ್ಚಿಮ ಘಟ್ಟ ಕಾರ್ಯಪಡೆ ಸರ್ಕಾರಕ್ಕೆ ಮಂಗಳವಾರ ತನ್ನ ಶಿಫಾರಸುಗಳನ್ನು ಸಲ್ಲಿಸಿತು.ಕಾರ್ಯಪಡೆಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಿಫಾರಸುಗಳ ಪಟ್ಟಿಯನ್ನು ಹಸ್ತಾಂತರಿಸಿದರು.<br /> <br /> ಮಲೆನಾಡಿನ ಸುಸ್ಥಿರ ಅಭಿವೃದ್ಧಿ ಕುರಿತು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಇದೇ 12ರಂದು ನಡೆದ ಸಮ್ಮೇಳನದಲ್ಲಿ ಚರ್ಚೆಯಾದ ವಿಷಯಗಳ ಆಧಾರದಲ್ಲಿ ಈ ಶಿಫಾರಸುಗಳನ್ನು ಮಾಡಲಾಗಿದೆ ಎಂದು ಆಶೀಸರ ಅವರು ತಿಳಿಸಿದರು.ಪ್ರಮುಖ ಶಿಫಾರಸುಗಳು: ಮಲೆನಾಡು ಸೂಕ್ಷ್ಮ ಪರಿಸರ ಹೊಂದಿರುವ ಕಾರಣ ಆ ಪ್ರದೇಶದಲ್ಲಿ ಸಹನಶೀಲ ಅಭಿವೃದ್ಧಿ ಯೋಜನೆಗಳನ್ನು ರೂಪಿಸಬೇಕು. ಸಮಗ್ರ ಭೂ ಬಳಕೆ ನೀತಿ ಜಾರಿಗೆ ತರಬೇಕು. ಮಲೆನಾಡಿಗೆ ಸೂಕ್ತವಾದ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಈ ನೀತಿಯ ಆಧಾರದ ಮೇಲೆ ರೂಪಿಸಬೇಕು ಎಂದು ಶಿಫಾರಸು ಮಾಡಲಾಗಿದೆ.<br /> <br /> ‘ಬೃಹತ್ ಗಣಿಗಾರಿಕೆ ನಿಷೇಧಿಸಿ’: ಪಶ್ಚಿಮ ಘಟ್ಟದಲ್ಲಿ ಬೃಹತ್ ಗಣಿಗಾರಿಕೆ ನಿಷೇಧಿಸಿ ಆದೇಶ ಹೊರಡಿಸಬೇಕು.ಮಲೆನಾಡಿನ ಅರಣ್ಯ ಅತಿಕ್ರಮಣವನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಮಲೆನಾಡಿನ ವನವಾಸಿ ಹಳ್ಳಿಗಳಲ್ಲಿ ಶಿಕ್ಷಣ ಸೌಲಭ್ಯ ನೀಡಲು ಪ್ರತ್ಯೇಕ ಯೋಜನೆ ರೂಪಿಸಬೇಕು ಎಂದು ಸ್ಪಷ್ಟವಾಗಿ ಆಗ್ರಹಿಸಲಾಗಿದೆ.<br /> <br /> ತೋಟಗಾರಿಕೆ, ಹೈನುಗಾರಿಕೆ, ಪರಿಸರ ಪ್ರವಾಸೋದ್ಯಮಗಳನ್ನು ಆದ್ಯತಾ ಕ್ಷೇತ್ರಗಳೆಂದು ಪರಿಗಣಿಸಿ ಅವುಗಳ ಪ್ರೋತ್ಸಾಹಕ್ಕೆ ಕಾರ್ಯಕ್ರಮ ರೂಪಿಸಬೇಕು. ಹಳ್ಳಿಯ ಯುವಕರಿಗೆ ರೈತ ಸಂಪರ್ಕ ಕೇಂದ್ರ ಮತ್ತು ರುಡ್ಸೆಟ್ ಸಂಸ್ಥೆಗಳ ಸಹಾಯದೊಂದಿಗೆ ಕೃಷಿ ಮತ್ತು ಕೃಷಿ ಉತ್ಪನ್ನಗಳ ಗುಣವರ್ಧನೆ ಕುರಿತು ನಿರಂತರ ತರಬೇತಿ ನೀಡಬೇಕು ಎಂದು ಶಿಫಾರಸಿನಲ್ಲಿ ಹೇಳಲಾಗಿದೆ.<br /> <br /> ಮಲೆನಾಡಿನ ಎಲ್ಲ ಹಳ್ಳಿಗಳಿಗೆ ಸೂಕ್ತ ಮತ್ತು ಸರ್ವಋತು ರಸ್ತೆ ಒದಗಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಲೆನಾಡಿನ ಜಲಮೂಲಗಳು, ನದಿಗಳ ಜಲಸಂವರ್ಧನೆಗೆ ನೀರಾವರಿ ಯೋಜನೆಗಳ ಶೇಕಡ 20ರಷ್ಟು ಹಣವನ್ನು ಮೀಸಲಿಡಬೇಕು ಎಂದು ಆಗ್ರಹಿಸಲಾಗಿದೆ.<br /> <br /> ಜನಸಂಖ್ಯೆಯ ಆಧಾರದಲ್ಲಿ ಅನುದಾನ ನೀಡುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿಯಲ್ಲಿ ಮಲೆನಾಡು ಪ್ರದೇಶಕ್ಕೆ ನ್ಯಾಯ ಸಿಗುತ್ತಿಲ್ಲ ಎಂದು ಶಿಫಾರಸಿನಲ್ಲಿ ದೂರಲಾಗಿದ್ದು, ಅರಣ್ಯ ವಾಸಿಗಳು ಮತ್ತುಮಲೆನಾಡಿನ ಹಳ್ಳಿಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕು ಎಂದು ಕೋರಲಾಗಿದೆ.<br /> <br /> ನಕ್ಸಲ್ ಪೀಡಿತ ಪ್ರದೇಶಗಳೂ ಸೇರಿದಂತೆ ಎಲ್ಲೆಡೆ ವನವಾಸಿಗಳನ್ನು ಅರಣ್ಯ ರಕ್ಷಣೆ ಮತ್ತು ಅಭಿವೃದ್ಧಿ ಯೋಜನೆಗಳಲ್ಲಿ ತೊಡಗಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಶಿಫಾರಸು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮಲೆನಾಡಿನ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿ ಕುರಿತು’ ಪಶ್ಚಿಮ ಘಟ್ಟ ಕಾರ್ಯಪಡೆ ಸರ್ಕಾರಕ್ಕೆ ಮಂಗಳವಾರ ತನ್ನ ಶಿಫಾರಸುಗಳನ್ನು ಸಲ್ಲಿಸಿತು.ಕಾರ್ಯಪಡೆಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಿಫಾರಸುಗಳ ಪಟ್ಟಿಯನ್ನು ಹಸ್ತಾಂತರಿಸಿದರು.<br /> <br /> ಮಲೆನಾಡಿನ ಸುಸ್ಥಿರ ಅಭಿವೃದ್ಧಿ ಕುರಿತು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಇದೇ 12ರಂದು ನಡೆದ ಸಮ್ಮೇಳನದಲ್ಲಿ ಚರ್ಚೆಯಾದ ವಿಷಯಗಳ ಆಧಾರದಲ್ಲಿ ಈ ಶಿಫಾರಸುಗಳನ್ನು ಮಾಡಲಾಗಿದೆ ಎಂದು ಆಶೀಸರ ಅವರು ತಿಳಿಸಿದರು.ಪ್ರಮುಖ ಶಿಫಾರಸುಗಳು: ಮಲೆನಾಡು ಸೂಕ್ಷ್ಮ ಪರಿಸರ ಹೊಂದಿರುವ ಕಾರಣ ಆ ಪ್ರದೇಶದಲ್ಲಿ ಸಹನಶೀಲ ಅಭಿವೃದ್ಧಿ ಯೋಜನೆಗಳನ್ನು ರೂಪಿಸಬೇಕು. ಸಮಗ್ರ ಭೂ ಬಳಕೆ ನೀತಿ ಜಾರಿಗೆ ತರಬೇಕು. ಮಲೆನಾಡಿಗೆ ಸೂಕ್ತವಾದ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಈ ನೀತಿಯ ಆಧಾರದ ಮೇಲೆ ರೂಪಿಸಬೇಕು ಎಂದು ಶಿಫಾರಸು ಮಾಡಲಾಗಿದೆ.<br /> <br /> ‘ಬೃಹತ್ ಗಣಿಗಾರಿಕೆ ನಿಷೇಧಿಸಿ’: ಪಶ್ಚಿಮ ಘಟ್ಟದಲ್ಲಿ ಬೃಹತ್ ಗಣಿಗಾರಿಕೆ ನಿಷೇಧಿಸಿ ಆದೇಶ ಹೊರಡಿಸಬೇಕು.ಮಲೆನಾಡಿನ ಅರಣ್ಯ ಅತಿಕ್ರಮಣವನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು, ಮಲೆನಾಡಿನ ವನವಾಸಿ ಹಳ್ಳಿಗಳಲ್ಲಿ ಶಿಕ್ಷಣ ಸೌಲಭ್ಯ ನೀಡಲು ಪ್ರತ್ಯೇಕ ಯೋಜನೆ ರೂಪಿಸಬೇಕು ಎಂದು ಸ್ಪಷ್ಟವಾಗಿ ಆಗ್ರಹಿಸಲಾಗಿದೆ.<br /> <br /> ತೋಟಗಾರಿಕೆ, ಹೈನುಗಾರಿಕೆ, ಪರಿಸರ ಪ್ರವಾಸೋದ್ಯಮಗಳನ್ನು ಆದ್ಯತಾ ಕ್ಷೇತ್ರಗಳೆಂದು ಪರಿಗಣಿಸಿ ಅವುಗಳ ಪ್ರೋತ್ಸಾಹಕ್ಕೆ ಕಾರ್ಯಕ್ರಮ ರೂಪಿಸಬೇಕು. ಹಳ್ಳಿಯ ಯುವಕರಿಗೆ ರೈತ ಸಂಪರ್ಕ ಕೇಂದ್ರ ಮತ್ತು ರುಡ್ಸೆಟ್ ಸಂಸ್ಥೆಗಳ ಸಹಾಯದೊಂದಿಗೆ ಕೃಷಿ ಮತ್ತು ಕೃಷಿ ಉತ್ಪನ್ನಗಳ ಗುಣವರ್ಧನೆ ಕುರಿತು ನಿರಂತರ ತರಬೇತಿ ನೀಡಬೇಕು ಎಂದು ಶಿಫಾರಸಿನಲ್ಲಿ ಹೇಳಲಾಗಿದೆ.<br /> <br /> ಮಲೆನಾಡಿನ ಎಲ್ಲ ಹಳ್ಳಿಗಳಿಗೆ ಸೂಕ್ತ ಮತ್ತು ಸರ್ವಋತು ರಸ್ತೆ ಒದಗಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಲೆನಾಡಿನ ಜಲಮೂಲಗಳು, ನದಿಗಳ ಜಲಸಂವರ್ಧನೆಗೆ ನೀರಾವರಿ ಯೋಜನೆಗಳ ಶೇಕಡ 20ರಷ್ಟು ಹಣವನ್ನು ಮೀಸಲಿಡಬೇಕು ಎಂದು ಆಗ್ರಹಿಸಲಾಗಿದೆ.<br /> <br /> ಜನಸಂಖ್ಯೆಯ ಆಧಾರದಲ್ಲಿ ಅನುದಾನ ನೀಡುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿಯಲ್ಲಿ ಮಲೆನಾಡು ಪ್ರದೇಶಕ್ಕೆ ನ್ಯಾಯ ಸಿಗುತ್ತಿಲ್ಲ ಎಂದು ಶಿಫಾರಸಿನಲ್ಲಿ ದೂರಲಾಗಿದ್ದು, ಅರಣ್ಯ ವಾಸಿಗಳು ಮತ್ತುಮಲೆನಾಡಿನ ಹಳ್ಳಿಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕು ಎಂದು ಕೋರಲಾಗಿದೆ.<br /> <br /> ನಕ್ಸಲ್ ಪೀಡಿತ ಪ್ರದೇಶಗಳೂ ಸೇರಿದಂತೆ ಎಲ್ಲೆಡೆ ವನವಾಸಿಗಳನ್ನು ಅರಣ್ಯ ರಕ್ಷಣೆ ಮತ್ತು ಅಭಿವೃದ್ಧಿ ಯೋಜನೆಗಳಲ್ಲಿ ತೊಡಗಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಶಿಫಾರಸು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>