<p><strong>ಸಿಂದಗಿ:</strong> ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಪಾಕ್ ಧ್ವಜ ಹಾರಿಸಿದ ಆರೋಪದ ಮೇಲೆ ಪೊಲೀಸರು ಭಾನುವಾರ ಅರುಣಕುಮಾರ ಶಶಿಧರ ವಾಘ್ಮೋರೆ (19) ಎಂಬುವನನ್ನು ಬಂಧಿಸಿದ್ದಾರೆ. ಇದರಿಂದಾಗಿ ಒಟ್ಟು ಬಂಧಿತರ ಸಂಖ್ಯೆ ಏಳಕ್ಕೇರಿದೆ.</p>.<p>ಈತ ನಾಲ್ಕೈದು ದಿನಗಳಿಂದ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಭಾನುವಾರ ಬಂಧಿಸಿದ ಇನ್ಸ್ಪೆಕ್ಟರ್ ಎಂ.ಚಿದಂಬರ ಅವರು ಆತನನ್ನು ತನಿಖಾಧಿಕಾರಿ ಡಿವೈಎಸ್ಪಿ ಎಂ.ಮುತ್ತುರಾಜ್ ಅವರ ವಶಕ್ಕೆ ಒಪ್ಪಿಸಿದ್ದಾರೆ.</p>.<p>ಆರೋಪಿ ಗದಗ ನಗರದಲ್ಲಿರುವ ಸುಳಿವನ್ನು ಹಿಡಿದು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.<br /> ಅರುಣ ವಾಘ್ಮೋರೆ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಜನಿಸಿದ್ದು, ಅಲ್ಲಿಯೇ ಪ್ರಾಥಮಿಕ ಶಿಕ್ಷಣ ಮುಗಿಸಿ ನಂತರ ಸಿಂದಗಿ ಪಟ್ಟಣದಲ್ಲಿ ಪ್ರೌಢಶಿಕ್ಷಣ, ಪಿಯುಸಿ ಕಲಿತಿದ್ದಾನೆ.</p>.<p>`ಈತನ ತಂದೆ ಕಳೆದ ವರ್ಷವಷ್ಟೇ ಯಕೃತ್ ತೊಂದರೆಯಿಂದ ಮೃತನಾಗಿದ್ದಾರೆ. ತಾಯಿ ಬಾಂಡೆ ಅವರು ಸಾಮಗ್ರಿಗಳನ್ನು ಮಾರುತ್ತಾರೆ. ತುಂಬಾ ಕಡು ಬಡತನದ ಈ ಕುಟುಂಬದ ಇಬ್ಬರು ಹೆಣ್ಮಕ್ಕಳ ಮದುವೆಯನ್ನು ಇಡೀ ಗೋಂದಳಿ ಸಮುದಾಯದ ಜನರು ಹಣ ಸಂಗ್ರಹಿಸಿ ಮಾಡಿದ್ದಾರೆ. ಆದರೆ ಈ ಹುಡುಗ ಸಂಘ ದೋಷದಿಂದಾಗಿ ಇಂಥ ದೇಶದ್ರೋಹ ಕೃತ್ಯದಲ್ಲಿ ಭಾಗಿಯಾಗಿರುವುದು ಇಡೀ ಗೋಂದಳಿ ಸಮುದಾಯಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಇದೊಂದು ದಿಗ್ಬ್ರಮೆಯನ್ನುಂಟು ಮಾಡುವ ಸಂಗತಿಯಾಗಿದೆ~ ಎಂದು ಅರುಣಕುಮಾರನ ಮಾವ ನಾಮದೇವ ಕಾಂಬಳೆ `ಪ್ರಜಾವಾಣಿ~ಗೆ ತಿಳಿಸಿದರು.</p>.<p>ಈ ಪ್ರಕರಣದಲ್ಲಿ ಈಗಾಗಲೇ ಬಂಧಿತನಾದ ಆರೋಪಿ ಪರಶುರಾಮ ವಾಘ್ಮೋರೆ ಈತನ ಅಣ್ಣ (ಚಿಕ್ಕಪ್ಪನ ಮಗ) ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಪಾಕ್ ಧ್ವಜ ಹಾರಿಸಿದ ಆರೋಪದ ಮೇಲೆ ಪೊಲೀಸರು ಭಾನುವಾರ ಅರುಣಕುಮಾರ ಶಶಿಧರ ವಾಘ್ಮೋರೆ (19) ಎಂಬುವನನ್ನು ಬಂಧಿಸಿದ್ದಾರೆ. ಇದರಿಂದಾಗಿ ಒಟ್ಟು ಬಂಧಿತರ ಸಂಖ್ಯೆ ಏಳಕ್ಕೇರಿದೆ.</p>.<p>ಈತ ನಾಲ್ಕೈದು ದಿನಗಳಿಂದ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಭಾನುವಾರ ಬಂಧಿಸಿದ ಇನ್ಸ್ಪೆಕ್ಟರ್ ಎಂ.ಚಿದಂಬರ ಅವರು ಆತನನ್ನು ತನಿಖಾಧಿಕಾರಿ ಡಿವೈಎಸ್ಪಿ ಎಂ.ಮುತ್ತುರಾಜ್ ಅವರ ವಶಕ್ಕೆ ಒಪ್ಪಿಸಿದ್ದಾರೆ.</p>.<p>ಆರೋಪಿ ಗದಗ ನಗರದಲ್ಲಿರುವ ಸುಳಿವನ್ನು ಹಿಡಿದು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.<br /> ಅರುಣ ವಾಘ್ಮೋರೆ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಜನಿಸಿದ್ದು, ಅಲ್ಲಿಯೇ ಪ್ರಾಥಮಿಕ ಶಿಕ್ಷಣ ಮುಗಿಸಿ ನಂತರ ಸಿಂದಗಿ ಪಟ್ಟಣದಲ್ಲಿ ಪ್ರೌಢಶಿಕ್ಷಣ, ಪಿಯುಸಿ ಕಲಿತಿದ್ದಾನೆ.</p>.<p>`ಈತನ ತಂದೆ ಕಳೆದ ವರ್ಷವಷ್ಟೇ ಯಕೃತ್ ತೊಂದರೆಯಿಂದ ಮೃತನಾಗಿದ್ದಾರೆ. ತಾಯಿ ಬಾಂಡೆ ಅವರು ಸಾಮಗ್ರಿಗಳನ್ನು ಮಾರುತ್ತಾರೆ. ತುಂಬಾ ಕಡು ಬಡತನದ ಈ ಕುಟುಂಬದ ಇಬ್ಬರು ಹೆಣ್ಮಕ್ಕಳ ಮದುವೆಯನ್ನು ಇಡೀ ಗೋಂದಳಿ ಸಮುದಾಯದ ಜನರು ಹಣ ಸಂಗ್ರಹಿಸಿ ಮಾಡಿದ್ದಾರೆ. ಆದರೆ ಈ ಹುಡುಗ ಸಂಘ ದೋಷದಿಂದಾಗಿ ಇಂಥ ದೇಶದ್ರೋಹ ಕೃತ್ಯದಲ್ಲಿ ಭಾಗಿಯಾಗಿರುವುದು ಇಡೀ ಗೋಂದಳಿ ಸಮುದಾಯಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಇದೊಂದು ದಿಗ್ಬ್ರಮೆಯನ್ನುಂಟು ಮಾಡುವ ಸಂಗತಿಯಾಗಿದೆ~ ಎಂದು ಅರುಣಕುಮಾರನ ಮಾವ ನಾಮದೇವ ಕಾಂಬಳೆ `ಪ್ರಜಾವಾಣಿ~ಗೆ ತಿಳಿಸಿದರು.</p>.<p>ಈ ಪ್ರಕರಣದಲ್ಲಿ ಈಗಾಗಲೇ ಬಂಧಿತನಾದ ಆರೋಪಿ ಪರಶುರಾಮ ವಾಘ್ಮೋರೆ ಈತನ ಅಣ್ಣ (ಚಿಕ್ಕಪ್ಪನ ಮಗ) ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>