<p><strong>ಚಿತ್ರದುರ್ಗ:</strong> ಚುನಾವಣೆಯಲ್ಲಿ ಎಲ್ಲ ರೀತಿಯ ಅಕ್ರಮಗಳಿಗೆ ಕಡಿವಾಣ ಹಾಕುವ ಪಾರದರ್ಶಕ ನೀತಿಯನ್ನು ಜಾರಿಗೊಳಿಸಬೇಕು ಎಂದು ಬಹು ಜನ ಸಮಾಜ ಪಕ್ಷ ಒತ್ತಾಯಿಸಿದೆ.<br /> <br /> ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ಪಕ್ಷದ ಕಾರ್ಯಕರ್ತರು, ಕೇಂದ್ರ ಚುನಾವಣಾ ಆಯೋಗ ಮತ್ತು ರಾಜ್ಯ ಚುನಾವಣಾ ಆಯೋಗಗಳು ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲದಂತಾ ಗಿವೆ ಎಂದು ದೂರಿದರು.<br /> <br /> ಇದುವರೆಗೆ ನಡೆದಿರುವ ವಿಧಾನಸಭೆ, ಲೋಕಸಭೆ ಚುನಾವಣೆ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಈ ದೇಶದ ಶೇ. 85ರಷ್ಟಿರುವ ಬಹುಸಂಖ್ಯಾತ ಬಡಜನರ ಮತಗಳನ್ನು ಆಸೆ, ಆಮಿಷ ತೋರಿಸಿ ಖರೀದಿಸಲಾಗುತ್ತಿದೆ. ಆದ್ದರಿಂದ ಈಗಿರುವ ಚುನಾವಣಾ ನೀತಿ ಸಂಹಿತೆಯನ್ನು ತೆಗೆದುಹಾಕಿ ಪಾರದರ್ಶಕ ನೀತಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.<br /> <br /> ಅಕ್ರಮ ನಡೆಯುತ್ತಿದ್ದರೂ ಜಿಲ್ಲೆಗಳಲ್ಲಿರುವ ಚುನಾವಣಾಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಾರೆ. ಇಂತಹವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಂಡು ಅನ್ಯಾಯ ತಡೆಯಬೇಕು ಎಂದು ಚುನಾವಣಾ ಆಯೋಗ ಮತ್ತು ರಾಜ್ಯಪಾಲರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.</p>.<p>ಕರಾಜ್ಯದಲ್ಲಿ ದಲಿತರಿಗೆ ಮತ್ತು ಬಡಜನರಿಗೆ ವಿವಿಧ ಇಲಾಖೆಗಳನ್ನು ಸ್ಥಾಪಿಸಿದ್ದರೂ ನಿಜವಾದ ಫಲಾನುಭವಿಗಳಿಗೆ ಸೌಲಭ್ಯ ದೊರೆಯುತ್ತಿಲ್ಲ. ಜಿಲ್ಲೆಯಲ್ಲಿನ ಆಯಾ ಕ್ಷೇತ್ರದ ಶಾಸಕರ ಜತೆ ಇರುವ ಬೆಂಬಲಿಗರಿಗೆ ಹಾಗೂ ಆಯಾ ಪಕ್ಷದ ಕಾರ್ಯಕರ್ತರಿಗೆ ಮತ್ತು ಹಣವಂತರಿಗೆ ಸೌಲಭ್ಯ ಹಂಚಿಕೆಯಾಗುತ್ತಿವೆ ಎಂದು ದೂರಿದರು.<br /> <br /> ಆದ್ದರಿಂದ ಶಾಸಕರಿಗೆ ನೀಡಿರುವ ಅಧಿಕಾರವನ್ನು ಕಡಿತಗೊಳಿಸಿ ಜಿಲ್ಲೆ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳಿಗೆ ಅಥವಾ ವ್ಯವಸ್ಥಾಪಕರಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕು ಎಂದರು.<br /> <br /> ಧರಣಿಯಲ್ಲಿ ಬಿ. ಮಹಂತೇಶ್ ಕೂನಬೇವು, ಜಿ.ಆರ್. ಪಾಂಡುರಂಗಪ್ಪ, ಕೆ. ತಿಮ್ಮಪ್ಪ, ಜಿ.ಟಿ. ಸುಂದರೇಶ್, ಎಸ್. ವೆಂಕಟೇಶ್, ಎಂ. ತಿಪ್ಪೇಸ್ವಾಮಿ, ಕೆ.ಎನ್. ದೊಡ್ಡೇಟಪ್ಪ, ಕೆ. ರಾಮಸ್ವಾಮಿ, ಶ್ರೀನಿವಾಸ ಮೂರ್ತಿ, ಕೆ.ಬಿ. ನಾಗರಾಜ್, ಗುರುಶಾಮಯ್ಯ ಮತ್ತಿತರರು ಪಾಲ್ಗೊಂಡಿದ್ದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಚುನಾವಣೆಯಲ್ಲಿ ಎಲ್ಲ ರೀತಿಯ ಅಕ್ರಮಗಳಿಗೆ ಕಡಿವಾಣ ಹಾಕುವ ಪಾರದರ್ಶಕ ನೀತಿಯನ್ನು ಜಾರಿಗೊಳಿಸಬೇಕು ಎಂದು ಬಹು ಜನ ಸಮಾಜ ಪಕ್ಷ ಒತ್ತಾಯಿಸಿದೆ.<br /> <br /> ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ಪಕ್ಷದ ಕಾರ್ಯಕರ್ತರು, ಕೇಂದ್ರ ಚುನಾವಣಾ ಆಯೋಗ ಮತ್ತು ರಾಜ್ಯ ಚುನಾವಣಾ ಆಯೋಗಗಳು ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲದಂತಾ ಗಿವೆ ಎಂದು ದೂರಿದರು.<br /> <br /> ಇದುವರೆಗೆ ನಡೆದಿರುವ ವಿಧಾನಸಭೆ, ಲೋಕಸಭೆ ಚುನಾವಣೆ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಈ ದೇಶದ ಶೇ. 85ರಷ್ಟಿರುವ ಬಹುಸಂಖ್ಯಾತ ಬಡಜನರ ಮತಗಳನ್ನು ಆಸೆ, ಆಮಿಷ ತೋರಿಸಿ ಖರೀದಿಸಲಾಗುತ್ತಿದೆ. ಆದ್ದರಿಂದ ಈಗಿರುವ ಚುನಾವಣಾ ನೀತಿ ಸಂಹಿತೆಯನ್ನು ತೆಗೆದುಹಾಕಿ ಪಾರದರ್ಶಕ ನೀತಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.<br /> <br /> ಅಕ್ರಮ ನಡೆಯುತ್ತಿದ್ದರೂ ಜಿಲ್ಲೆಗಳಲ್ಲಿರುವ ಚುನಾವಣಾಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಾರೆ. ಇಂತಹವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಂಡು ಅನ್ಯಾಯ ತಡೆಯಬೇಕು ಎಂದು ಚುನಾವಣಾ ಆಯೋಗ ಮತ್ತು ರಾಜ್ಯಪಾಲರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.</p>.<p>ಕರಾಜ್ಯದಲ್ಲಿ ದಲಿತರಿಗೆ ಮತ್ತು ಬಡಜನರಿಗೆ ವಿವಿಧ ಇಲಾಖೆಗಳನ್ನು ಸ್ಥಾಪಿಸಿದ್ದರೂ ನಿಜವಾದ ಫಲಾನುಭವಿಗಳಿಗೆ ಸೌಲಭ್ಯ ದೊರೆಯುತ್ತಿಲ್ಲ. ಜಿಲ್ಲೆಯಲ್ಲಿನ ಆಯಾ ಕ್ಷೇತ್ರದ ಶಾಸಕರ ಜತೆ ಇರುವ ಬೆಂಬಲಿಗರಿಗೆ ಹಾಗೂ ಆಯಾ ಪಕ್ಷದ ಕಾರ್ಯಕರ್ತರಿಗೆ ಮತ್ತು ಹಣವಂತರಿಗೆ ಸೌಲಭ್ಯ ಹಂಚಿಕೆಯಾಗುತ್ತಿವೆ ಎಂದು ದೂರಿದರು.<br /> <br /> ಆದ್ದರಿಂದ ಶಾಸಕರಿಗೆ ನೀಡಿರುವ ಅಧಿಕಾರವನ್ನು ಕಡಿತಗೊಳಿಸಿ ಜಿಲ್ಲೆ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳಿಗೆ ಅಥವಾ ವ್ಯವಸ್ಥಾಪಕರಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕು ಎಂದರು.<br /> <br /> ಧರಣಿಯಲ್ಲಿ ಬಿ. ಮಹಂತೇಶ್ ಕೂನಬೇವು, ಜಿ.ಆರ್. ಪಾಂಡುರಂಗಪ್ಪ, ಕೆ. ತಿಮ್ಮಪ್ಪ, ಜಿ.ಟಿ. ಸುಂದರೇಶ್, ಎಸ್. ವೆಂಕಟೇಶ್, ಎಂ. ತಿಪ್ಪೇಸ್ವಾಮಿ, ಕೆ.ಎನ್. ದೊಡ್ಡೇಟಪ್ಪ, ಕೆ. ರಾಮಸ್ವಾಮಿ, ಶ್ರೀನಿವಾಸ ಮೂರ್ತಿ, ಕೆ.ಬಿ. ನಾಗರಾಜ್, ಗುರುಶಾಮಯ್ಯ ಮತ್ತಿತರರು ಪಾಲ್ಗೊಂಡಿದ್ದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>