<p><strong>ಹನುಮಸಾಗರ: </strong>ಮುಕ್ತ ಹಾಗೂ ನಿಷ್ಪಕ್ಷಪಾತ ಚುನಾವಣೆ ನಡೆಸುವಲ್ಲಿ ಕರಾರುವಾಕ್ಕಾದ ಮತ್ತು ದೋಷರಹಿತ ಮತದಾರರ ಪಟ್ಟಿ ಮಹತ್ವದ್ದಾಗಿದೆ. ಅದನ್ನು ಮತಗಟ್ಟೆ ಅಧಿಕಾರಿಗಳು ನೈಜವಾಗಿ ತಯಾರಿಸುವುದು ಅವಶ್ಯ ಎಂದು ತಹಶೀಲ್ದಾರ ವೀರೇಶ ಬಿರಾದಾರ ಹೇಳಿದರು.<br /> <br /> ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ ಶನಿವಾರ ಏರ್ಪಡಿಸಿದ ರಾಷ್ಟ್ರೀಯ ಮತದಾರರ ದಿನಾಚರಣೆಯ ಮಹತ್ವ ಕುರಿತ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.<br /> <br /> ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಸರ್ವರೂ ಪಾಲ್ಗೊಳ್ಳುವುದು ಅವಶ್ಯವಾಗಿದೆ. ಜ.25ರಂದು ಪ್ರತಿಯೊಂದು ಮತಗಟ್ಟೆಯಲ್ಲಿ ಆಚರಿಸುವ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ನಿಮ್ಮ ಬೂತ್ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರಿಗೆ ಮತದಾರರ ಜವಾಬ್ದಾರಿ ಹಾಗೂ ಅವರ ಮಹತ್ವ ಕುರಿತು ಮಾಹಿತಿ ನೀಡಬೇಕು ಎಂದು ಹೇಳಿದರು.<br /> <br /> ಶಿರಸ್ತೇದಾರ ಸುರೇಶ ಕುಲಕರ್ಣಿ ಮಾತನಾಡಿ ಉತ್ತಮ ಸಮಾಜ ಹಾಗೂ ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ನಡೆಯಲಿರುವ ಈ ಕಾರ್ಯದಲ್ಲಿ ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಯುವಕರು ಹಾಗೂ ಶಾಲಾ ಮುಖ್ಯಸ್ಥರ ಸಹಭಾಗಿತ್ವ ಅವಶ್ಯ ಎಂದು ಹೇಳಿದರು.ಬಳಿಕ ಅವರು ಬ್ಲಾಕ್ ಮಟ್ಟದ ಅಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.<br /> <br /> ಕಂದಾಯ ನಿರೀಕ್ಷಕರಾದ ಮಹ್ಮದ್ ಮುಸ್ತಾಫ್, ಸೋಮಶೇಖರಯ್ಯ, ಗ್ರಾಮ ಲೆಕ್ಕಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಶ್ರೀನಿವಾಸ ಜಹಗೀರದಾರ ಇತರರು ಇದ್ದರು. ಪಾರ್ವತಿ ಪ್ರಾರ್ಥಿಸಿದರು. ರಾಜೇಸಾಬ ನದಾಫ್ ಸ್ವಾಗತಿಸಿದರು, ಪ್ರಹ್ಲಾದ ಮಠದ ನಿರೂಪಿಸಿದರು. ಚಂದಪ್ಪ ಹಕ್ಕಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನುಮಸಾಗರ: </strong>ಮುಕ್ತ ಹಾಗೂ ನಿಷ್ಪಕ್ಷಪಾತ ಚುನಾವಣೆ ನಡೆಸುವಲ್ಲಿ ಕರಾರುವಾಕ್ಕಾದ ಮತ್ತು ದೋಷರಹಿತ ಮತದಾರರ ಪಟ್ಟಿ ಮಹತ್ವದ್ದಾಗಿದೆ. ಅದನ್ನು ಮತಗಟ್ಟೆ ಅಧಿಕಾರಿಗಳು ನೈಜವಾಗಿ ತಯಾರಿಸುವುದು ಅವಶ್ಯ ಎಂದು ತಹಶೀಲ್ದಾರ ವೀರೇಶ ಬಿರಾದಾರ ಹೇಳಿದರು.<br /> <br /> ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ ಶನಿವಾರ ಏರ್ಪಡಿಸಿದ ರಾಷ್ಟ್ರೀಯ ಮತದಾರರ ದಿನಾಚರಣೆಯ ಮಹತ್ವ ಕುರಿತ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.<br /> <br /> ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಸರ್ವರೂ ಪಾಲ್ಗೊಳ್ಳುವುದು ಅವಶ್ಯವಾಗಿದೆ. ಜ.25ರಂದು ಪ್ರತಿಯೊಂದು ಮತಗಟ್ಟೆಯಲ್ಲಿ ಆಚರಿಸುವ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ನಿಮ್ಮ ಬೂತ್ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರಿಗೆ ಮತದಾರರ ಜವಾಬ್ದಾರಿ ಹಾಗೂ ಅವರ ಮಹತ್ವ ಕುರಿತು ಮಾಹಿತಿ ನೀಡಬೇಕು ಎಂದು ಹೇಳಿದರು.<br /> <br /> ಶಿರಸ್ತೇದಾರ ಸುರೇಶ ಕುಲಕರ್ಣಿ ಮಾತನಾಡಿ ಉತ್ತಮ ಸಮಾಜ ಹಾಗೂ ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ನಡೆಯಲಿರುವ ಈ ಕಾರ್ಯದಲ್ಲಿ ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಯುವಕರು ಹಾಗೂ ಶಾಲಾ ಮುಖ್ಯಸ್ಥರ ಸಹಭಾಗಿತ್ವ ಅವಶ್ಯ ಎಂದು ಹೇಳಿದರು.ಬಳಿಕ ಅವರು ಬ್ಲಾಕ್ ಮಟ್ಟದ ಅಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.<br /> <br /> ಕಂದಾಯ ನಿರೀಕ್ಷಕರಾದ ಮಹ್ಮದ್ ಮುಸ್ತಾಫ್, ಸೋಮಶೇಖರಯ್ಯ, ಗ್ರಾಮ ಲೆಕ್ಕಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಶ್ರೀನಿವಾಸ ಜಹಗೀರದಾರ ಇತರರು ಇದ್ದರು. ಪಾರ್ವತಿ ಪ್ರಾರ್ಥಿಸಿದರು. ರಾಜೇಸಾಬ ನದಾಫ್ ಸ್ವಾಗತಿಸಿದರು, ಪ್ರಹ್ಲಾದ ಮಠದ ನಿರೂಪಿಸಿದರು. ಚಂದಪ್ಪ ಹಕ್ಕಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>