<p><strong>ಚಿತ್ರದುರ್ಗ:</strong> ಪ್ರವಾದಿ ಮಹಮದ್ರ ಪರೋಪಕಾರ ಮಾರ್ಗಗಳನ್ನು ಎಲ್ಲರೂ ಅನುಸರಿಸಬೇಕಿದೆ ಎಂದು ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ನುಡಿದರು.ನಗರದ ಸಂತೆಹೊಂಡ ಪಕ್ಕದ ಜಟಕಾ ಗಾಡಿ ನಿಲ್ದಾಣದಲ್ಲಿ ಬುಧವಾರ ಆಯೋಜಿಸಿದ್ದ ಈದ್-ಮಿಲಾದ್ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> <br /> ಪ್ರವಾದಿ ಮಹಮದ್ ಕೇವಲ ಒಂದೇ ಕೋಮಿಗೆ ಸಿಮೀತರಾಗದೇ ಎಲ್ಲ ವರ್ಗದವರ ಏಳಿಗೆಗೆ ಶ್ರಮಿಸಿದ್ದರು.ಜನರಲ್ಲಿದ್ದ ಅಂಧಶ್ರದ್ಧೆ, ಮೂಢನಂಬಿಕೆಗಳನ್ನು ದೂರ ಮಾಡಲು ಪ್ರಯತ್ನಿಸಿದ್ದರು ಎಂದರು.ಮಾದಾರ ಗುರುಪೀಠದಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಎಲ್ಲ ಧರ್ಮಗಳಲ್ಲಿ ಒಂದು ರೀತಿಯ ಬೇಕು-ಬೇಡ ಎನ್ನುವ ಗೊಂದಲವಿದ್ದು, ಇದರ ನಿವಾರಣೆಗೆ ಎಲ್ಲ ದಾರ್ಶನಿಕರ ತತ್ವಗಳನ್ನು ಅಳವಡಿಸಿಕೊಂಡು ಶಾಂತಿ ವಾತಾವರಣ ನಿರ್ಮಿಸಬೇಕಿದೆ ಎಂದರು. <br /> <br /> ಶಾಸಕ ಎಸ್.ಕೆ. ಬಸವರಾಜನ್ ಮಾತನಾಡಿ, ಮನೆಗಳಿಲ್ಲದ ಮುಸ್ಲಿಂ ಸಮುದಾಯದವರಿಗೆ ಮುಂದಿನ ದಿನಗಳಲ್ಲಿ ಸ್ವತಃ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅರ್ಹ ಫಲಾನುಭವಿಗಳಿಗೆ ಸರ್ಕಾರದ ವತಿಯಿಂದ ಮನೆಗಳನ್ನು ವಿತರಿಸಲಾಗುವುದು ಎಂದು ಭರವಸೆ ನೀಡಿದರು.ವಕೀಲ ಮಹಮದ್ ಸಾದಿಕ್ವುಲ್ಲ ಅಧ್ಯಕ್ಷತೆ ವಹಿಸಿದ್ದರು. <br /> <br /> ಜೆಡಿಎಸ್ ಮುಖಂಡ ಎಂ.ಕೆ. ತಾಜ್ಪೀರ್, ನಗರಸಭೆ ಉಪಾಧ್ಯಕ್ಷ ಸೈಯ್ಯದ್ ಅಲ್ಲಭಕ್ಷ, ಸದಸ್ಯರಾದ ಮಹಮ್ಮದ್ ಅಹಮದ್ ಪಾಷ, ಅಬ್ದುಲ್ ಜಬ್ಬಾರ್, ಟಿಪ್ಪುಸುಲ್ತಾನ್ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಟಿ. ಖಾಸಿಂ ಅಲಿ ಇತರರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಪ್ರವಾದಿ ಮಹಮದ್ರ ಪರೋಪಕಾರ ಮಾರ್ಗಗಳನ್ನು ಎಲ್ಲರೂ ಅನುಸರಿಸಬೇಕಿದೆ ಎಂದು ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ನುಡಿದರು.ನಗರದ ಸಂತೆಹೊಂಡ ಪಕ್ಕದ ಜಟಕಾ ಗಾಡಿ ನಿಲ್ದಾಣದಲ್ಲಿ ಬುಧವಾರ ಆಯೋಜಿಸಿದ್ದ ಈದ್-ಮಿಲಾದ್ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> <br /> ಪ್ರವಾದಿ ಮಹಮದ್ ಕೇವಲ ಒಂದೇ ಕೋಮಿಗೆ ಸಿಮೀತರಾಗದೇ ಎಲ್ಲ ವರ್ಗದವರ ಏಳಿಗೆಗೆ ಶ್ರಮಿಸಿದ್ದರು.ಜನರಲ್ಲಿದ್ದ ಅಂಧಶ್ರದ್ಧೆ, ಮೂಢನಂಬಿಕೆಗಳನ್ನು ದೂರ ಮಾಡಲು ಪ್ರಯತ್ನಿಸಿದ್ದರು ಎಂದರು.ಮಾದಾರ ಗುರುಪೀಠದಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಎಲ್ಲ ಧರ್ಮಗಳಲ್ಲಿ ಒಂದು ರೀತಿಯ ಬೇಕು-ಬೇಡ ಎನ್ನುವ ಗೊಂದಲವಿದ್ದು, ಇದರ ನಿವಾರಣೆಗೆ ಎಲ್ಲ ದಾರ್ಶನಿಕರ ತತ್ವಗಳನ್ನು ಅಳವಡಿಸಿಕೊಂಡು ಶಾಂತಿ ವಾತಾವರಣ ನಿರ್ಮಿಸಬೇಕಿದೆ ಎಂದರು. <br /> <br /> ಶಾಸಕ ಎಸ್.ಕೆ. ಬಸವರಾಜನ್ ಮಾತನಾಡಿ, ಮನೆಗಳಿಲ್ಲದ ಮುಸ್ಲಿಂ ಸಮುದಾಯದವರಿಗೆ ಮುಂದಿನ ದಿನಗಳಲ್ಲಿ ಸ್ವತಃ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅರ್ಹ ಫಲಾನುಭವಿಗಳಿಗೆ ಸರ್ಕಾರದ ವತಿಯಿಂದ ಮನೆಗಳನ್ನು ವಿತರಿಸಲಾಗುವುದು ಎಂದು ಭರವಸೆ ನೀಡಿದರು.ವಕೀಲ ಮಹಮದ್ ಸಾದಿಕ್ವುಲ್ಲ ಅಧ್ಯಕ್ಷತೆ ವಹಿಸಿದ್ದರು. <br /> <br /> ಜೆಡಿಎಸ್ ಮುಖಂಡ ಎಂ.ಕೆ. ತಾಜ್ಪೀರ್, ನಗರಸಭೆ ಉಪಾಧ್ಯಕ್ಷ ಸೈಯ್ಯದ್ ಅಲ್ಲಭಕ್ಷ, ಸದಸ್ಯರಾದ ಮಹಮ್ಮದ್ ಅಹಮದ್ ಪಾಷ, ಅಬ್ದುಲ್ ಜಬ್ಬಾರ್, ಟಿಪ್ಪುಸುಲ್ತಾನ್ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಟಿ. ಖಾಸಿಂ ಅಲಿ ಇತರರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>