<p><strong>ಮಾಲೂರು:</strong> ಅಪರಾಧ ತಡೆಯುವಲ್ಲಿ ನಾಗರಿಕರ ಸಹಕಾರಕ್ಕಾಗಿ ಪೊಲೀಸ್ ಇಲಾಖೆಯು ನೀಡುತ್ತಿರುವ ಬಂದೂಕು ತರಬೇತಿಯಲ್ಲಿ ಹೆಚ್ಚಾಗಿ ಮಹಿಳೆಯರೇ ಪಾಲ್ಗೊಳ್ಳುವ ಮೂಲಕ ಅಚ್ಚರಿ ಮೂಡಿಸಿದರು.<br /> <br /> ಪಟ್ಟಣದ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ನಡೆದ ನಾಗರಿಕ ಬಂದೂಕು ತರಬೇತಿ ಪತ್ರ ವಿತರಣೆ, ಪೊಲೀಸ್ ಕವಾಯತು ಮೈದಾನ ಉದ್ಘಾಟನೆ, ಪೊಲೀಸ್ ಸಿಬ್ಬಂದಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ತ್ಯಾಗರಾಜನ್ ಮಹಿಳೆಯರ ಈ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.<br /> <br /> ಆತ್ಮ ರಕ್ಷಣೆಗಾಗಿ ಬಂದೂಕು ತರಬೇತಿ ಶಿಬಿರದಲ್ಲಿ 20 ಮಹಿಳೆಯರು ಭಾಗವಹಿಸಿ ಉತ್ತಮ ಕಲಿಕೆ ದಾಖಲಿಸಿದ್ದಾರೆ. ದಿನನಿತ್ಯ ನಡೆಯುವ ಅಪರಾಧ ಚಟುವಟಿಕೆಗಳನ್ನು ತಡೆಯಲು ಮಹಿಳೆಯರು ಮುಂದಾಗಬೇಕು ಎಂದರು.<br /> <br /> ಸರ್ಕಲ್ ಇನ್ಸ್ಪೆಕ್ಟರ್ ಸಿ.ಸಂಪತ್ ಕುಮಾರ್, ಶಸಸ್ತ್ರ ಮೀಸಲು ಪಡೆ ಸರ್ಕಲ್ ಇನ್ಸ್ಪೆಕ್ಟರ್ ಎ.ನಾಗರಾಜ್, ಸಹಾಯಕ ಇನ್ಸ್ಪೆಕ್ಟರ್ ಶಿವಶಂಕರ್ಗೌಡ, ಉಪ ನಿರೀಕ್ಷಕರಾದ ನದಾಫ್ ಸಿ.ಸಲೀಂ, ಶಿವಶಂಕರ್, ಕನಕ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಕೃಷ್ಣಮೂರ್ತಿ ಭಾಗವಹಿಸಿದ್ದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ಅಪರಾಧ ತಡೆಯುವಲ್ಲಿ ನಾಗರಿಕರ ಸಹಕಾರಕ್ಕಾಗಿ ಪೊಲೀಸ್ ಇಲಾಖೆಯು ನೀಡುತ್ತಿರುವ ಬಂದೂಕು ತರಬೇತಿಯಲ್ಲಿ ಹೆಚ್ಚಾಗಿ ಮಹಿಳೆಯರೇ ಪಾಲ್ಗೊಳ್ಳುವ ಮೂಲಕ ಅಚ್ಚರಿ ಮೂಡಿಸಿದರು.<br /> <br /> ಪಟ್ಟಣದ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ನಡೆದ ನಾಗರಿಕ ಬಂದೂಕು ತರಬೇತಿ ಪತ್ರ ವಿತರಣೆ, ಪೊಲೀಸ್ ಕವಾಯತು ಮೈದಾನ ಉದ್ಘಾಟನೆ, ಪೊಲೀಸ್ ಸಿಬ್ಬಂದಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ತ್ಯಾಗರಾಜನ್ ಮಹಿಳೆಯರ ಈ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.<br /> <br /> ಆತ್ಮ ರಕ್ಷಣೆಗಾಗಿ ಬಂದೂಕು ತರಬೇತಿ ಶಿಬಿರದಲ್ಲಿ 20 ಮಹಿಳೆಯರು ಭಾಗವಹಿಸಿ ಉತ್ತಮ ಕಲಿಕೆ ದಾಖಲಿಸಿದ್ದಾರೆ. ದಿನನಿತ್ಯ ನಡೆಯುವ ಅಪರಾಧ ಚಟುವಟಿಕೆಗಳನ್ನು ತಡೆಯಲು ಮಹಿಳೆಯರು ಮುಂದಾಗಬೇಕು ಎಂದರು.<br /> <br /> ಸರ್ಕಲ್ ಇನ್ಸ್ಪೆಕ್ಟರ್ ಸಿ.ಸಂಪತ್ ಕುಮಾರ್, ಶಸಸ್ತ್ರ ಮೀಸಲು ಪಡೆ ಸರ್ಕಲ್ ಇನ್ಸ್ಪೆಕ್ಟರ್ ಎ.ನಾಗರಾಜ್, ಸಹಾಯಕ ಇನ್ಸ್ಪೆಕ್ಟರ್ ಶಿವಶಂಕರ್ಗೌಡ, ಉಪ ನಿರೀಕ್ಷಕರಾದ ನದಾಫ್ ಸಿ.ಸಲೀಂ, ಶಿವಶಂಕರ್, ಕನಕ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಕೃಷ್ಣಮೂರ್ತಿ ಭಾಗವಹಿಸಿದ್ದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>