<p>ಬೆಂಗಳೂರು: ದಕ್ಷಿಣ ಆಫ್ರಿಕದಿಂದ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಆಗಮಿಸಲಿರುವ ಚೀತಾಗಳಿಗೆ ಸ್ಥಳಾವಕಾಶ ಮಾಡಿಕೊಡುವ ಉದ್ದೇಶದಿಂದ ಎಂಟು ಚಿರತೆಗಳನ್ನು ತಾತ್ಕಾಲಿಕವಾಗಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಬುಧವಾರ ಸ್ಥಳಾಂತರಿಸಲಾಯಿತು.<br /> <br /> ಜರ್ಮನಿಯ ಲಿಪ್ಜಿಗ್ ಪ್ರಾಣಿ ಸಂಗ್ರಹಾಲಯದ ಸಹಕಾರದಿಂದ ಎರಡು ಜೊತೆ ಆಫ್ರಿಕನ್ ಚೀತಾಗಳು ಜನವರಿ ಮೊದಲ ವಾರದಲ್ಲಿ ಮೈಸೂರಿಗೆ ಆಗಮಿಸಲಿವೆ. ಕೇಂದ್ರ ಮೃಗಾಲಯ ಪ್ರಾಧಿಕಾರದ ಸೂಚನೆಯ ಪ್ರಕಾರ ಈ ಪ್ರಾಣಿಗಳಿಗೆ ವಿಶೇಷ ಆವರಣವನ್ನು ನಿರ್ಮಿಸಬೇಕಾಗಿದೆ. ಇದಕ್ಕಾಗಿ ರೂ 45 ಲಕ್ಷಗಳ ಯೋಜನೆ ಸಿದ್ದವಾಗಿದೆ. ಆದರೆ ಸ್ಥಳೀಯ ಸಂಸ್ಥೆ ಚುನಾವಣೆಯ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಕಾಮಗಾರಿಗಾಗಿ ಟೆಂಡರ್ ಕರೆಯುವುದು ಸಾಧ್ಯವಾಗಿಲ್ಲ.<br /> <br /> ಆದರೆ ಜನವರಿ ಮೊದಲ/ಎರಡನೇ ವಾರದಲ್ಲಿ ಚೀತಾಗಳು ಆಗಮಿಸಿದರೆ ತೊಂದರೆಯಾಗಬಹುದು ಎನ್ನುವ ಕಾರಣದಿಂದ ತಾತ್ಕಾಲಿಕವಾಗಿ ಚಿರತೆಗಳನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಸ್ಥಳಾಂತರಿಸಲಾಯಿತು ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎನ್.ಜಯಕುಮಾರ್ ತಿಳಿಸಿದರು.<br /> <br /> ಚೀತಾಗಳನ್ನು ಮುಂದಿನ ದಿನಗಳಲ್ಲಿ ಹೇಸರಗತ್ತೆ ಆವರಣದಲ್ಲಿ ಆರಿಸಲಾಗುತ್ತದೆ.ಹೊಸದಾಗಿ ಆವರಣ ನಿರ್ಮಿಸಲು ಕನಿಷ್ಠ ಮೂರು ತಿಂಗಳ ಕಾಲ ಬೇಕಾಗುತ್ತದೆ. ಈ ಆವರಣ ನಿರ್ಮಾಣದ ನಂತರ ಚಿರತೆಗಳನ್ನು ವಾಪಸ್ ಕರೆಸಿಕೊಳ್ಳುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ದಕ್ಷಿಣ ಆಫ್ರಿಕದಿಂದ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಆಗಮಿಸಲಿರುವ ಚೀತಾಗಳಿಗೆ ಸ್ಥಳಾವಕಾಶ ಮಾಡಿಕೊಡುವ ಉದ್ದೇಶದಿಂದ ಎಂಟು ಚಿರತೆಗಳನ್ನು ತಾತ್ಕಾಲಿಕವಾಗಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಬುಧವಾರ ಸ್ಥಳಾಂತರಿಸಲಾಯಿತು.<br /> <br /> ಜರ್ಮನಿಯ ಲಿಪ್ಜಿಗ್ ಪ್ರಾಣಿ ಸಂಗ್ರಹಾಲಯದ ಸಹಕಾರದಿಂದ ಎರಡು ಜೊತೆ ಆಫ್ರಿಕನ್ ಚೀತಾಗಳು ಜನವರಿ ಮೊದಲ ವಾರದಲ್ಲಿ ಮೈಸೂರಿಗೆ ಆಗಮಿಸಲಿವೆ. ಕೇಂದ್ರ ಮೃಗಾಲಯ ಪ್ರಾಧಿಕಾರದ ಸೂಚನೆಯ ಪ್ರಕಾರ ಈ ಪ್ರಾಣಿಗಳಿಗೆ ವಿಶೇಷ ಆವರಣವನ್ನು ನಿರ್ಮಿಸಬೇಕಾಗಿದೆ. ಇದಕ್ಕಾಗಿ ರೂ 45 ಲಕ್ಷಗಳ ಯೋಜನೆ ಸಿದ್ದವಾಗಿದೆ. ಆದರೆ ಸ್ಥಳೀಯ ಸಂಸ್ಥೆ ಚುನಾವಣೆಯ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಕಾಮಗಾರಿಗಾಗಿ ಟೆಂಡರ್ ಕರೆಯುವುದು ಸಾಧ್ಯವಾಗಿಲ್ಲ.<br /> <br /> ಆದರೆ ಜನವರಿ ಮೊದಲ/ಎರಡನೇ ವಾರದಲ್ಲಿ ಚೀತಾಗಳು ಆಗಮಿಸಿದರೆ ತೊಂದರೆಯಾಗಬಹುದು ಎನ್ನುವ ಕಾರಣದಿಂದ ತಾತ್ಕಾಲಿಕವಾಗಿ ಚಿರತೆಗಳನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಸ್ಥಳಾಂತರಿಸಲಾಯಿತು ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎನ್.ಜಯಕುಮಾರ್ ತಿಳಿಸಿದರು.<br /> <br /> ಚೀತಾಗಳನ್ನು ಮುಂದಿನ ದಿನಗಳಲ್ಲಿ ಹೇಸರಗತ್ತೆ ಆವರಣದಲ್ಲಿ ಆರಿಸಲಾಗುತ್ತದೆ.ಹೊಸದಾಗಿ ಆವರಣ ನಿರ್ಮಿಸಲು ಕನಿಷ್ಠ ಮೂರು ತಿಂಗಳ ಕಾಲ ಬೇಕಾಗುತ್ತದೆ. ಈ ಆವರಣ ನಿರ್ಮಾಣದ ನಂತರ ಚಿರತೆಗಳನ್ನು ವಾಪಸ್ ಕರೆಸಿಕೊಳ್ಳುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>