ಸಂತೆಕೆಲ್ಲೂರಿನ ಗುರುಬಸವ ಸ್ವಾಮೀಜಿ, ತಿಕೋಟಾದ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ, ಪಾಂಡುಮಟ್ಟಿ ಗುರುಬಸವ ಶಿವಯೋಗಿ ಮಾತನಾಡಿ, ‘ಬಸವ ಧರ್ಮದ ಆಚರಣೆಯಲ್ಲಿ ಮಾತ್ರ ಮಹಿಳೆಯರಿಗೆ ಸಮಾನತೆ ಇರುವುದು ಕಂಡು ಬರುತ್ತದೆ. ಪುರುಷರಷ್ಟೇ ಮಹಿಳೆಯರು ಸಮರ್ಥರಾಗಿದ್ದು ಎಲ್ಲ ರಂಗದಲ್ಲಿ ಇನ್ನೂ ಹೆಚ್ಚಿನ ಅವಕಾಶಗಳು ದೊರಕಿಸಿಕೊಡಬೇಕು’ ಎಂದು ಸಲಹೆ ನೀಡಿದರು.