<p>ಬಾಗಲಕೋಟೆ: ಅಪಾಯಕಾರಿ ಕೆಲಸಗಳಲ್ಲಿ ಮಕ್ಕಳನ್ನು ದುಡಿಮೆಗೆ ತೊಡಗಿಸುವುದನ್ನು ನಿಷೇಧಿಸಿದ್ದರೂ ಇಂಥ ಉದ್ದಿಮೆಗಳಲ್ಲಿ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುತ್ತಿರುವುದು ವಿಷಾದದ ಸಂಗತಿ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಶಿವಶಂಕರ ಅಮರಣ್ಣವರ ಹೇಳಿದರು.<br /> <br /> ನವನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ಏರ್ಪಡಿಸಿದ ಮಕ್ಕಳ ಹಕ್ಕುಗಳ ಕಾಯ್ದೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಆರ್. ಮನಹಳ್ಳಿ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ಮತ್ತು ಜೀತ ಪದ್ಧತಿ ಸಮಾಜದ ಕಳಂಕಗಳಾಗಿವೆ. <br /> <br /> ಇವುಗಳನ್ನು ಕಾನೂನಿನಿಂದ ನಿವಾರಿಸಲು ಅಸಾಧ್ಯ. ಶಿಕ್ಷಣ, ಅರಿವು ಮತ್ತು ಪ್ರಚಾರದಿಂದ ಮಾತ್ರ ನಿವಾರಣೆ ಸಾಧ್ಯ ಎಂದರು.<br /> <br /> ಉಪ ವಿಭಾಗಾಧಿಕಾರಿ ಗೋವಿಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಸ್.ಎಚ್.ಪಾಟೀಲ, ನ್ಯಾಯಾಧೀಶ ಬಸವರಾಜ ಚೇಗರೆಡ್ಡಿ, ಜಿ.ಬಿ. ಜೋಷಿ, ಎಸ್.ಬಿ. ಹೊಸಗಲ್ಲಿ, ಎಂ.ಎಸ್. ತಿಮ್ಮೊಲಿ, ಕಾರ್ಮಿಕ ಅಧಿಕಾರಿ ಸಿ.ವಿ. ಹೊರಟ್ಟಿ, ಸುಧಾಕರ ಬಡಿಗೇರ ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಅಪಾಯಕಾರಿ ಕೆಲಸಗಳಲ್ಲಿ ಮಕ್ಕಳನ್ನು ದುಡಿಮೆಗೆ ತೊಡಗಿಸುವುದನ್ನು ನಿಷೇಧಿಸಿದ್ದರೂ ಇಂಥ ಉದ್ದಿಮೆಗಳಲ್ಲಿ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುತ್ತಿರುವುದು ವಿಷಾದದ ಸಂಗತಿ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಶಿವಶಂಕರ ಅಮರಣ್ಣವರ ಹೇಳಿದರು.<br /> <br /> ನವನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ಏರ್ಪಡಿಸಿದ ಮಕ್ಕಳ ಹಕ್ಕುಗಳ ಕಾಯ್ದೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಆರ್. ಮನಹಳ್ಳಿ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ಮತ್ತು ಜೀತ ಪದ್ಧತಿ ಸಮಾಜದ ಕಳಂಕಗಳಾಗಿವೆ. <br /> <br /> ಇವುಗಳನ್ನು ಕಾನೂನಿನಿಂದ ನಿವಾರಿಸಲು ಅಸಾಧ್ಯ. ಶಿಕ್ಷಣ, ಅರಿವು ಮತ್ತು ಪ್ರಚಾರದಿಂದ ಮಾತ್ರ ನಿವಾರಣೆ ಸಾಧ್ಯ ಎಂದರು.<br /> <br /> ಉಪ ವಿಭಾಗಾಧಿಕಾರಿ ಗೋವಿಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಸ್.ಎಚ್.ಪಾಟೀಲ, ನ್ಯಾಯಾಧೀಶ ಬಸವರಾಜ ಚೇಗರೆಡ್ಡಿ, ಜಿ.ಬಿ. ಜೋಷಿ, ಎಸ್.ಬಿ. ಹೊಸಗಲ್ಲಿ, ಎಂ.ಎಸ್. ತಿಮ್ಮೊಲಿ, ಕಾರ್ಮಿಕ ಅಧಿಕಾರಿ ಸಿ.ವಿ. ಹೊರಟ್ಟಿ, ಸುಧಾಕರ ಬಡಿಗೇರ ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>