<p>ಮದ್ದೂರು: ಚಿನ್ನನದೊಡ್ಡಿಯಲ್ಲಿ ವಿದ್ಯುತ್ ತಂತಿ ತುಳಿದಿದ್ದ ಬಾಲಕಿ ಮೇಘನಾ ಗುರುವಾರ ಮೃತಪಟ್ಟ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಪಟ್ಟಣದ ಸೆಸ್ಕ್ ಉಪವಿಭಾಗ ಕಚೇರಿ ಎದುರು ಶವದೊಂದಿಗೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.<br /> <br /> ಅಜ್ಜಿಯೊಂದಿಗೆ ಹಿಪ್ಪನೇರಳೆ ಗಿಡ ಕತ್ತರಿಸಲು ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಬಿದ್ದು ಮೇಘನಾ (13) ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೇಘನಾ ಗುರುವಾರ ಮೃತಪಟ್ಟರು. ಬಾಲಕಿ ಸಾವಿಗೆ ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ದೂರಿದ ಗ್ರಾಮಸ್ಥರು ಪ್ರತಿಭಟನೆ ಆರಂಭಿಸಿದರು.<br /> <br /> ಪರಿಹಾರ ನೀಡುವ ಭರವಸೆ ಸಿಕ್ಕಿದ ಪರಿಣಾಮ ಧರಣಿ ಹಿಂದಕ್ಕೆ ಪಡೆದರು. ಪುರಸಭೆ ಮಾಜಿ ಅಧ್ಯಕ್ಷ ಎಂ.ಐ.ಪ್ರವೀಣ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಜ್ಜಹಳ್ಳಿ ರಾಮಕೃಷ್ಣ, ನಗರಕೆರೆ ಗ್ರಾಪಂ ಅಧ್ಯಕ್ಷ ಎನ್.ಡಿ.ಸಂದೀಪ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮದ್ದೂರು: ಚಿನ್ನನದೊಡ್ಡಿಯಲ್ಲಿ ವಿದ್ಯುತ್ ತಂತಿ ತುಳಿದಿದ್ದ ಬಾಲಕಿ ಮೇಘನಾ ಗುರುವಾರ ಮೃತಪಟ್ಟ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಪಟ್ಟಣದ ಸೆಸ್ಕ್ ಉಪವಿಭಾಗ ಕಚೇರಿ ಎದುರು ಶವದೊಂದಿಗೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.<br /> <br /> ಅಜ್ಜಿಯೊಂದಿಗೆ ಹಿಪ್ಪನೇರಳೆ ಗಿಡ ಕತ್ತರಿಸಲು ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಬಿದ್ದು ಮೇಘನಾ (13) ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೇಘನಾ ಗುರುವಾರ ಮೃತಪಟ್ಟರು. ಬಾಲಕಿ ಸಾವಿಗೆ ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ದೂರಿದ ಗ್ರಾಮಸ್ಥರು ಪ್ರತಿಭಟನೆ ಆರಂಭಿಸಿದರು.<br /> <br /> ಪರಿಹಾರ ನೀಡುವ ಭರವಸೆ ಸಿಕ್ಕಿದ ಪರಿಣಾಮ ಧರಣಿ ಹಿಂದಕ್ಕೆ ಪಡೆದರು. ಪುರಸಭೆ ಮಾಜಿ ಅಧ್ಯಕ್ಷ ಎಂ.ಐ.ಪ್ರವೀಣ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಜ್ಜಹಳ್ಳಿ ರಾಮಕೃಷ್ಣ, ನಗರಕೆರೆ ಗ್ರಾಪಂ ಅಧ್ಯಕ್ಷ ಎನ್.ಡಿ.ಸಂದೀಪ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>