<p><strong>ರಾಯಚೂರು:</strong> ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 4 ಟಿ.ಎಂ.ಸಿ. ನೀರನ್ನು ಕರ್ನಾಟಕ್ಕೆ ಬಿಡಲು ಮಹಾರಾಷ್ಟ್ರ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿ ನೀರು ಬಿಡಲು ಒಪ್ಪಿದೆ. ಕರ್ನಾಟಕಕ್ಕೆ ನೀರು ಬಿಡಬಾರದು ಎಂಬ ಶಿವಸೇನಾ ಸಂಘಟನೆಯ ಬಾಳ ಠಾಕ್ರೆ ಹೇಳಿಕೆಯಿಂದ ನಾವೇನೂ ಧೃತಿಗೆಡಬೇಕಾಗಿಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.<br /> <br /> ಮಂಗಳವಾರ ಜಿಲ್ಲೆಯ ಬರ ಪರಿಸ್ಥಿತಿ ಕುರಿತ ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಬರಗಾಲ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಪೂರ್ಣ ಮನ್ನಾ ಮಾಡುವ ಬಗ್ಗೆ ಎಲ್ಲ ಜಿಲ್ಲೆಗಳಲ್ಲೂ ರೈತರು ಮನವಿ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಸಮಗ್ರವಾಗಿ ಚರ್ಚಿಸಿ ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಬರಸ್ಥಿತಿಯಲ್ಲಿ ಕೈಗೊಳ್ಳುವ ಕಾಮಗಾರಿ ಸಮರ್ಪಕ ರೀತಿ ನಡೆಯಬೇಕು. <br /> <br /> ಅಕ್ರಮ ವಾಸನೆ ನುಸುಳಬಾರದು. ಇದಕ್ಕಾಗಿ ಅಧಿಕಾರಿ ಮಟ್ಟದಲ್ಲಿಯೇ ನಿರ್ವಹಣಾ ಸಮಿತಿ ರೂಪಿಸಲಾಗಿದೆ ಎಂದು ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 4 ಟಿ.ಎಂ.ಸಿ. ನೀರನ್ನು ಕರ್ನಾಟಕ್ಕೆ ಬಿಡಲು ಮಹಾರಾಷ್ಟ್ರ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿ ನೀರು ಬಿಡಲು ಒಪ್ಪಿದೆ. ಕರ್ನಾಟಕಕ್ಕೆ ನೀರು ಬಿಡಬಾರದು ಎಂಬ ಶಿವಸೇನಾ ಸಂಘಟನೆಯ ಬಾಳ ಠಾಕ್ರೆ ಹೇಳಿಕೆಯಿಂದ ನಾವೇನೂ ಧೃತಿಗೆಡಬೇಕಾಗಿಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.<br /> <br /> ಮಂಗಳವಾರ ಜಿಲ್ಲೆಯ ಬರ ಪರಿಸ್ಥಿತಿ ಕುರಿತ ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಬರಗಾಲ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಪೂರ್ಣ ಮನ್ನಾ ಮಾಡುವ ಬಗ್ಗೆ ಎಲ್ಲ ಜಿಲ್ಲೆಗಳಲ್ಲೂ ರೈತರು ಮನವಿ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಸಮಗ್ರವಾಗಿ ಚರ್ಚಿಸಿ ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಬರಸ್ಥಿತಿಯಲ್ಲಿ ಕೈಗೊಳ್ಳುವ ಕಾಮಗಾರಿ ಸಮರ್ಪಕ ರೀತಿ ನಡೆಯಬೇಕು. <br /> <br /> ಅಕ್ರಮ ವಾಸನೆ ನುಸುಳಬಾರದು. ಇದಕ್ಕಾಗಿ ಅಧಿಕಾರಿ ಮಟ್ಟದಲ್ಲಿಯೇ ನಿರ್ವಹಣಾ ಸಮಿತಿ ರೂಪಿಸಲಾಗಿದೆ ಎಂದು ತಿಳಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>