ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರಿ ಮಳೆ- ದೋಣಿ ಸಮುದ್ರಪಾಲು: 35 ಲಕ್ಷ ಹಾನಿ

Last Updated 15 ಸೆಪ್ಟೆಂಬರ್ 2011, 7:10 IST
ಅಕ್ಷರ ಗಾತ್ರ

ಮಂಗಳೂರು: ಮಂಗಳವಾರ ರಾತ್ರಿ ಬೀಸಿದ ಭಾರಿ ಗಾಳಿ ಮಳೆಗೆ ಬೆಂಗ್ರೆಯಲ್ಲಿ ಲಂಗರು ಹಾಕಿದ್ದ ಮೀನುಗಾರಿಕಾ ದೋಣಿಯೊಂದು ಸಮುದ್ರದಲ್ಲಿ ಮುಳುಗಿದ್ದು, ರೂ 35 ಲಕ್ಷ ಹಾನಿ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಮುಳುಗುತಿದ್ದ ದೋಣಿಯಲ್ಲಿದ್ದ ವಿಪಿನ್ ಸಮುದ್ರಕ್ಕೆ ಹಾರಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೋಣಿಯ ಅವಶೇಷಗಳು ಬೊಕ್ಕಪಟ್ಣ ಸಮುದ್ರ ಕಿನಾರೆಗೆ ಬಂದು ಬಿದ್ದಿದೆ. ಸಮುದ್ರದಲ್ಲಿ ಭಾರಿ ತೂಫಾನಿನ ಹಿನ್ನೆಲೆಯಲ್ಲಿ ಮೇ 27ರಂದೇ ಶೈಲೇಜ್ ಅವರಿಗೆ ಸೇರಿದ ‘ಅಯ್ಯಪ್ಪ’ ದೋಣಿ ಮೀನುಗಾರಿಕೆ ಕೊನೆಗೊಳಿಸಿತ್ತು. ಧಕ್ಕೆಯಲ್ಲಿ ಸ್ಥಳಾವಕಾಶ ಇಲ್ಲದ ಹಿನ್ನೆಲೆಯಲ್ಲಿ  ಬೆಂಗ್ರೆಯಲ್ಲಿ ಲಂಗರು ಹಾಕಿತ್ತು.

ದೋಣಿಯನ್ನು ಗುರುವಾರ ದಡಕ್ಕೆತ್ತಲು ಮಾಲೀಕರು ನಿರ್ಧರಿಸಿದ್ದರಾದರೂ, ಮಂಗಳವಾರ ರಾತ್ರಿಯೇ ಗಾಳಿ ಮಳೆಗೆ ದೋಣಿಯ ಹಗ್ಗ ತುಂಡಾಗಿ ನೀರಿನ ರಭಸಕ್ಕೆ ಸಮುದ್ರಪಾಲಾಯಿತು ಎಂದು ಮೀನುಗಾರರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಮಂಗಳೂರಿನಲ್ಲಿ ಮೂರು ಸಾವಿರಕ್ಕೂ ಅಧಿಕ ದೋಣಿಗಳಿದ್ದು, ಅವುಗಳನ್ನು ಮಳೆಗಾಲದಲ್ಲಿ ಲಂಗರು ಹಾಕಲು ಸ್ಥಳಾವಕಾಶ ಸಾಲದು. ಹಾಗಾಗಿ ಅನೇಕ ದೋಣಿಗಳನ್ನು ಧಕ್ಕೆಯಿಂದ ಹೊರಗಡೆಯೇ ನಿಲ್ಲಿಸಬೇಕಾಗುತ್ತದೆ. ಸೂಕ್ತ ರಕ್ಷಣೆ ಇಲ್ಲದ ಕಾರಣ, ಅವು ಗಾಳಿ ಮಳೆಗೆ ಹಾನಿಗೊಳಗಾಗುತ್ತವೆ. ಪ್ರತಿವರ್ಷ ಕನಿಷ್ಠ  2-3 ದೋಣಿಗಳು ಸಮುದ್ರಪಾಲಾಗುತ್ತಿವೆ. ಈ ಸಮಸ್ಯೆ ಬಗ್ಗೆ ಕಳೆದ 25 ವರ್ಷಗಳಿಂದ ನಿರಂತರವಾಗಿ ಸರ್ಕಾರದ ಗಮನಸೆಳೆದರೂ ಪ್ರಯೋಜನವಾಗಿಲ್ಲ ಎಂದು ಮೀನುಗಾರರೊಬ್ಬರು ಅಳಲು ತೋಡಿಕೊಂಡರು. 

 
 

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT