<p>ಗೌರಿಬಿದನೂರು: ತಾಲ್ಲೂಕಿನ ಗೊಟಕನಾಪುರ, ಗಂಗಸಂದ್ರ ಗ್ರಾಮಗಳ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯೆಯರು ಮಂಗಳವಾರ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಧಿಕಾರಿ ರೆಡ್ಡಪ್ಪ ಚಾಲನೆ ನೀಡಿದರು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ರೆಡ್ಡಪ್ಪ, ತಾಲ್ಲೂಕಿನ ಗೊಟಕನಾಪುರ, ಗಂಗಸಂದ್ರ ಗ್ರಾಮಗಳಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯೆಯರು ಸ್ವಯಂಪ್ರೇರಣೆಯಿಂದ ತಮ್ಮ ಗ್ರಾಮಗಳಲ್ಲಿ ವಾರದಲ್ಲಿ ಒಂದು ದಿನ ಚರಂಡಿ, ರಸ್ತೆಗಳ ಸ್ವಚ್ಛ ಮಾಡುತ್ತಾರೆ. ಸ್ವಚ್ಛತೆ ಮೂಲಕ ಗ್ರಾಮಸ್ಥರಲ್ಲಿ ಉತ್ತಮ ಪರಿಸರ ಮತ್ತು ಆರೋಗ್ಯದ ಕುರಿತು ಜಾಗೃತಿ ಮೂಡಿಸಲಿದ್ದಾರೆ ಎಂದರು.<br /> <br /> ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಬೆಳಿಗ್ಗೆ 7.30ರಿಂದ 10.30ರ ವರೆಗೆ ಶ್ರಮದಾನ ಮಾಡಿದ ಸದಸ್ಯೆಯರು ಕಸ-ಕಡ್ಡಿ, ತಾಜ್ಯ ವಸ್ತು ತೆರವುಗೊಳಿಸಿದರು. ಪುರಸಭೆ ಟ್ರ್ಯಾಕ್ಟರ್ಗಳಲ್ಲಿ ಕಸವನ್ನು ತುಂಬಿ ವಿಲೇವಾರಿ ಮಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಶ್ರಮದಾನಕ್ಕೆ ಕೈಜೋಡಿಸಿದರು.<br /> <br /> ಗೊಟಕನಾಪುರ ಗ್ರಾಮದ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷ ನಾಗರಾಜ್ ನೇತೃತ್ವದಲ್ಲಿ ಜ್ಯೋತಿ ಮಹಿಳಾ ಸ್ವ-ಸಹಾಯ ಸಂಘ, ಗಂಗಸಂದ್ರದ ನವಸಾಕ್ಷರರ ಸಂಘ, ಗೌತಮಿ ಮಹಿಳಾ ಸ್ವ-ಸಹಾಯ ಸಂಘ, ಬಾಬಾಜಾನ್ ಮಹಿಳಾ ಸ್ವ-ಸಹಾಯ ಸಂಘ ಸೇರಿದಂತೆ ಇತರ ಸ್ವಯಂ-ಸೇವಾ ಸಂಘಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೌರಿಬಿದನೂರು: ತಾಲ್ಲೂಕಿನ ಗೊಟಕನಾಪುರ, ಗಂಗಸಂದ್ರ ಗ್ರಾಮಗಳ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯೆಯರು ಮಂಗಳವಾರ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಧಿಕಾರಿ ರೆಡ್ಡಪ್ಪ ಚಾಲನೆ ನೀಡಿದರು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ರೆಡ್ಡಪ್ಪ, ತಾಲ್ಲೂಕಿನ ಗೊಟಕನಾಪುರ, ಗಂಗಸಂದ್ರ ಗ್ರಾಮಗಳಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯೆಯರು ಸ್ವಯಂಪ್ರೇರಣೆಯಿಂದ ತಮ್ಮ ಗ್ರಾಮಗಳಲ್ಲಿ ವಾರದಲ್ಲಿ ಒಂದು ದಿನ ಚರಂಡಿ, ರಸ್ತೆಗಳ ಸ್ವಚ್ಛ ಮಾಡುತ್ತಾರೆ. ಸ್ವಚ್ಛತೆ ಮೂಲಕ ಗ್ರಾಮಸ್ಥರಲ್ಲಿ ಉತ್ತಮ ಪರಿಸರ ಮತ್ತು ಆರೋಗ್ಯದ ಕುರಿತು ಜಾಗೃತಿ ಮೂಡಿಸಲಿದ್ದಾರೆ ಎಂದರು.<br /> <br /> ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಬೆಳಿಗ್ಗೆ 7.30ರಿಂದ 10.30ರ ವರೆಗೆ ಶ್ರಮದಾನ ಮಾಡಿದ ಸದಸ್ಯೆಯರು ಕಸ-ಕಡ್ಡಿ, ತಾಜ್ಯ ವಸ್ತು ತೆರವುಗೊಳಿಸಿದರು. ಪುರಸಭೆ ಟ್ರ್ಯಾಕ್ಟರ್ಗಳಲ್ಲಿ ಕಸವನ್ನು ತುಂಬಿ ವಿಲೇವಾರಿ ಮಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಶ್ರಮದಾನಕ್ಕೆ ಕೈಜೋಡಿಸಿದರು.<br /> <br /> ಗೊಟಕನಾಪುರ ಗ್ರಾಮದ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷ ನಾಗರಾಜ್ ನೇತೃತ್ವದಲ್ಲಿ ಜ್ಯೋತಿ ಮಹಿಳಾ ಸ್ವ-ಸಹಾಯ ಸಂಘ, ಗಂಗಸಂದ್ರದ ನವಸಾಕ್ಷರರ ಸಂಘ, ಗೌತಮಿ ಮಹಿಳಾ ಸ್ವ-ಸಹಾಯ ಸಂಘ, ಬಾಬಾಜಾನ್ ಮಹಿಳಾ ಸ್ವ-ಸಹಾಯ ಸಂಘ ಸೇರಿದಂತೆ ಇತರ ಸ್ವಯಂ-ಸೇವಾ ಸಂಘಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>