ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಎಸ್‌ಸಿ: ಗಂಗಾವತಿಯ ವಿನೋದ್‌ಗೆ 294ನೇ ರ‍್ಯಾಂಕ್‌

Last Updated 28 ಏಪ್ರಿಲ್ 2018, 12:14 IST
ಅಕ್ಷರ ಗಾತ್ರ

ಕೊಪ್ಪಳ: ಯುಪಿಎಸ್ಸಿ ಪರೀಕ್ಷೆಯಲ್ಲಿ ಗಂಗಾವತಿಯ ವಿನೋದ್ 294ನೇ ರ‍್ಯಾಂಕ್‌ ಪಡೆದಿದ್ದಾರೆ.

ಗಂಗಾವತಿಯ ಅಕ್ಕಮಹಾದೇವಿ -ದಿವಂಗತ ಮಲ್ಲಿಕಾರ್ಜುನ ಗೌಡ ದಂಪತಿಯ ಪುತ್ರ ವಿನೋದ್ ಬಾಲ್ಯದಿಂದಲೂ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಕನಸು ಹೊಂದಿದ್ದರು.

ಸುರತ್ಕಲ್ ಎನ್ಐಟಿಕೆ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಷಯದಲ್ಲಿ ಬಿ.ಇ. ಪದವಿ ಪಡೆದ ಇವರು ಒಂದು ವರ್ಷ ಕಾಲ ಉದ್ಯೋಗದಲ್ಲಿದ್ದರು. ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗೆ ದೆಹಲಿ ಮತ್ತು ಬೆಂಗಳೂರಿನಲ್ಲಿ ತರಬೇತಿ ಪಡೆದರು.

‘ಕಳೆದ ವರ್ಷವೇ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಕಸ್ಟಮ್ಸ್ ಸೇವೆಗೆ ಆಯ್ಕೆಯಾಗಿದ್ದೆ. ಈ ಬಾರಿ ಮತ್ತೊಂದು ಸುತ್ತಿನ ಪರೀಕ್ಷೆ ಬರೆದು ರ‍್ಯಾಂಕ್‌ ಪಡೆದಿದ್ದೇನೆ. ನಿರ್ದಿಷ್ಟ ಗುರಿ ಹಿಡಿದು ಪ್ರಯತ್ನಪಟ್ಟರೆ ಯಶಸ್ಸು ಸಾಧ್ಯ’ ಎಂದು ವಿನೋದ್ ಸಂತಸ ಹಂಚಿಕೊಂಡರು. ವಿನೋದ್ ಅವರದ್ದು ಕೃಷಿ ಕುಟುಂಬ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT