<p><strong>ಗದಗ: </strong>ರೈಲು ಸೌಲಭ್ಯ ಹೆಚ್ಚಿಸಲು ಒತ್ತಾಸಿ ಸಗಣಿಯನ್ನು ಮೈಮೇಲೆ ಸುರಿದುಕೊಂಡು ಉರುಳುಸೇವೆ ಮಾಡುವ ಮೂಲಕ ಕರ್ನಾಟಕ ರಾಜ್ಯ ಬ್ರಾಡ್ಗೇಜ್ ರೈಲ್ವೆ ಹೋರಾಟ ಸಮಿತಿ ಕಾರ್ಯಕರ್ತರು ಸೋಮವಾರ ನಗರದ ರೈಲು ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು.<br /> <br /> ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹೋರಾಟ ಸಮಿತಿಯ ಅಧ್ಯಕ್ಷ ಕುತುಬುದ್ದೀನ್ ಖಾಜಿ ಹಾಗೂ ಇತರರು ಸೆಗಣಿ ಸುರಿದುಕೊಂಡು ಉರುಳುಸೇವೆ ಮಾಡಿದರು. ರೈಲ್ವೆ ಅಧಿಕಾರಿಗಳಿಗೆ ಈವರೆಗೆ ನೀಡಲಾಗಿದ್ದ ಮನವಿಪತ್ರಗಳನ್ನು ಸುಟ್ಟರು. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಹೊಸದಾಗಿ ಮನವಿ ಸ್ವೀಕರಿಸುವಂತೆ ಪಟ್ಟುಹಿಡಿದರು. <br /> <br /> `ಗದಗ ರೈಲು ಮಾರ್ಗ ಬ್ರಾಡ್ಗೇಜ್ ಆಗಿ ಪರಿವರ್ತನೆಗೊಂಡ ನಂತರ ಇಲ್ಲಿನ ವಿವಿಧ ರೈಲು ಸಂಚಾರ ಸೌಲಭ್ಯ ಹಾಗೂ ಮೂಲ ಸೌಕರ್ಯಗಳಿಗಾಗಿ ಮನವಿ ಸಲ್ಲಿಸಲಾಗಿದೆ. ಆದಾಗ್ಯೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನು 10-15 ದಿನಗಳ ಒಳಗಾಗಿ ಅಧಿಕಾರಿಗಳು ಹಾಗೂ ಇಲ್ಲಿನ ಜನಪ್ರತಿನಿಧಿಗಳು ನಮ್ಮ ಬೇಡಿಕೆ ಈಡೇರಿಸಬೇಕು. <br /> <br /> ಇಲ್ಲದಿದ್ದರೆ ಇದೇ ನಿಲ್ದಾಣದ ಎದುರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ~ ಎಂದು ಕುತುಬುದ್ದೀನ್ ಖಾಜಿ ಬೆದರಿಕೆ ಹಾಕಿದರು. ಗದಗದಿಂದ ವಿವಿಧ ಸ್ಥಳಗಳಿಗೆ ಪ್ಯಾಸೆಂಜರ್ ರೈಲು ಸಂಚಾರ ಆರಂಭಿಸಬೇಕು. ಬಾಗಲಕೋಟೆ, ವಿಜಾಪುರ ಕಡೆಗೆ ಬೆಳಿಗ್ಗೆ ವೇಳೆ ರೈಲು ಸಂಚಾರ ಆರಂಭಿಸಬೇಕು. <br /> <br /> ಜನಶತಾಬ್ದಿ ರೈಲನ್ನು ಗದಗದವರೆಗೂ ವಿಸ್ತರಿಸಬೇಕು ಹಾಗೂ ಇತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ರೈಲ್ವೆ ಇಲಾಖೆ ಟ್ರಾಫಿಕ್ ಇನ್ಸ್ಪೆಕ್ಟರ್ ಟಿ.ಕುಮಾರ್ ಮನವಿ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ: </strong>ರೈಲು ಸೌಲಭ್ಯ ಹೆಚ್ಚಿಸಲು ಒತ್ತಾಸಿ ಸಗಣಿಯನ್ನು ಮೈಮೇಲೆ ಸುರಿದುಕೊಂಡು ಉರುಳುಸೇವೆ ಮಾಡುವ ಮೂಲಕ ಕರ್ನಾಟಕ ರಾಜ್ಯ ಬ್ರಾಡ್ಗೇಜ್ ರೈಲ್ವೆ ಹೋರಾಟ ಸಮಿತಿ ಕಾರ್ಯಕರ್ತರು ಸೋಮವಾರ ನಗರದ ರೈಲು ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದರು.<br /> <br /> ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹೋರಾಟ ಸಮಿತಿಯ ಅಧ್ಯಕ್ಷ ಕುತುಬುದ್ದೀನ್ ಖಾಜಿ ಹಾಗೂ ಇತರರು ಸೆಗಣಿ ಸುರಿದುಕೊಂಡು ಉರುಳುಸೇವೆ ಮಾಡಿದರು. ರೈಲ್ವೆ ಅಧಿಕಾರಿಗಳಿಗೆ ಈವರೆಗೆ ನೀಡಲಾಗಿದ್ದ ಮನವಿಪತ್ರಗಳನ್ನು ಸುಟ್ಟರು. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಹೊಸದಾಗಿ ಮನವಿ ಸ್ವೀಕರಿಸುವಂತೆ ಪಟ್ಟುಹಿಡಿದರು. <br /> <br /> `ಗದಗ ರೈಲು ಮಾರ್ಗ ಬ್ರಾಡ್ಗೇಜ್ ಆಗಿ ಪರಿವರ್ತನೆಗೊಂಡ ನಂತರ ಇಲ್ಲಿನ ವಿವಿಧ ರೈಲು ಸಂಚಾರ ಸೌಲಭ್ಯ ಹಾಗೂ ಮೂಲ ಸೌಕರ್ಯಗಳಿಗಾಗಿ ಮನವಿ ಸಲ್ಲಿಸಲಾಗಿದೆ. ಆದಾಗ್ಯೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನು 10-15 ದಿನಗಳ ಒಳಗಾಗಿ ಅಧಿಕಾರಿಗಳು ಹಾಗೂ ಇಲ್ಲಿನ ಜನಪ್ರತಿನಿಧಿಗಳು ನಮ್ಮ ಬೇಡಿಕೆ ಈಡೇರಿಸಬೇಕು. <br /> <br /> ಇಲ್ಲದಿದ್ದರೆ ಇದೇ ನಿಲ್ದಾಣದ ಎದುರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ~ ಎಂದು ಕುತುಬುದ್ದೀನ್ ಖಾಜಿ ಬೆದರಿಕೆ ಹಾಕಿದರು. ಗದಗದಿಂದ ವಿವಿಧ ಸ್ಥಳಗಳಿಗೆ ಪ್ಯಾಸೆಂಜರ್ ರೈಲು ಸಂಚಾರ ಆರಂಭಿಸಬೇಕು. ಬಾಗಲಕೋಟೆ, ವಿಜಾಪುರ ಕಡೆಗೆ ಬೆಳಿಗ್ಗೆ ವೇಳೆ ರೈಲು ಸಂಚಾರ ಆರಂಭಿಸಬೇಕು. <br /> <br /> ಜನಶತಾಬ್ದಿ ರೈಲನ್ನು ಗದಗದವರೆಗೂ ವಿಸ್ತರಿಸಬೇಕು ಹಾಗೂ ಇತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ರೈಲ್ವೆ ಇಲಾಖೆ ಟ್ರಾಫಿಕ್ ಇನ್ಸ್ಪೆಕ್ಟರ್ ಟಿ.ಕುಮಾರ್ ಮನವಿ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>