<p>ಯಾದಗಿರಿ: ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಕುಡಿಯುವ ನೀರು ಪೂರೈಕೆಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ಅವಶ್ಯಕತೆ ಇರುವ ಸ್ಥಳಗಳಲ್ಲಿ ನೀರಿನ ವ್ಯವಸ್ಥೆ ಮಾಡಲು ಕ್ರಿಯಾಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುರನೀತ್ ತೇಜ್ ಮೆನನ್ ತಿಳಿಸಿದರು.<br /> <br /> ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಥಮ ಸಾಮಾನ್ಯಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, “ಜಿಲ್ಲೆಯಲ್ಲಿ ಜಿ.ಪಂ. ಅನುದಾನದಡಿ ರೂ.58.10 ಲಕ್ಷ ಹಾಗೂ ಜಿಲ್ಲಾಧಿಕಾರಿಗಳ ಅನುದಾನದಡಿ ರೂ.1.09 ಕೋಟಿ ವೆಚ್ಚದ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ” ಎಂದರು. <br /> <br /> ಇದರ ಜೊತೆಗೆ ಎಲ್ಲಿಯಾದರೂ ನೀರು ಪೂರೈಕೆಯಲ್ಲಿ ಅವ್ಯವಸ್ಥೆ ಕಂಡು ಬಂದಲ್ಲಿ ತುರ್ತು ನಿರ್ವಹಣೆಗೆ ವಾಲ್ವ್ಮನ್ಗಳನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. ಜೊತೆಗೆ ತಾಲ್ಲೂಕುವಾರು ಸಹಾಯವಾಣಿಯನ್ನು ಆರಂಭಿಸಲಾಗುತ್ತಿದೆ. ನೀರು ಪೂರೈಕೆಗೆ ಸಂಬಂಧಿಸಿದಂತೆ ಯಾವುದಾದರೂ ದೂರು ಬಂದಲ್ಲಿ ಕೂಡಲೇ ಈ ತಂಡ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಲಿದೆ” ಎಂದರು. <br /> <br /> ಬಸವರಾಜ ಖಂಡ್ರೆ ಮಾತನಾಡಿ, ರೈತರ ಗದ್ದೆಗಳಿಂದ ರಾಸಾಯನಿಕ ಹೊಂದಿದ ನೀರನ್ನು ಭೀಮಾ ನದಿಗೆ ಬಿಡಲಾಗುತ್ತಿದೆ. ಇದರಿಂದ ನದಿ ತೀರದ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ ಎಂದು ದೂರಿದರು.<br /> <br /> ಜಿ.ಪಂ. ಸದಸ್ಯ ಸಿದ್ಧನಗೌಡ ಪೊಲೀಸ್ಪಾಟೀಲ, ಎಚ್.ಸಿ. ಪಾಟೀಲ ಮಾತನಾಡಿದರು</p>.<p> ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಿಇಓ ಅಧಿಕಾರಿಗಳಿಗೆ ಸೂಚನೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಕುಡಿಯುವ ನೀರು ಪೂರೈಕೆಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ಅವಶ್ಯಕತೆ ಇರುವ ಸ್ಥಳಗಳಲ್ಲಿ ನೀರಿನ ವ್ಯವಸ್ಥೆ ಮಾಡಲು ಕ್ರಿಯಾಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುರನೀತ್ ತೇಜ್ ಮೆನನ್ ತಿಳಿಸಿದರು.<br /> <br /> ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಥಮ ಸಾಮಾನ್ಯಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, “ಜಿಲ್ಲೆಯಲ್ಲಿ ಜಿ.ಪಂ. ಅನುದಾನದಡಿ ರೂ.58.10 ಲಕ್ಷ ಹಾಗೂ ಜಿಲ್ಲಾಧಿಕಾರಿಗಳ ಅನುದಾನದಡಿ ರೂ.1.09 ಕೋಟಿ ವೆಚ್ಚದ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ” ಎಂದರು. <br /> <br /> ಇದರ ಜೊತೆಗೆ ಎಲ್ಲಿಯಾದರೂ ನೀರು ಪೂರೈಕೆಯಲ್ಲಿ ಅವ್ಯವಸ್ಥೆ ಕಂಡು ಬಂದಲ್ಲಿ ತುರ್ತು ನಿರ್ವಹಣೆಗೆ ವಾಲ್ವ್ಮನ್ಗಳನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. ಜೊತೆಗೆ ತಾಲ್ಲೂಕುವಾರು ಸಹಾಯವಾಣಿಯನ್ನು ಆರಂಭಿಸಲಾಗುತ್ತಿದೆ. ನೀರು ಪೂರೈಕೆಗೆ ಸಂಬಂಧಿಸಿದಂತೆ ಯಾವುದಾದರೂ ದೂರು ಬಂದಲ್ಲಿ ಕೂಡಲೇ ಈ ತಂಡ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಲಿದೆ” ಎಂದರು. <br /> <br /> ಬಸವರಾಜ ಖಂಡ್ರೆ ಮಾತನಾಡಿ, ರೈತರ ಗದ್ದೆಗಳಿಂದ ರಾಸಾಯನಿಕ ಹೊಂದಿದ ನೀರನ್ನು ಭೀಮಾ ನದಿಗೆ ಬಿಡಲಾಗುತ್ತಿದೆ. ಇದರಿಂದ ನದಿ ತೀರದ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ ಎಂದು ದೂರಿದರು.<br /> <br /> ಜಿ.ಪಂ. ಸದಸ್ಯ ಸಿದ್ಧನಗೌಡ ಪೊಲೀಸ್ಪಾಟೀಲ, ಎಚ್.ಸಿ. ಪಾಟೀಲ ಮಾತನಾಡಿದರು</p>.<p> ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಿಇಓ ಅಧಿಕಾರಿಗಳಿಗೆ ಸೂಚನೆ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>