<p>ಚಿಂತಾಮಣಿ: ಹೋಬಳಿ ಹಂತದ ವಿವಿಧ ಅಧಿಕಾರಿಗಳು ಒಂದೆಡೆ ಸೇರಿ ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಜನಸ್ಪಂದನಾ ಕಾರ್ಯಕ್ರಮ ಜಾರಿಗೆ ತಂದಿದೆ. ಸಾರ್ವಜನಿಕರು ಸಭೆಗಳಲ್ಲಿ ಭಾಗವಹಿಸಿ ಸಮಸ್ಯೆ ಪಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಕೃಷ್ಣಮೂರ್ತಿ ತಿಳಿಸಿದರು.<br /> <br /> ತಾಲ್ಲೂಕಿನ ಆನೂರು ಗ್ರಾಮದಲ್ಲಿ ತಾಲ್ಲೂಕು ಆಡಳಿತ ಶನಿವಾರ ಏರ್ಪಡಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ನೀಡಬೇಕು. ಸ್ಥಳದಲ್ಲೇ ಬಗೆಹರಿಸಬಹುದಾದ ಸಮಸ್ಯೆಗಳನ್ನು ಪರಿಹರಿಸಲಾಗುವುದು. ವಿವಿಧ ಹಂತಗಳಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳನ್ನು ಶೀಘ್ರ ಕಚೇರಿಗಳಲ್ಲಿ ಪರಿಶೀಲಿಸಿ ಇತ್ಯರ್ಥಪಡಿಸಲಾಗುವುದು ಎಂದರು.<br /> <br /> ರೈತರ ಅನುಕೂಲಕ್ಕೆ ಇರುವ ಅರಣ್ಯ ಇಲಾಖೆ ಸೂಕ್ತ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಸಭೆಯಲ್ಲಿ ಸಾರ್ವಜನಿಕರು ಆರೋಪಿಸಿದಾಗ ಲಿಖಿತ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.<br /> <br /> ಪಶುಪಾಲನಾ ಇಲಾಖೆ ವತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವ ಅನುಕೂಲಗಳು ಆಗುತ್ತಿಲ್ಲ ಎಂದು ಜನರು ದೂರಿದರು. ಅಧಿಕಾರಿಗಳ ಗೈರು ಹಾಜರಿ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಆಗ್ರಹಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ಹೋಬಳಿ ಹಂತದ ವಿವಿಧ ಅಧಿಕಾರಿಗಳು ಒಂದೆಡೆ ಸೇರಿ ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಜನಸ್ಪಂದನಾ ಕಾರ್ಯಕ್ರಮ ಜಾರಿಗೆ ತಂದಿದೆ. ಸಾರ್ವಜನಿಕರು ಸಭೆಗಳಲ್ಲಿ ಭಾಗವಹಿಸಿ ಸಮಸ್ಯೆ ಪಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಕೃಷ್ಣಮೂರ್ತಿ ತಿಳಿಸಿದರು.<br /> <br /> ತಾಲ್ಲೂಕಿನ ಆನೂರು ಗ್ರಾಮದಲ್ಲಿ ತಾಲ್ಲೂಕು ಆಡಳಿತ ಶನಿವಾರ ಏರ್ಪಡಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ನೀಡಬೇಕು. ಸ್ಥಳದಲ್ಲೇ ಬಗೆಹರಿಸಬಹುದಾದ ಸಮಸ್ಯೆಗಳನ್ನು ಪರಿಹರಿಸಲಾಗುವುದು. ವಿವಿಧ ಹಂತಗಳಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳನ್ನು ಶೀಘ್ರ ಕಚೇರಿಗಳಲ್ಲಿ ಪರಿಶೀಲಿಸಿ ಇತ್ಯರ್ಥಪಡಿಸಲಾಗುವುದು ಎಂದರು.<br /> <br /> ರೈತರ ಅನುಕೂಲಕ್ಕೆ ಇರುವ ಅರಣ್ಯ ಇಲಾಖೆ ಸೂಕ್ತ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಸಭೆಯಲ್ಲಿ ಸಾರ್ವಜನಿಕರು ಆರೋಪಿಸಿದಾಗ ಲಿಖಿತ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.<br /> <br /> ಪಶುಪಾಲನಾ ಇಲಾಖೆ ವತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವ ಅನುಕೂಲಗಳು ಆಗುತ್ತಿಲ್ಲ ಎಂದು ಜನರು ದೂರಿದರು. ಅಧಿಕಾರಿಗಳ ಗೈರು ಹಾಜರಿ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಆಗ್ರಹಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>