ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಿಕ್ಷಕರಿಂದ ಗುಣಮಟ್ಟ ಕುಸಿತ

Last Updated 3 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಶಿರಾ:`ಖಾಸಗಿ ಶಾಲೆಗಳ ಶಿಕ್ಷಕರು ಹೆಚ್ಚು ಶ್ರಮ ವಹಿಸಿ ದುಡಿಯುತ್ತಾರೆ. ಗುಣಮಟ್ಟದ ಶಿಕ್ಷಣ ನೀಡುತ್ತಾರೆ. ಸರ್ಕಾರಿ ಶಾಲೆಗಳ ಶಿಕ್ಷಕರ ಬೇಜವಾಬ್ದಾರಿಯಿಂದ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ~ ಎಂದು
ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ಶಿವಯೋಗಿಸ್ವಾಮಿ ಆಪಾದಿಸಿದರು.

ನಗರದಲ್ಲಿ ಶನಿವಾರ ನಡೆದ ಮಧುಗಿರಿ ಶೈಕ್ಷಣಿಕ ಜಿಲ್ಲೆ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಶಿಕ್ಷಕರ ಸಮಾವೇಶದಲ್ಲಿ ಅವರು ಮಾತನಾಡಿದರು.

ಕೆಲವು ಅಧಿಕಾರಿಗಳು ಸಂಬಂಧಿಸಿದವರು ಕೋರ್ಟ್‌ಗೆ ಹೋಗಿ ತಡೆಯಾಜ್ಞೆ ತರಲಿ ಎಂದೇ ವಿವಾದಾತ್ಮಕ ಆದೇಶ ಹೊರಡಿಸುತ್ತಾರೆ. ಖಾಸಗಿ ಶಾಲೆಗಳ ವಿಷಯದಲ್ಲೂ ಅಧಿಕಾರಿಗಳು ವಿವಾದಾತ್ಮಕ ಆದೇಶ ಹೊರಡಿಸಿ ನಂತರ ಆಡಳಿತ ಮಂಡಳಿಯವರಿಗೆ ಕೋರ್ಟ್‌ಗೆ ಹೋಗಿ ತಡೆಯಾಜ್ಞೆ ತನ್ನಿ ಎಂದು ಹೇಳಿ ಕಾಲ ದೂಡುವ ಆಟ ಹೂಡಿರುತ್ತಾರೆ ಎಂದು ದೂರಿದರು. ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಜಿ.ಎಸ್.ಶರ್ಮಾ ಉದ್ಘಾಟಿಸಿದರು.

~ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಸಿ.ಜಯರಾಮಕಾವ್ ಅಧ್ಯಕ್ಷತೆ ವಹಿಸಿದ್ದರು. ಡಿಡಿಪಿಐ ಪಿ.ಹುಚ್ಚಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಮಾಧವ ರೆಡ್ಡಿ, ಪ್ರಸನ್ನಕುಮಾರ್, ಹನುಮಂತರಾಯಪ್ಪ ಉಪಸ್ಥಿತರಿದ್ದರು. ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಎಸ್.ಅನಂತರಾಂ ಸಿಂಗ್ ಸ್ವಾಗತಿಸಿ, ಕಾರ್ಯದರ್ಶಿ ಕೋಟೆ ಚಂದ್ರಶೇಖರ್ ನಿರೂಪಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT