ತಿಪ್ಪೇಸ್ವಾಮಿ ಬಿದಿರೆಕೆರೆಯ ತಮ್ಮ ಜಮೀನಿನಲ್ಲಿ ಮಾವಿನ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಮಳೆ, ಬೆಳೆ ಇಲ್ಲದೆ ಮಂಡಿ ವರ್ತಕರ ಬಳಿ ಮಾಡಿರುವ ಸಾಲ ತೀರಿಸಲು ಆಗುತ್ತಿಲ್ಲ ಎಂದು ಪತ್ರದಲ್ಲಿ ಬರೆದಿಟ್ಟಿದ್ದಾರೆ. ಕಳೆದ ವರ್ಷ ಅವರ ತಮ್ಮ ರಂಗನಾಥ್ ಸಿಡಿಲು ಬಡಿದು ಮೃತಪಟ್ಟಿದ್ದರು. ಆತ್ಮಹತ್ಯೆ ಮಾಡಿಕೊಂಡ ತಿಪ್ಪೇಸ್ವಾಮಿ ಪತ್ನಿ ಜುಂಜಮ್ಮ ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.