ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲ ಬಾಧೆ: ಮೂರಕ್ಕೇರಿದ ರೈತರ ಆತ್ಮಹತ್ಯೆ

Last Updated 18 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಶಿರಾ: ಸಾಲ ಬಾಧೆಯಿಂದ ರೈತರೊಬ್ಬರು ಚೀಟಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಬಂದಕುಂಟೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ತಿಪ್ಪೇಸ್ವಾಮಿ (35) ಆತ್ಮಹತ್ಯೆ ಮಾಡಿಕೊಂಡ ರೈತ. ತಾಲ್ಲೂಕಿನಲ್ಲಿ ಮೂರು ದಿನಗಳ ಹಿಂದೆ ಸಾಲ ಭಾದೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದರು. ಸೋಮವಾರ ಸಂಜೆಯಷ್ಟೇ ಪಾವಗಡದಲ್ಲಿ ರೈತ ಆತ್ಮಹತ್ಯೆಗೆ ಶರಣಾಗಿದ್ದರು. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಿಪ್ಪೇಸ್ವಾಮಿ ಬಿದಿರೆಕೆರೆಯ ತಮ್ಮ ಜಮೀನಿನಲ್ಲಿ ಮಾವಿನ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಮಳೆ, ಬೆಳೆ ಇಲ್ಲದೆ ಮಂಡಿ ವರ್ತಕರ ಬಳಿ ಮಾಡಿರುವ ಸಾಲ ತೀರಿಸಲು ಆಗುತ್ತಿಲ್ಲ ಎಂದು ಪತ್ರದಲ್ಲಿ ಬರೆದಿಟ್ಟಿದ್ದಾರೆ. ಕಳೆದ ವರ್ಷ ಅವರ ತಮ್ಮ ರಂಗನಾಥ್ ಸಿಡಿಲು ಬಡಿದು ಮೃತಪಟ್ಟಿದ್ದರು. ಆತ್ಮಹತ್ಯೆ ಮಾಡಿಕೊಂಡ ತಿಪ್ಪೇಸ್ವಾಮಿ ಪತ್ನಿ ಜುಂಜಮ್ಮ ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT