<p><strong>ಯಲಬುರ್ಗಾ: </strong>ಆರ್ಥಿಕ ಸಂಕಷ್ಟದಲ್ಲಿರುವ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಅನುಕೂಲವಾಗಲಿರುವ ಸುವರ್ಣಭೂಮಿ ಯೋಜನೆಯ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಲಾಟರಿ ಮೂಲಕ ನಡೆಸುವುದು ಪಾರದರ್ಶಕತೆಯ ಸಂಕೇತ ಎಂದು ತಹಸೀಲ್ದಾರ ಈ.ಡಿ. ಭೃಂಗಿ ಹೇಳಿದರು.</p>.<p>ಪಟ್ಟಣದಲ್ಲಿ ಭಾನುವಾರ ಸುವರ್ಣಭೂಮಿ ಯೋಜನೆಯ ಫಲಾನುಭವಿಗಳ ಆಯ್ಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಳೆದ ವರ್ಷದ ಫಲಾನುಭವಿಗಳನ್ನು ಹೊರತುಪಡಿಸಿ ಹೊಸಬರಿಗೆ ಅವಕಾಶ ಕೊಡಲಾಗಿದೆ. ಕಳೆದ ಸಾಲಿನ 2ನೇ ಕಂತಿನ ಹಣವನ್ನು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಎಂದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಸುರೇಶಗೌಡ ಮಾತನಾಡಿ, ಸತತ ಮೂರನೇ ವರ್ಷದ ಬರಗಾಲಕ್ಕೆ ರೈತರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ತ್ವರಿತಗತಿಯಲ್ಲಿ ಅನುದಾನ ಬಿಡುಗಡೆಮಾಡಿ ರೈತರನ್ನು ಸಂಕಷ್ಟದಿಂದ ಪಾರುಮಾಡಬೇಕು ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು. </p>.<p>ತೋಟಗಾರಿಕೆ ಅಧಿಕಾರಿ ನಜೀರ್ಅಹ್ಮದ್ ಮಾತನಾಡಿ, ತೋಟಗಾರಿಕೆಗೆ ಸಂಬಂಧಿಸಿದಂತೆ ನಾಲ್ಕು ಹೋಬಳಿ ಪೈಕಿ 1,374ಅರ್ಜಿಗಳಲ್ಲಿ 77ಎಸ್ಸಿ, 31ಎಸ್ಟಿ, 380ಇತರರು ಸೇರಿ 488ರೈತರು ಆಯ್ಕೆಯಾಗಲಿದ್ದಾರೆ ಎಂದರು.</p>.<p>ಎರಡು ಕಂತುಗಳಲ್ಲಿ ದೊರೆಯುವ ರೂ. 10 ಸಾವಿರ ಅನುದಾನವನ್ನು ಯೋಜನೆಯ ನಿಯಮದಂತೆ ಬಳಕೆಯಾಗಬೇಕು. ಕೃಷಿ ಇಲಾಖೆಗೆ ಸಂಬಂಧಿಸಿದಂತೆ, 226-ಎಸ್ಸಿ, 91-ಎಸ್ಟಿ, 1,075ಇತರರು ಸೇರಿ ಒಟ್ಟು 1,392ರೈತರನ್ನು ಆಯ್ಕೆ ಮಾಡಲಾಗುವುದು ಎಂದು ಕೃಷಿ ಅಧಿಕಾರಿ ವೈ.ವೈ. ಕೊರಟಗೇರಿ ನುಡಿದರು.</p>.<p>ಯುವ ಮುಖಂಡ ನವೀನ ಗುಳಗಣ್ಣವರ ಮಾತನಾಡಿದರು. ಅಧಿಕಾರಿಗಳು ಲಾಟರಿ ಮೂಲಕ ವಿವಿಧ ಹೋಬಳಿಯ ರೈತರನ್ನು ಆಯ್ಕೆ ಮಾಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳಾದ ಪದ್ಮನಾಯಕ, ಬಾಲರೆಡ್ಡಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ: </strong>ಆರ್ಥಿಕ ಸಂಕಷ್ಟದಲ್ಲಿರುವ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಅನುಕೂಲವಾಗಲಿರುವ ಸುವರ್ಣಭೂಮಿ ಯೋಜನೆಯ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಲಾಟರಿ ಮೂಲಕ ನಡೆಸುವುದು ಪಾರದರ್ಶಕತೆಯ ಸಂಕೇತ ಎಂದು ತಹಸೀಲ್ದಾರ ಈ.ಡಿ. ಭೃಂಗಿ ಹೇಳಿದರು.</p>.<p>ಪಟ್ಟಣದಲ್ಲಿ ಭಾನುವಾರ ಸುವರ್ಣಭೂಮಿ ಯೋಜನೆಯ ಫಲಾನುಭವಿಗಳ ಆಯ್ಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಳೆದ ವರ್ಷದ ಫಲಾನುಭವಿಗಳನ್ನು ಹೊರತುಪಡಿಸಿ ಹೊಸಬರಿಗೆ ಅವಕಾಶ ಕೊಡಲಾಗಿದೆ. ಕಳೆದ ಸಾಲಿನ 2ನೇ ಕಂತಿನ ಹಣವನ್ನು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಎಂದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಸುರೇಶಗೌಡ ಮಾತನಾಡಿ, ಸತತ ಮೂರನೇ ವರ್ಷದ ಬರಗಾಲಕ್ಕೆ ರೈತರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ತ್ವರಿತಗತಿಯಲ್ಲಿ ಅನುದಾನ ಬಿಡುಗಡೆಮಾಡಿ ರೈತರನ್ನು ಸಂಕಷ್ಟದಿಂದ ಪಾರುಮಾಡಬೇಕು ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು. </p>.<p>ತೋಟಗಾರಿಕೆ ಅಧಿಕಾರಿ ನಜೀರ್ಅಹ್ಮದ್ ಮಾತನಾಡಿ, ತೋಟಗಾರಿಕೆಗೆ ಸಂಬಂಧಿಸಿದಂತೆ ನಾಲ್ಕು ಹೋಬಳಿ ಪೈಕಿ 1,374ಅರ್ಜಿಗಳಲ್ಲಿ 77ಎಸ್ಸಿ, 31ಎಸ್ಟಿ, 380ಇತರರು ಸೇರಿ 488ರೈತರು ಆಯ್ಕೆಯಾಗಲಿದ್ದಾರೆ ಎಂದರು.</p>.<p>ಎರಡು ಕಂತುಗಳಲ್ಲಿ ದೊರೆಯುವ ರೂ. 10 ಸಾವಿರ ಅನುದಾನವನ್ನು ಯೋಜನೆಯ ನಿಯಮದಂತೆ ಬಳಕೆಯಾಗಬೇಕು. ಕೃಷಿ ಇಲಾಖೆಗೆ ಸಂಬಂಧಿಸಿದಂತೆ, 226-ಎಸ್ಸಿ, 91-ಎಸ್ಟಿ, 1,075ಇತರರು ಸೇರಿ ಒಟ್ಟು 1,392ರೈತರನ್ನು ಆಯ್ಕೆ ಮಾಡಲಾಗುವುದು ಎಂದು ಕೃಷಿ ಅಧಿಕಾರಿ ವೈ.ವೈ. ಕೊರಟಗೇರಿ ನುಡಿದರು.</p>.<p>ಯುವ ಮುಖಂಡ ನವೀನ ಗುಳಗಣ್ಣವರ ಮಾತನಾಡಿದರು. ಅಧಿಕಾರಿಗಳು ಲಾಟರಿ ಮೂಲಕ ವಿವಿಧ ಹೋಬಳಿಯ ರೈತರನ್ನು ಆಯ್ಕೆ ಮಾಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳಾದ ಪದ್ಮನಾಯಕ, ಬಾಲರೆಡ್ಡಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>