<p><strong>ಹಾವೇರಿ: </strong>ಬೆಳಗಾವಿಯಲ್ಲಿ ನಿರ್ಮಿಸಲಾದ ಸುವರ್ಣಸೌಧ ಕಟ್ಟಡದ ಉದ್ಘಾಟನೆಗಾಗಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಆಹ್ವಾನಿಸಲು ಆ.16 ರಂದು ಗುರುವಾರ ಮುಖ್ಯಮಂತ್ರಿಗಳು ದೆಹಲಿಗೆ ತೆರಳಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸಿ.ಎಂ.ಉದಾಸಿ ತಿಳಿಸಿದರು.<br /> <br /> 66ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಹಾಗೂ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಸಹ ಮುಖ್ಯಮಂತ್ರಿಗಳ ಜತೆ ದೆಹಲಿಗೆ ತೆರಳುತ್ತಿರುವುದಾಗಿ ಹೇಳಿದರು. <br /> <br /> ಸುವರ್ಣಸೌಧವನ್ನು ಸೆಪ್ಟಂಬರ್ನಲ್ಲಿ ಉದ್ಘಾಟಿಸುವ ಚಿಂತನೆ ನಡೆದಿದ್ದು, ಇದಕ್ಕೆ ರಾಷ್ಟ್ರಪತಿಗಳಿಗೆ ಆಹ್ವಾನ ನೀಡುವುದರ ಜತೆಗೆ ಅವರು ಆ ತಿಂಗಳು ಯಾವ ದಿನಾಂಕ ನೀಡುತ್ತಾರೆಯೋ ಅದೇ ದಿನದಂದು ನೂತನ ಕಟ್ಟಡ ಉದ್ಘಾಟಿಸಲಾಗುವುದು ಎಂದು ಹೇಳಿದರು.<br /> <br /> <strong>ಟಾಟಾ ಮೆಟಾಲಿಕ್ ಪ್ರಗತಿಯಲ್ಲಿ:</strong> ಹಾವೇರಿ ತಾಲ್ಲೂಕಿನ ಅಗಡಿ ಬಳಿ ನಿರ್ಮಿಸಲು ಉದ್ದೇಶಿಸಿರುವ ಟಾಟಾ ಮೆಟಾಲಿಕ್ ಉಕ್ಕು ಕಾರ್ಖಾನೆ ಸ್ಥಾಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ತಿಂಗಳು 3 ರಂದು ಟಾಟಾ ಕಂಪೆನಿ ಹಿರಿಯ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ . ಕೇಂದ್ರ ಸರ್ಕಾರ ಅದಿರು ಗಣಿಗಾರಿಕೆ ನಡೆಸುವುದಕ್ಕೆ ನಿಷೇಧ ಹೇರಿದ್ದರಿಂದ ಕಾರ್ಖಾನೆ ಸ್ಥಾಪನೆ ವಿಳಂಬವಾಗಿದೆ ಹೊರತೂ ಬೇರೆ ಯಾವುದೇ ಕಾರಣವಿಲ್ಲ. <br /> <br /> ಶೀಘ್ರದಲ್ಲಿಯೇ ಕಾರ್ಖಾನೆ ಸ್ಥಾಪನೆ ಬಗ್ಗೆ ಟಾಟಾ ಕಂಪೆನಿ ಅಧಿಕೃತ ಘೋಷಣೆ ಮಾಡಲಿದೆ. ತುಂಗಾ ಮೇಲ್ದಂಡೆ ಯೋಜನೆ ಕಾಮಗಾರಿ ಈಗಾಗಲೇ 202 ಕಿ.ಮೀ.ವರೆಗೆ ಬಂದಿದ್ದು, ಈ ವರ್ಷ ಹಾವೇರಿ ತಾಲ್ಲೂಕಿನ ಗಡಿವರೆಗೆ ನೀರು ಹರಿಯಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಬೆಳಗಾವಿಯಲ್ಲಿ ನಿರ್ಮಿಸಲಾದ ಸುವರ್ಣಸೌಧ ಕಟ್ಟಡದ ಉದ್ಘಾಟನೆಗಾಗಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಆಹ್ವಾನಿಸಲು ಆ.16 ರಂದು ಗುರುವಾರ ಮುಖ್ಯಮಂತ್ರಿಗಳು ದೆಹಲಿಗೆ ತೆರಳಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸಿ.ಎಂ.ಉದಾಸಿ ತಿಳಿಸಿದರು.<br /> <br /> 66ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಹಾಗೂ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಸಹ ಮುಖ್ಯಮಂತ್ರಿಗಳ ಜತೆ ದೆಹಲಿಗೆ ತೆರಳುತ್ತಿರುವುದಾಗಿ ಹೇಳಿದರು. <br /> <br /> ಸುವರ್ಣಸೌಧವನ್ನು ಸೆಪ್ಟಂಬರ್ನಲ್ಲಿ ಉದ್ಘಾಟಿಸುವ ಚಿಂತನೆ ನಡೆದಿದ್ದು, ಇದಕ್ಕೆ ರಾಷ್ಟ್ರಪತಿಗಳಿಗೆ ಆಹ್ವಾನ ನೀಡುವುದರ ಜತೆಗೆ ಅವರು ಆ ತಿಂಗಳು ಯಾವ ದಿನಾಂಕ ನೀಡುತ್ತಾರೆಯೋ ಅದೇ ದಿನದಂದು ನೂತನ ಕಟ್ಟಡ ಉದ್ಘಾಟಿಸಲಾಗುವುದು ಎಂದು ಹೇಳಿದರು.<br /> <br /> <strong>ಟಾಟಾ ಮೆಟಾಲಿಕ್ ಪ್ರಗತಿಯಲ್ಲಿ:</strong> ಹಾವೇರಿ ತಾಲ್ಲೂಕಿನ ಅಗಡಿ ಬಳಿ ನಿರ್ಮಿಸಲು ಉದ್ದೇಶಿಸಿರುವ ಟಾಟಾ ಮೆಟಾಲಿಕ್ ಉಕ್ಕು ಕಾರ್ಖಾನೆ ಸ್ಥಾಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ತಿಂಗಳು 3 ರಂದು ಟಾಟಾ ಕಂಪೆನಿ ಹಿರಿಯ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ . ಕೇಂದ್ರ ಸರ್ಕಾರ ಅದಿರು ಗಣಿಗಾರಿಕೆ ನಡೆಸುವುದಕ್ಕೆ ನಿಷೇಧ ಹೇರಿದ್ದರಿಂದ ಕಾರ್ಖಾನೆ ಸ್ಥಾಪನೆ ವಿಳಂಬವಾಗಿದೆ ಹೊರತೂ ಬೇರೆ ಯಾವುದೇ ಕಾರಣವಿಲ್ಲ. <br /> <br /> ಶೀಘ್ರದಲ್ಲಿಯೇ ಕಾರ್ಖಾನೆ ಸ್ಥಾಪನೆ ಬಗ್ಗೆ ಟಾಟಾ ಕಂಪೆನಿ ಅಧಿಕೃತ ಘೋಷಣೆ ಮಾಡಲಿದೆ. ತುಂಗಾ ಮೇಲ್ದಂಡೆ ಯೋಜನೆ ಕಾಮಗಾರಿ ಈಗಾಗಲೇ 202 ಕಿ.ಮೀ.ವರೆಗೆ ಬಂದಿದ್ದು, ಈ ವರ್ಷ ಹಾವೇರಿ ತಾಲ್ಲೂಕಿನ ಗಡಿವರೆಗೆ ನೀರು ಹರಿಯಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>