<p><strong>ಸಿಂದಗಿ (ವಿಜಾಪುರ ಜಿಲ್ಲೆ): </strong>ಸೂಫಿಗಳು ಮತ್ತು ಶರಣರಲ್ಲಿ ಸಾಮ್ಯತೆ ಇದೆ. ಇಂಥ ಮಹತ್ವದ ವಿಚಾರ ಸಂಕಿರಣಗಳ ಸಾರವನ್ನು ಪುಸ್ತಕ ರೂಪದಲ್ಲಿ ಹೊರ ತರಬೇಕು ಎಂದು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಪಲತಿ ಪ್ರೊ. ಬಿ.ಆರ್. ಅನಂತನ್ ಸಲಹೆ ನೀಡಿದರು.<br /> <br /> ತಾಲ್ಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಸಿ.ಎಂ. ಮನಗೂಳಿ ಕಲಾ ಮಹಾವಿದ್ಯಾಲಯವು ಇತಿಹಾಸ ವಿಭಾಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಗುರುವಾರ ಏರ್ಪಡಿಸಿದ್ದ ಯು.ಜಿ.ಸಿ ಪ್ರಾಯೋಜಕತ್ವದ ರಾಷ್ಟ್ರಮಟ್ಟದ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ನಮ್ಮ ನಾಡಿನಲ್ಲಿ 10 ಸಾವಿರ ಸೂಫಿ ಸಂತರುಗಳಾಗಿ ಹೋಗಿದ್ದಾರೆ. ದೇಶದಲ್ಲಿ 15 ಕೋಟಿ ಮುಸ್ಲಿಮರಿದ್ದಾರೆ, ಅವರು ಭಾರತೀಯ ಸಂಸ್ಕೃತಿ, ಕಲೆ, ಸಂಗೀತ, ಶಿಕ್ಷಣ ಕ್ಷೇತ್ರಕ್ಕೆ ಅಗಾಧ ಕೊಡುಗೆ ಸಲ್ಲಿಸಿದ್ದಾರೆ. ಹೀಗಾಗಿ ಅವರ ಬಗ್ಗೆ ಇರಬಹುದಾದ ಪೂರ್ವಾಗ್ರಹ ಪೀಡಿತ ಮನೋಭಾವ ದೂರಾಗಬೇಕಿದೆ. <br /> <br /> ವಿಜಾಪುರದ ಎರಡನೇ ಆದಿಲ್ಶಾಹಿ ಇಬ್ರಾಹಿಂ `ಜಗದ್ಗುರು~ ಎನಿಸಿಕೊಂಡಿದ್ದು, ಇವರ ಆಸ್ಥಾನದಲ್ಲಿ 300 ಹಿಂದೂ ಪಂಡಿತರಿದ್ದರು ಎಂದು ಸಾನ್ನಿಧ್ಯ ವಹಿಸಿದ್ದ ಗದಗ ತೋಂಟದಾರ್ಯ ಮಠದ ಡಾ. ಸಿದ್ಧಲಿಂಗ ಶ್ರೀಗಳು ಹೇಳಿದರು. <br /> <br /> ಮಾಜಿ ಸಚಿವ ಎಂ.ಸಿ.ಮನಗೂಳಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ಸೋಮಶೇಖರ ವಾಲಿ ಹಾಜರಿದ್ದರು. ಪ್ರಾಚಾರ್ಯ ಕೆ.ಎಸ್. ಪಾಟೀಲ ಸ್ವಾಗತಿಸಿದರು. ಪ್ರೊ.ಬಿ.ಎನ್.ಪಾಟೀಲ ನಿರೂಪಿಸಿದರು. ವಿಚಾರ ಸಂಕಿರಣದ ಸಂಘಟನಾ ಕಾರ್ಯದರ್ಶಿ ಪ್ರೊ.ಅರವಿಂದ ಮನಗೂಳಿ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ (ವಿಜಾಪುರ ಜಿಲ್ಲೆ): </strong>ಸೂಫಿಗಳು ಮತ್ತು ಶರಣರಲ್ಲಿ ಸಾಮ್ಯತೆ ಇದೆ. ಇಂಥ ಮಹತ್ವದ ವಿಚಾರ ಸಂಕಿರಣಗಳ ಸಾರವನ್ನು ಪುಸ್ತಕ ರೂಪದಲ್ಲಿ ಹೊರ ತರಬೇಕು ಎಂದು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಪಲತಿ ಪ್ರೊ. ಬಿ.ಆರ್. ಅನಂತನ್ ಸಲಹೆ ನೀಡಿದರು.<br /> <br /> ತಾಲ್ಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಸಿ.ಎಂ. ಮನಗೂಳಿ ಕಲಾ ಮಹಾವಿದ್ಯಾಲಯವು ಇತಿಹಾಸ ವಿಭಾಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಗುರುವಾರ ಏರ್ಪಡಿಸಿದ್ದ ಯು.ಜಿ.ಸಿ ಪ್ರಾಯೋಜಕತ್ವದ ರಾಷ್ಟ್ರಮಟ್ಟದ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ನಮ್ಮ ನಾಡಿನಲ್ಲಿ 10 ಸಾವಿರ ಸೂಫಿ ಸಂತರುಗಳಾಗಿ ಹೋಗಿದ್ದಾರೆ. ದೇಶದಲ್ಲಿ 15 ಕೋಟಿ ಮುಸ್ಲಿಮರಿದ್ದಾರೆ, ಅವರು ಭಾರತೀಯ ಸಂಸ್ಕೃತಿ, ಕಲೆ, ಸಂಗೀತ, ಶಿಕ್ಷಣ ಕ್ಷೇತ್ರಕ್ಕೆ ಅಗಾಧ ಕೊಡುಗೆ ಸಲ್ಲಿಸಿದ್ದಾರೆ. ಹೀಗಾಗಿ ಅವರ ಬಗ್ಗೆ ಇರಬಹುದಾದ ಪೂರ್ವಾಗ್ರಹ ಪೀಡಿತ ಮನೋಭಾವ ದೂರಾಗಬೇಕಿದೆ. <br /> <br /> ವಿಜಾಪುರದ ಎರಡನೇ ಆದಿಲ್ಶಾಹಿ ಇಬ್ರಾಹಿಂ `ಜಗದ್ಗುರು~ ಎನಿಸಿಕೊಂಡಿದ್ದು, ಇವರ ಆಸ್ಥಾನದಲ್ಲಿ 300 ಹಿಂದೂ ಪಂಡಿತರಿದ್ದರು ಎಂದು ಸಾನ್ನಿಧ್ಯ ವಹಿಸಿದ್ದ ಗದಗ ತೋಂಟದಾರ್ಯ ಮಠದ ಡಾ. ಸಿದ್ಧಲಿಂಗ ಶ್ರೀಗಳು ಹೇಳಿದರು. <br /> <br /> ಮಾಜಿ ಸಚಿವ ಎಂ.ಸಿ.ಮನಗೂಳಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ಸೋಮಶೇಖರ ವಾಲಿ ಹಾಜರಿದ್ದರು. ಪ್ರಾಚಾರ್ಯ ಕೆ.ಎಸ್. ಪಾಟೀಲ ಸ್ವಾಗತಿಸಿದರು. ಪ್ರೊ.ಬಿ.ಎನ್.ಪಾಟೀಲ ನಿರೂಪಿಸಿದರು. ವಿಚಾರ ಸಂಕಿರಣದ ಸಂಘಟನಾ ಕಾರ್ಯದರ್ಶಿ ಪ್ರೊ.ಅರವಿಂದ ಮನಗೂಳಿ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>