<p>ತುಮಕೂರು: ರಾಜ್ಯದಲ್ಲಿ 2016ರ ವೇಳೆಗೆ ಸೌರಶಕ್ತಿಯಿಂದ 200 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು. ಪ್ರಸ್ತುತ ಸೌರಶಕ್ತಿಯಿಂದ 80 ಮೆಗಾವಾಟ್ ವಿದ್ಯುತ್ ಉತ್ಪಾದನೆಗೆ ಟೆಂಡರ್ ಕರೆಯಲಾಗಿದೆ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಹೇಳಿದರು.<br /> <br /> ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಸೋಲಾರ್ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಸೌರಶಕ್ತಿ ಭವಿಷ್ಯದ ಇಂಧನ ಮೂಲ ಎಂದು ವ್ಯಾಖ್ಯಾನಿಸಿದರು.<br /> <br /> ಬೆಂಗಳೂರಿನಲ್ಲಿ ಹೊಸದಾಗಿ ಮನೆ ಕಟ್ಟಿಸುವವರು ಸೌರಶಕ್ತಿ ಅಳವಡಿಸುವುದು ಕಡ್ಡಾಯ. ಈ ಬಗ್ಗೆ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಸೌರಶಕ್ತಿ ವಿವಿಧ ಬಳಕೆ ಪರಿಚಯಿಸಲು ಬೆಂಗಳೂರು ಇಂದಿರಾಗಾಂಧಿ ಸಂಗೀತ ಕಾರಂಜಿಯಲ್ಲಿ ಶಾಶ್ವತ ಮಳಿಗೆ ತೆರೆಯಲಾಗಿದೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಶೀಘ್ರ ಸೌರಶಕ್ತಿ ಮೇಳ ಆಯೋಜಿಸಲಾಗುವುದೆಂದರು.<br /> <br /> ಬೇಸಿಗೆಯಲ್ಲಿ ವಿದ್ಯುತ್ ಕೊರತೆ ನೀಗಿಸಲು ಸಕ್ಕರೆ ಕಾರ್ಖಾನೆಗಳಿಂದ 400 ಮೆಗಾವಾಟ್ ವಿದ್ಯುತ್ ಖರೀದಿಸಲಾಗುವುದು. ಫೆ. 1ರಿಂದಲೇ ವಿದ್ಯುತ್ ಖರೀದಿ ಪ್ರಾರಂಭವಾಗಲಿದೆ. ಪ್ರಸ್ತುತ ಖಾಸಗಿ ಕಂಪೆನಿಗಳಿಂದ ಪ್ರತಿ ಯೂನಿಟ್ಗೆ ರೂ. 5.30ರಂತೆ ಖರೀದಿಸಲಾಗುತ್ತಿದೆ. ಸಕ್ಕರೆ ಕಾರ್ಖಾನೆಗಳಿಗೂ ಇದೆ ದರ ನೀಡಲಾಗುವುದು ಎಂದು ಹೇಳಿದರು.<br /> <br /> ರಾಯಚೂರು ಶಾಖೋತ್ಪನ್ನ ವಿದ್ಯುತ್ ಘಟಕದ 8 ಸ್ಥಾವರಗಳ ಪೈಕಿ ಕೇವಲ 6 ಕಾರ್ಯನಿರ್ವಹಿಸುತ್ತಿವೆ.ಕಲ್ಲಿದ್ದಲು ಸಮಸ್ಯೆಯಿಂದ 2 ಘಟಕಗಳು ಸ್ಥಗಿತಗೊಂಡಿವೆ. ಸ್ಥಾವರಗಳ ಸಾಮರ್ಥ್ಯದ ಶೇ. 60ರಷ್ಟು ಕಲ್ಲಿದ್ದಲನ್ನು ಕೇಂದ್ರ ಪೂರೈಸುತ್ತಿದೆ. ಸಮರ್ಪಕ ಕಲ್ಲಿದ್ದಲು ಪೂರೈಕೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಹೋರಾಟ ಅನಿವಾರ್ಯವಾಗಬಹುದು ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ರಾಜ್ಯದಲ್ಲಿ 2016ರ ವೇಳೆಗೆ ಸೌರಶಕ್ತಿಯಿಂದ 200 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು. ಪ್ರಸ್ತುತ ಸೌರಶಕ್ತಿಯಿಂದ 80 ಮೆಗಾವಾಟ್ ವಿದ್ಯುತ್ ಉತ್ಪಾದನೆಗೆ ಟೆಂಡರ್ ಕರೆಯಲಾಗಿದೆ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಹೇಳಿದರು.<br /> <br /> ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಸೋಲಾರ್ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಸೌರಶಕ್ತಿ ಭವಿಷ್ಯದ ಇಂಧನ ಮೂಲ ಎಂದು ವ್ಯಾಖ್ಯಾನಿಸಿದರು.<br /> <br /> ಬೆಂಗಳೂರಿನಲ್ಲಿ ಹೊಸದಾಗಿ ಮನೆ ಕಟ್ಟಿಸುವವರು ಸೌರಶಕ್ತಿ ಅಳವಡಿಸುವುದು ಕಡ್ಡಾಯ. ಈ ಬಗ್ಗೆ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಸೌರಶಕ್ತಿ ವಿವಿಧ ಬಳಕೆ ಪರಿಚಯಿಸಲು ಬೆಂಗಳೂರು ಇಂದಿರಾಗಾಂಧಿ ಸಂಗೀತ ಕಾರಂಜಿಯಲ್ಲಿ ಶಾಶ್ವತ ಮಳಿಗೆ ತೆರೆಯಲಾಗಿದೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಶೀಘ್ರ ಸೌರಶಕ್ತಿ ಮೇಳ ಆಯೋಜಿಸಲಾಗುವುದೆಂದರು.<br /> <br /> ಬೇಸಿಗೆಯಲ್ಲಿ ವಿದ್ಯುತ್ ಕೊರತೆ ನೀಗಿಸಲು ಸಕ್ಕರೆ ಕಾರ್ಖಾನೆಗಳಿಂದ 400 ಮೆಗಾವಾಟ್ ವಿದ್ಯುತ್ ಖರೀದಿಸಲಾಗುವುದು. ಫೆ. 1ರಿಂದಲೇ ವಿದ್ಯುತ್ ಖರೀದಿ ಪ್ರಾರಂಭವಾಗಲಿದೆ. ಪ್ರಸ್ತುತ ಖಾಸಗಿ ಕಂಪೆನಿಗಳಿಂದ ಪ್ರತಿ ಯೂನಿಟ್ಗೆ ರೂ. 5.30ರಂತೆ ಖರೀದಿಸಲಾಗುತ್ತಿದೆ. ಸಕ್ಕರೆ ಕಾರ್ಖಾನೆಗಳಿಗೂ ಇದೆ ದರ ನೀಡಲಾಗುವುದು ಎಂದು ಹೇಳಿದರು.<br /> <br /> ರಾಯಚೂರು ಶಾಖೋತ್ಪನ್ನ ವಿದ್ಯುತ್ ಘಟಕದ 8 ಸ್ಥಾವರಗಳ ಪೈಕಿ ಕೇವಲ 6 ಕಾರ್ಯನಿರ್ವಹಿಸುತ್ತಿವೆ.ಕಲ್ಲಿದ್ದಲು ಸಮಸ್ಯೆಯಿಂದ 2 ಘಟಕಗಳು ಸ್ಥಗಿತಗೊಂಡಿವೆ. ಸ್ಥಾವರಗಳ ಸಾಮರ್ಥ್ಯದ ಶೇ. 60ರಷ್ಟು ಕಲ್ಲಿದ್ದಲನ್ನು ಕೇಂದ್ರ ಪೂರೈಸುತ್ತಿದೆ. ಸಮರ್ಪಕ ಕಲ್ಲಿದ್ದಲು ಪೂರೈಕೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಹೋರಾಟ ಅನಿವಾರ್ಯವಾಗಬಹುದು ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>