<p>ಚಿಕ್ಕಬಳ್ಳಾಪುರ: ಸ್ವಾರ್ಥ, ಅಸೂಯೆ ಮನೋಭಾವನೆ ತೊರೆದು ದಾನ, ನೆರವು ನೀಡುವ ಗುಣವನ್ನು ರೂಢಿಸಿಕೊಳ್ಳಬೇಕು. ಜಾತಿ, ಧರ್ಮಗಳಿಗೆ ಮಾತ್ರವೇ ಸೀಮಿತವಾಗಿ ಕಟ್ಟುಬೀಳುವುದರ ಬದಲು ವಿಶಾಲವಾದ ದೃಷ್ಟಿಕೋನ ಹೊಂದಬೇಕು ಎಂದು ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಡಾ.ಎಂ.ಆರ್. ಜಯರಾಮ್ ಸಲಹೆ ಮಾಡಿದರು.<br /> <br /> ಶನಿವಾರ ನಗರದ ಹೊಸ ಬಸ್ ನಿಲ್ದಾಣದ ಬಳಿಯಿರುವ ಯೋಗಿ ನಾರೇಯಣ ಮಠದ ಆವರಣದಲ್ಲಿ ನಡೆದ ನಾರೇಯಣೋತ್ಸವ, ಅಖಂಡ ಸಂಕೀರ್ತನೆ ಕಾರ್ಯಕ್ರಮದಲ್ಲಿ ಮಾತನಾಡಿ, `ಸಮಾಜಕ್ಕೆ ಉಪಯುಕ್ತವಾಗುವ ಕಾರ್ಯಗಳನ್ನು ಕೈಗೊಂಡಾಗ ಮಾತ್ರ ಸ್ವಾರ್ಥ, ದ್ವೇಷ, ಅಸೂಯೆ ನಿವಾರಿಸಲು ಸಾಧ್ಯವಾಗುತ್ತದೆ~ ಎಂದರು.<br /> ದಾನ ಮಾಡಿ, ನೆರವು ನೀಡಿ ಪ್ರಚಾರ ಪಡೆದುಕೊಳ್ಳುವುದರ ಬದಲು ಪ್ರಚಾರ ಬಯಸದೆ ಮೌನವಾಗಿ ಕಾಯಕ ಮಾಡಬೇಕು ಎಂದು ಅವರು ಹೇಳಿದರು.<br /> <br /> ಸಂಸದ ಪಿ.ಸಿ.ಮೋಹನ್ ಮಾತನಾಡಿ, ಬಲಿಜ ಸಮುದಾಯ ಹಿಂದುಳಿದಿದ್ದು, ಸಮಾಜ ಮುಖ್ಯವಾಹಿನಿಯಲ್ಲಿ ಬರಲು ಶ್ರಮಿಸುತ್ತಿದೆ. ತಾವು ಬೆಳೆಯಬೇಕು, ಇನ್ನೊಬ್ಬರನ್ನು ಬೆಳೆಸುವ ಮನೋಭಾವ ಹೊಂದುವಂತೆ ತಿಳಿಸಿದರು.<br /> <br /> ಶಾಸಕ ಎನ್.ಸಂಪಂಗಿ, ಯೋಗಿ ನಾರೇಯಣ ಟ್ರಸ್ಟ್ ಕಾರ್ಯದರ್ಶಿ ಎನ್.ವೆಂಕಟೇಶಯ್ಯ, ನಗರಸಭೆ ಸದಸ್ಯ ಬಿ.ಎ.ಲೋಕೇಶ್ಕುಮಾರ್, ಕೆ.ವಿ.ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ವಿ.ನವೀನ್ ಕಿರಣ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಚಿಕ್ಕನರಸಿಂಹಯ್ಯ, ತಾಲ್ಲೂಕು ಬಲಿಜ ಸಂಘದ ಅಧ್ಯಕ್ಷ ಭದ್ರಾಚಲಂ, ಗೌರವಾಧ್ಯಕ್ಷ ಕಠಾರಿ ನರಸಪ್ಪ ಮತ್ತಿತರರು ಭಾಗವಹಿಸಿದ್ದರು.<br /> <br /> ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ವಸತಿ ನಿಲಯ, ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಯೋಗಿನಾರೇಯಣ ರಸ್ತೆ ನಾಮಫಲಕವನ್ನು ಅನಾವರಣ ಮಾಡಲಾಯಿತು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಸ್ವಾರ್ಥ, ಅಸೂಯೆ ಮನೋಭಾವನೆ ತೊರೆದು ದಾನ, ನೆರವು ನೀಡುವ ಗುಣವನ್ನು ರೂಢಿಸಿಕೊಳ್ಳಬೇಕು. ಜಾತಿ, ಧರ್ಮಗಳಿಗೆ ಮಾತ್ರವೇ ಸೀಮಿತವಾಗಿ ಕಟ್ಟುಬೀಳುವುದರ ಬದಲು ವಿಶಾಲವಾದ ದೃಷ್ಟಿಕೋನ ಹೊಂದಬೇಕು ಎಂದು ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಡಾ.ಎಂ.ಆರ್. ಜಯರಾಮ್ ಸಲಹೆ ಮಾಡಿದರು.<br /> <br /> ಶನಿವಾರ ನಗರದ ಹೊಸ ಬಸ್ ನಿಲ್ದಾಣದ ಬಳಿಯಿರುವ ಯೋಗಿ ನಾರೇಯಣ ಮಠದ ಆವರಣದಲ್ಲಿ ನಡೆದ ನಾರೇಯಣೋತ್ಸವ, ಅಖಂಡ ಸಂಕೀರ್ತನೆ ಕಾರ್ಯಕ್ರಮದಲ್ಲಿ ಮಾತನಾಡಿ, `ಸಮಾಜಕ್ಕೆ ಉಪಯುಕ್ತವಾಗುವ ಕಾರ್ಯಗಳನ್ನು ಕೈಗೊಂಡಾಗ ಮಾತ್ರ ಸ್ವಾರ್ಥ, ದ್ವೇಷ, ಅಸೂಯೆ ನಿವಾರಿಸಲು ಸಾಧ್ಯವಾಗುತ್ತದೆ~ ಎಂದರು.<br /> ದಾನ ಮಾಡಿ, ನೆರವು ನೀಡಿ ಪ್ರಚಾರ ಪಡೆದುಕೊಳ್ಳುವುದರ ಬದಲು ಪ್ರಚಾರ ಬಯಸದೆ ಮೌನವಾಗಿ ಕಾಯಕ ಮಾಡಬೇಕು ಎಂದು ಅವರು ಹೇಳಿದರು.<br /> <br /> ಸಂಸದ ಪಿ.ಸಿ.ಮೋಹನ್ ಮಾತನಾಡಿ, ಬಲಿಜ ಸಮುದಾಯ ಹಿಂದುಳಿದಿದ್ದು, ಸಮಾಜ ಮುಖ್ಯವಾಹಿನಿಯಲ್ಲಿ ಬರಲು ಶ್ರಮಿಸುತ್ತಿದೆ. ತಾವು ಬೆಳೆಯಬೇಕು, ಇನ್ನೊಬ್ಬರನ್ನು ಬೆಳೆಸುವ ಮನೋಭಾವ ಹೊಂದುವಂತೆ ತಿಳಿಸಿದರು.<br /> <br /> ಶಾಸಕ ಎನ್.ಸಂಪಂಗಿ, ಯೋಗಿ ನಾರೇಯಣ ಟ್ರಸ್ಟ್ ಕಾರ್ಯದರ್ಶಿ ಎನ್.ವೆಂಕಟೇಶಯ್ಯ, ನಗರಸಭೆ ಸದಸ್ಯ ಬಿ.ಎ.ಲೋಕೇಶ್ಕುಮಾರ್, ಕೆ.ವಿ.ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ವಿ.ನವೀನ್ ಕಿರಣ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಚಿಕ್ಕನರಸಿಂಹಯ್ಯ, ತಾಲ್ಲೂಕು ಬಲಿಜ ಸಂಘದ ಅಧ್ಯಕ್ಷ ಭದ್ರಾಚಲಂ, ಗೌರವಾಧ್ಯಕ್ಷ ಕಠಾರಿ ನರಸಪ್ಪ ಮತ್ತಿತರರು ಭಾಗವಹಿಸಿದ್ದರು.<br /> <br /> ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ವಸತಿ ನಿಲಯ, ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಯೋಗಿನಾರೇಯಣ ರಸ್ತೆ ನಾಮಫಲಕವನ್ನು ಅನಾವರಣ ಮಾಡಲಾಯಿತು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>