ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ವಸೂಲಿ: ಸಬ್‌ಇನ್ಸ್‌ಪೆಕ್ಟರ್ ಸೆರೆ

Last Updated 29 ಆಗಸ್ಟ್ 2011, 19:30 IST
ಅಕ್ಷರ ಗಾತ್ರ

ಕುಣಿಗಲ್: ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಎಂದು ಸುಳ್ಳು ಹೇಳಿ ವ್ಯಾಪಾರಿಯನ್ನು ಬೆದರಿಸಿ ಹಣ ವಸೂಲಿ ಮಾಡಿದ್ದ ಸಬ್‌ಇನ್ಸ್‌ಪೆಕ್ಟರ್ ಬಿ.ನಾರಾಯಣ್ ಎಂಬುವರನ್ನು ಬಂಧಿಸಿರುವ ಘಟನೆ ಭಾನುವಾರ ರಾತ್ರಿ ತಾಲ್ಲೂಕಿನ ಬೋರಲಿಂಗನಪಾಳ್ಯ ಗ್ರಾಮದಲ್ಲಿ ನಡೆದಿದೆ.

ನಾರಾಯಣ್ ತಾಲ್ಲೂಕಿನ ಗುನ್ನಾಗರೆ ಗ್ರಾಮದ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ವಿಐಪಿ ಭದ್ರತಾ ಪಡೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈಚೆಗೆ ತನ್ನ ಸ್ನೇಹಿತರೊಂದಿಗೆ ಸ್ವಗ್ರಾಮಕ್ಕೆ ಬಂದು ಸಮೀಪದ ಬೋರಲಿಂಗನಪಾಳ್ಯದ ಮದ್ಯದ ಅಂಗಡಿಗೆ ಹೋಗಿದ್ದರು. ಅಲ್ಲಿ ಮಾಗಡಿ ಸುನಿಲ್ ಎಂಬುವವರು ಗಂಧದಕಡ್ಡಿ ಸಗಟು ವ್ಯಾಪಾರ ಮಾಡುತ್ತಿದ್ದ ಸಮಯದಲ್ಲಿ ತಾವು ವಾಣಿಜ್ಯ ತೆರಿಗೆ ಅಧಿಕಾರಿ ಎಂದು ಹೇಳಿಕೊಂಡು ವ್ಯಾಪಾರ ಮಾಡಲು ತಂದಿರುವ ಪದಾರ್ಥಗಳ ದಾಖಲೆ ನೀಡುವಂತೆ ಒತ್ತಾಯಿಸಿದರು.
 
ಅನುಮಾನಗೊಂಡ ವ್ಯಾಪಾರಿ ಗುರುತಿನ ಪತ್ರ ತೋರಿಸುವಂತೆ ಕೇಳಿದಾಗ ಪೊಲೀಸ್ ಇಲಾಖೆ ಗುರುತಿನ ಪತ್ರವನ್ನೆ ತೋರಿಸಿ ರೂ 15 ಸಾವಿರ ನೀಡುವಂತೆ ಬೆದರಿಸಿದ್ದಾರೆ. ಕೊನೆಗೆ ಬಲವಂತವಾಗಿ ಆತನ ಬಳಿ ಇದ್ದ ಒಂದು ಸಾವಿರ ಪಡೆದು, ಹೆಚ್ಚಿನ ಹಣ ತರುವಂತೆ ದಬಾಯಿಸಿದ್ದರು.

ವ್ಯಾಪಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪಿಎಸ್‌ಐ ಚನ್ನಯ್ಯ ಹಿರೇಮಠ್ ಪ್ರಕರಣ ದಾಖಲಿಸಿ ಆರೋಪಿ ಬಿ.ನಾರಾಯಣ್‌ನನ್ನು ಗುನ್ನಾಗರೆಯಲ್ಲಿ ಬಂಧಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT