<p>ಅರಕಲಗೂಡು: ಗೊರೂರು ಹೇಮಾವತಿ ನದಿಗೆ ನಿರ್ಮಿಸಿರುವ ಸೇತುವೆ ಶಿಥಿಲಗೊಂಡಿದ್ದು ಬದಲಿ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಸೋಮವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.<br /> <br /> ಗೊರೂರು ಸೇತುವೆಯ ಮೇಲೆ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನಾಕಾರರು ಧರಣಿ ಕುಳಿತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸುಮಾರು ಎರಡು ಗಂಟೆ ಕಾಲ ಪ್ರತಿಭಟನೆ ಮುಂದುವರೆದ ಕಾರಣ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು.<br /> <br /> 100 ವರ್ಷ ಹಿಂದೆ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಈ ಸೇತುವೆ ಶಿಥಿಲಗೊಂಡು ಕುಸಿಯುವ ಸ್ಥಿತಿಯಲ್ಲಿದೆ. ಪ್ರತಿನಿತ್ಯ ನೂರಾರು ವಾಹನಗಳು ಇದೇ ಸೇತುವೆ ಮೇಲೆ ಸಂಚರಿಸುತ್ತಿದ್ದು ಯಾವಾಗ ಏನು ಅವಘಡ ಸಂಭವಿಸುತ್ತದೊ ಎಂಬ ಭೀತಿ ಉಂಟಾಗಿದೆ. ಈ ಕುರಿತು ಹಲವಾರು ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿ ಜಿಲ್ಲಾ ಆಡಳಿತದ ಗಮನಕ್ಕೂ ತಂದಿವೆ. ಆದರೂ ಹೊಸ ಸೇತುವೆ ನಿರ್ಮಾಣಕ್ಕೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.<br /> <br /> ಅರಕಲಗೂಡು ತಾಲ್ಲೂಕು ಅಣ್ಣಿಗನಹಳ್ಳಿ ಕಡವಿನಲ್ಲಿ ಹಾಸನ ಅರಕಲಗೂಡು ನಡುವೆ ಹೇಮಾವತಿ ನದಿಗೆ ಸಂಪರ್ಕ ಸೇತುವೆ ನಿರ್ಮಿಸುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು. ಇಲ್ಲಿ ಸೇತುವೆ ನಿರ್ಮಾಣಗೊಂಡರೆ ಸುಮಾರು 20 ಕ್ಕೂ ಹೆಚ್ಚು ಗ್ರಾಮಗಳ ಜನತೆಗೆ ಅನುಕೂಲವಾಗಲಿದೆ ಈ ಎರಡೂ ಬೇಡಿಕೆಗಳ ಬಗ್ಗೆ ತಿಂಗಳಿನಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು. <br /> <br /> ರೈತ ಸಂಘದ ಮುಖಂಡರಾದ ಲಕ್ಷ್ಮಿನಾರಾಯಣ, ಹೊ.ತಿ. ಹುಚ್ಚಪ್ಪ, ನಂಜುಂಡೇಗೌಡ, ಪರಮೇಶ್ವರಪ್ಪ ಇತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಕಲಗೂಡು: ಗೊರೂರು ಹೇಮಾವತಿ ನದಿಗೆ ನಿರ್ಮಿಸಿರುವ ಸೇತುವೆ ಶಿಥಿಲಗೊಂಡಿದ್ದು ಬದಲಿ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಸೋಮವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.<br /> <br /> ಗೊರೂರು ಸೇತುವೆಯ ಮೇಲೆ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನಾಕಾರರು ಧರಣಿ ಕುಳಿತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸುಮಾರು ಎರಡು ಗಂಟೆ ಕಾಲ ಪ್ರತಿಭಟನೆ ಮುಂದುವರೆದ ಕಾರಣ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು.<br /> <br /> 100 ವರ್ಷ ಹಿಂದೆ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಈ ಸೇತುವೆ ಶಿಥಿಲಗೊಂಡು ಕುಸಿಯುವ ಸ್ಥಿತಿಯಲ್ಲಿದೆ. ಪ್ರತಿನಿತ್ಯ ನೂರಾರು ವಾಹನಗಳು ಇದೇ ಸೇತುವೆ ಮೇಲೆ ಸಂಚರಿಸುತ್ತಿದ್ದು ಯಾವಾಗ ಏನು ಅವಘಡ ಸಂಭವಿಸುತ್ತದೊ ಎಂಬ ಭೀತಿ ಉಂಟಾಗಿದೆ. ಈ ಕುರಿತು ಹಲವಾರು ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿ ಜಿಲ್ಲಾ ಆಡಳಿತದ ಗಮನಕ್ಕೂ ತಂದಿವೆ. ಆದರೂ ಹೊಸ ಸೇತುವೆ ನಿರ್ಮಾಣಕ್ಕೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.<br /> <br /> ಅರಕಲಗೂಡು ತಾಲ್ಲೂಕು ಅಣ್ಣಿಗನಹಳ್ಳಿ ಕಡವಿನಲ್ಲಿ ಹಾಸನ ಅರಕಲಗೂಡು ನಡುವೆ ಹೇಮಾವತಿ ನದಿಗೆ ಸಂಪರ್ಕ ಸೇತುವೆ ನಿರ್ಮಿಸುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು. ಇಲ್ಲಿ ಸೇತುವೆ ನಿರ್ಮಾಣಗೊಂಡರೆ ಸುಮಾರು 20 ಕ್ಕೂ ಹೆಚ್ಚು ಗ್ರಾಮಗಳ ಜನತೆಗೆ ಅನುಕೂಲವಾಗಲಿದೆ ಈ ಎರಡೂ ಬೇಡಿಕೆಗಳ ಬಗ್ಗೆ ತಿಂಗಳಿನಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು. <br /> <br /> ರೈತ ಸಂಘದ ಮುಖಂಡರಾದ ಲಕ್ಷ್ಮಿನಾರಾಯಣ, ಹೊ.ತಿ. ಹುಚ್ಚಪ್ಪ, ನಂಜುಂಡೇಗೌಡ, ಪರಮೇಶ್ವರಪ್ಪ ಇತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>