<p><strong>ಬೆಂಗಳೂರು:</strong> ಕೌಟುಂಬಿಕ ವಿಷಯವಾಗಿ ಗುರುವಾರ ವಿಚಾರಣೆ ಹಾಜರಾಗಿದ್ದ ನಟ ದುನಿಯಾ ವಿಜಯ್ ಅವರು ಸಾರ್ವಜನಿಕರ ಹಾಗೂ ಕಾನೂನಿನ ವಿರುದ್ಧ ನಡೆದುಕೊಳ್ಳುವುದಿಲ್ಲ ಎಂದು ದಕ್ಷಿಣ ಭಾಗದ ಡಿಸಿಪಿ ಅಣ್ಣಾಮಲೈ ಅವರಿಗೆ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ.</p>.<p>ಕೌಟುಂಬಿಕ ಕಲಹದಿಂದ ಬೀದಿ ರಂಪಾಟದ ಹಿನ್ನೆಲೆಯಲ್ಲಿ ಗಿರಿನಗರ ಠಾಣೆಯಲ್ಲಿ ನಾಗರತ್ನ ಹಾಗೂ ದುನಿಯಾ ವಿಜಯ್ ವಿರುದ್ಧ ಐಪಿಸಿ ಸೆಕ್ಷನ್ 107ರಡಿ ಪ್ರಕರಣ ದಾಖಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ವಿಜಯ್ ದಂಪತಿಗೆ ಪೊಲೀಸರು ನೋಟಿಸ್ ನೀಡಿದ್ದರು.</p>.<p>ವಿಜಯ್ ಜೊತೆ ಆಗಮಿಸಿದ್ದ ಎರಡನೇ ಪತ್ನಿ ಕೀರ್ತಿಗೌಡ, ಪುತ್ರ, ತಂದೆ ಮತ್ತು ತಾಯಿ ಅವರ ಹೇಳಿಕೆಗಳನ್ನೂ ದಾಖಲಿಸಿಕೊಂಡರು. ವಿಜಯ್ ಮೊದಲ ಪತ್ನಿ ನಾಗರತ್ನ ಅವರು ವಿಚಾರಣೆಗೆ ಹಾಜರಾಗಿದ್ದರು. ಅಲ್ಲದೆ, ₹ 5 ಲಕ್ಷ ಭದ್ರತಾ ಠೇವಣಿ ಪಡೆದ ಡಿಸಿಪಿ, ಸಮಾಜ ಸ್ವಾಸ್ಥ್ಯ ಹಾಳು ಮಾಡಿದರೆ, ಕ್ರಮ ಕೈಗೊಳ್ಳಲಾಗುವುದು ಎಂದು ವಿಜಯ್ಗೆ ಎಚ್ಚರಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯ್, ಅಣ್ಣಾಮಲೈ ಅವರು ಪ್ರಾಮಾಣಿಕ ಅಧಿಕಾರಿ. ಅವರ ಬಗ್ಗೆ ತುಂಬಾ ಗೌರವವಿದೆ. ಅವರು ಹೇಳಿದ ರೀತಿ ನಡೆದುಕೊಳ್ಳುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೌಟುಂಬಿಕ ವಿಷಯವಾಗಿ ಗುರುವಾರ ವಿಚಾರಣೆ ಹಾಜರಾಗಿದ್ದ ನಟ ದುನಿಯಾ ವಿಜಯ್ ಅವರು ಸಾರ್ವಜನಿಕರ ಹಾಗೂ ಕಾನೂನಿನ ವಿರುದ್ಧ ನಡೆದುಕೊಳ್ಳುವುದಿಲ್ಲ ಎಂದು ದಕ್ಷಿಣ ಭಾಗದ ಡಿಸಿಪಿ ಅಣ್ಣಾಮಲೈ ಅವರಿಗೆ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ.</p>.<p>ಕೌಟುಂಬಿಕ ಕಲಹದಿಂದ ಬೀದಿ ರಂಪಾಟದ ಹಿನ್ನೆಲೆಯಲ್ಲಿ ಗಿರಿನಗರ ಠಾಣೆಯಲ್ಲಿ ನಾಗರತ್ನ ಹಾಗೂ ದುನಿಯಾ ವಿಜಯ್ ವಿರುದ್ಧ ಐಪಿಸಿ ಸೆಕ್ಷನ್ 107ರಡಿ ಪ್ರಕರಣ ದಾಖಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ವಿಜಯ್ ದಂಪತಿಗೆ ಪೊಲೀಸರು ನೋಟಿಸ್ ನೀಡಿದ್ದರು.</p>.<p>ವಿಜಯ್ ಜೊತೆ ಆಗಮಿಸಿದ್ದ ಎರಡನೇ ಪತ್ನಿ ಕೀರ್ತಿಗೌಡ, ಪುತ್ರ, ತಂದೆ ಮತ್ತು ತಾಯಿ ಅವರ ಹೇಳಿಕೆಗಳನ್ನೂ ದಾಖಲಿಸಿಕೊಂಡರು. ವಿಜಯ್ ಮೊದಲ ಪತ್ನಿ ನಾಗರತ್ನ ಅವರು ವಿಚಾರಣೆಗೆ ಹಾಜರಾಗಿದ್ದರು. ಅಲ್ಲದೆ, ₹ 5 ಲಕ್ಷ ಭದ್ರತಾ ಠೇವಣಿ ಪಡೆದ ಡಿಸಿಪಿ, ಸಮಾಜ ಸ್ವಾಸ್ಥ್ಯ ಹಾಳು ಮಾಡಿದರೆ, ಕ್ರಮ ಕೈಗೊಳ್ಳಲಾಗುವುದು ಎಂದು ವಿಜಯ್ಗೆ ಎಚ್ಚರಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯ್, ಅಣ್ಣಾಮಲೈ ಅವರು ಪ್ರಾಮಾಣಿಕ ಅಧಿಕಾರಿ. ಅವರ ಬಗ್ಗೆ ತುಂಬಾ ಗೌರವವಿದೆ. ಅವರು ಹೇಳಿದ ರೀತಿ ನಡೆದುಕೊಳ್ಳುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>