<p>ಅರಸೀಕೆರೆ: ನಗರದ ಇನ್ನರ್ ವೀಲ್ ಕ್ಲಬ್ ವತಿಯಿಂದ ಅಧ್ಯಕ್ಷೆ ರಂಜಿತಾ ನೇತೃತ್ವದಲ್ಲಿ ಪದಾಧಿಕಾರಿಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಮಿಕರ ಬಗ್ಗೆ ಕೇವಲ ಕಾರ್ಮಿಕ ದಿನಾಚರಣೆ ದಿನಕ್ಕೆ ಕಳಕಳಿ ಸೀಮಿತವಾಗಬಾರದು ಎಂಬ ಆಶಯದೊಂದಿಗೆ ಕಟ್ಟಡ ನಿರ್ಮಾಣ ಕಾರ್ಮಿಕರು ಕೆಲಸದಲ್ಲಿ ತೊಡಗಿರುವ ಸ್ಥಳಕ್ಕೆ ತೆರಳಿ ಮಧ್ಯಾಹ್ನದ ಉಪಾಹಾರವನ್ನು ನೀಡಿ, ಕಾರ್ಮಿಕರಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಆತ್ಮಸ್ಥೈರ್ಯ ತುಂಬಿದರು.</p>.<p>ಕಾರ್ಮಿಕರು ದುಶ್ಚಟಗಳಿಗೆ ದಾಸರಾಗಬಾರದು. ಇದರಿಂದ ಕುಟುಂಬದ ನೆಮ್ಮದಿ ಹಾಳಾಗುತ್ತದೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ತಿಳಿ ಹೇಳಿದರು.</p>.<p>ಇತ್ತೀಚಿಗೆ ಶಾಲಾ– ಕಾಲೇಜು ವಿದ್ಯಾರ್ಥಿಗಳು ಮಾದಕವಸ್ತುಗಳ ಬಳಕೆ ಮಾಡುತ್ತಿದ್ದು, ಆರೋಗ್ಯದ ಮೇಲೆ ಮತ್ತು ಓದಿನ ಮೇಲೆ ದುಷ್ಪರಿಣಾಮ ಆಗುತ್ತಿದ್ದು, ಈ ನಿಟ್ಟಿನಲ್ಲಿಯೂ ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲಾ– ಕಾಲೇಜುಗಳಿಗೆ ಜಾಗೃತಿ ಫಲಕವನ್ನು ಅಳವಡಿಸುವ ಕಾರ್ಯ ಮಾಡಲಾಯಿತು. ಅರಸೀಕೆರೆ ನಗರದ ಗ್ರಾಮ ದೇವತೆಗಳಾದ ಕರಿಯಮ್ಮ, ಮಲ್ಲಿಗೆಮ್ಮ ಜಾತ್ರಾ ಮಹೋತ್ಸವದಲ್ಲಿಯೂ ದೇವಾಲಯ ಆವರಣದಲ್ಲಿ ಭಕ್ತರು ಬಿಸಿಲಿನ ಬೇಗೆಯಿಂದ ದಣಿವಾರಿಸಿಕೊಳ್ಳಲು ಮಜ್ಜಿಗೆ, ಕೋಸಂಬರಿ ಹಾಗೂ ಬೀಸಣಿಗೆಗಳನ್ನು ವಿತರಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಕ್ಲಬ್ ಅಧ್ಯಕ್ಷೆ ರಂಜಿತಾ, ನಮ್ಮ ಕ್ಲಬ್ ಸಮಾಜಮುಖಿಯಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಪರಿಸರ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯುತ್ತಿವೆ ಎಂದರು.</p>.<p>ಕ್ಲಬ್ನ ಪದಾಧಿಕಾರಿಗಳಾದ ಲಕ್ಷ್ಮಿ , ಶೀಲಾ, ಓಂಕಾರಮ್ಮ, ನಾಗರತ್ನಮ್ಮ, ಸಂಧ್ಯಾ, ಶ್ವೇತಾ, ಶಕುಂತಲಾ, ಸವಿತಾ, ರೋಹಿಣಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-36-1350125984</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಸೀಕೆರೆ: ನಗರದ ಇನ್ನರ್ ವೀಲ್ ಕ್ಲಬ್ ವತಿಯಿಂದ ಅಧ್ಯಕ್ಷೆ ರಂಜಿತಾ ನೇತೃತ್ವದಲ್ಲಿ ಪದಾಧಿಕಾರಿಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಮಿಕರ ಬಗ್ಗೆ ಕೇವಲ ಕಾರ್ಮಿಕ ದಿನಾಚರಣೆ ದಿನಕ್ಕೆ ಕಳಕಳಿ ಸೀಮಿತವಾಗಬಾರದು ಎಂಬ ಆಶಯದೊಂದಿಗೆ ಕಟ್ಟಡ ನಿರ್ಮಾಣ ಕಾರ್ಮಿಕರು ಕೆಲಸದಲ್ಲಿ ತೊಡಗಿರುವ ಸ್ಥಳಕ್ಕೆ ತೆರಳಿ ಮಧ್ಯಾಹ್ನದ ಉಪಾಹಾರವನ್ನು ನೀಡಿ, ಕಾರ್ಮಿಕರಿಗೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಆತ್ಮಸ್ಥೈರ್ಯ ತುಂಬಿದರು.</p>.<p>ಕಾರ್ಮಿಕರು ದುಶ್ಚಟಗಳಿಗೆ ದಾಸರಾಗಬಾರದು. ಇದರಿಂದ ಕುಟುಂಬದ ನೆಮ್ಮದಿ ಹಾಳಾಗುತ್ತದೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ತಿಳಿ ಹೇಳಿದರು.</p>.<p>ಇತ್ತೀಚಿಗೆ ಶಾಲಾ– ಕಾಲೇಜು ವಿದ್ಯಾರ್ಥಿಗಳು ಮಾದಕವಸ್ತುಗಳ ಬಳಕೆ ಮಾಡುತ್ತಿದ್ದು, ಆರೋಗ್ಯದ ಮೇಲೆ ಮತ್ತು ಓದಿನ ಮೇಲೆ ದುಷ್ಪರಿಣಾಮ ಆಗುತ್ತಿದ್ದು, ಈ ನಿಟ್ಟಿನಲ್ಲಿಯೂ ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲಾ– ಕಾಲೇಜುಗಳಿಗೆ ಜಾಗೃತಿ ಫಲಕವನ್ನು ಅಳವಡಿಸುವ ಕಾರ್ಯ ಮಾಡಲಾಯಿತು. ಅರಸೀಕೆರೆ ನಗರದ ಗ್ರಾಮ ದೇವತೆಗಳಾದ ಕರಿಯಮ್ಮ, ಮಲ್ಲಿಗೆಮ್ಮ ಜಾತ್ರಾ ಮಹೋತ್ಸವದಲ್ಲಿಯೂ ದೇವಾಲಯ ಆವರಣದಲ್ಲಿ ಭಕ್ತರು ಬಿಸಿಲಿನ ಬೇಗೆಯಿಂದ ದಣಿವಾರಿಸಿಕೊಳ್ಳಲು ಮಜ್ಜಿಗೆ, ಕೋಸಂಬರಿ ಹಾಗೂ ಬೀಸಣಿಗೆಗಳನ್ನು ವಿತರಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಕ್ಲಬ್ ಅಧ್ಯಕ್ಷೆ ರಂಜಿತಾ, ನಮ್ಮ ಕ್ಲಬ್ ಸಮಾಜಮುಖಿಯಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಪರಿಸರ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯುತ್ತಿವೆ ಎಂದರು.</p>.<p>ಕ್ಲಬ್ನ ಪದಾಧಿಕಾರಿಗಳಾದ ಲಕ್ಷ್ಮಿ , ಶೀಲಾ, ಓಂಕಾರಮ್ಮ, ನಾಗರತ್ನಮ್ಮ, ಸಂಧ್ಯಾ, ಶ್ವೇತಾ, ಶಕುಂತಲಾ, ಸವಿತಾ, ರೋಹಿಣಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-36-1350125984</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>